ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು: ವಿಷಯ ತಿಳಿದು ಕೊನೆಯುಸಿರೆಳೆದ ಅಜ್ಜಿ!
Team Udayavani, Apr 9, 2021, 11:11 AM IST
ಮಡಿಕೇರಿ: ನಾಪತ್ತೆಯಾಗಿದ್ದ ಮೊಮ್ಮಗ ಶವವಾಗಿ ದೊರೆತಿದ್ದನ್ನು ಕಂಡು ಆತನ ಅಜ್ಜಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹೊಸತೋಟದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ತನ್ನ ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದ ವಿದ್ಯಾರ್ಥಿ ಮುಬಾಶೀರ್ (18) ಗುರುವಾರ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಸ್ನೇಹಿತರೊಂದಿಗೆ ಪ್ರಶ್ನಿಸಿದಾಗ ಸುಂಟಿಕೊಪ್ಪ ಸಮೀಪ ಹೊಸತೋಟದ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕೆಂದು ನೀರಿಗಿಳಿದ ಮುಬಾಶೀರ್ ಮತ್ತೆ ಮೇಲೆ ಬಾರದೆ ಇರುವುದನ್ನು ತಿಳಿಸಿದ್ದಾರೆ.
ಇದನ್ನೂ ಓದಿ:ಪುತ್ತೂರು: ಮೊಬೈಲ್ ಫೋನ್ ಸುಟ್ಟು ಹಾಕಿ ರಿಕ್ಷಾ ಚಾಲಕ ಆತ್ಮಹತ್ಯೆ!
ಮೊಮ್ಮಗ ನೀರು ಪಾಲಾದ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಅಜ್ಜಿ ರುಕಿಯಾ (62 ವ) ಕುಸಿದು ಬಿದ್ದು ಮೃತಪಟ್ಟರು. ರಾತ್ರಿ ವೇಳೆ ಹಾರಂಗಿ ಹಿನ್ನೀರಿನಲ್ಲಿ ಮುಬಾಶೀರ್ ಮೃತದೇಹ ಹುಡುಕಾಡಲು ಸಾಧ್ಯವಾಗದ ಕಾರಣ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭ ಮೃತದೇಹ ದೊರೆತ್ತಿದ್ದು, ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಶೋಪಿಯಾನ್, ಅವಂತಿಪೊರದಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ, ನಾಲ್ವರು ಯೋಧರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ