ಶ್ಮಶಾನದ ಜಾಗ ಒತ್ತುವರಿ: ಗ್ರಾಮಸ್ಥರಿಂದ ತೆರವು ಕಾರ್ಯಾಚರಣೆ


Team Udayavani, Jul 12, 2019, 5:57 AM IST

mashana

ಶನಿವಾರಸಂತೆ :ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ.ಗೆ ಸೇರಿದ ದೊಡ್ಡ ಕುಂದ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರಿಗೆ ಸೇರಿದ ಶ್ಮಶಾನದ ಜಾಗವನ್ನು ಗ್ರಾ.ಪಂ.ಯ ಹಾಲಿ ಉಪಾಧ್ಯಕ್ಷ ಆಹಮ್ಮದ್‌ಮೋಣು ಎಂಬುವರು 1 ವಾರದ ಹಿಂದೆ ಗ್ರಾಮಸ್ಥರ ಅರಿವಿಗೆ ಬಾರದೆ ಶ್ಮಶಾನಕ್ಕೆ ಸೇರಿದ ಜಾಗಕ್ಕೆ ಬೇಲಿ ನಿರ್ಮಿಸಿ ಅತಿಕ್ರಮಿಸಿದ್ದರು ಈ ಹಿನ್ನೆಲೆಯಲ್ಲಿ ಬುಧವಾರ ದೊಡ್ಡಕುಂದ, ರಾಮೇನಹಳ್ಳಿ ಮತ್ತು ಕಿರಿಕೊಡ್ಲಿ ಗ್ರಾಮಸ್ಥರು ಅತಿಕ್ರಮಿಸಿದ ಜಾಗವನ್ನು ತೆರವುಗೊಳಿಸಿದರು.

ದೊಡ್ಡಕುಂದ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಪರಿಶಿಷ್ಟ ಜಾತಿ ಸಮೂದಾಯದವರು 2 ಏಕರೆ ಜಾಗವನ್ನು ಶ್ಮಶಾನ ಕಾರ್ಯಕ್ಕಾಗಿ ಮೀಸಲಿಟ್ಟಿದ್ದರು ಇದೆ ಶ್ಮಶಾನಕ್ಕೆ ಸೇರಿದ ಜಾಗದಲ್ಲಿ ಪಕ್ಕದ ರಾಮೇನಹಳ್ಳಿ ಮತ್ತು ಕಿರಿಕೊಡ್ಲಿ ಗ್ರಾಮದ ಪರಿಶಿಷ್ಟ ಜಾತಿ ಸಮೂದಾಯದವರು ಅಂತ್ಯ ಸಂಸ್ಕಾರ ನಡೆಸುತ್ತಾರೆ. ಹಲವಾರು ದಶಕಗಳಿಂದ ಶ್ಮಶಾನಕ್ಕಾಗಿ ಮೀಸಲಿಟ್ಟಿದ ಜಾಗವನ್ನು ಒಂದು ವಾರದ ಹಿಂದೆ ಬ್ಯಾಡಗೊಟ್ಟ ಗ್ರಾ.ಪಂ.ಉಪಾಧ್ಯಕ್ಷ ಅಹಮದ್‌ಮೋಣು ಎಂಬಾತ ಬೇಲಿ ನಿರ್ಮಿಸಿಕೊಂಡು ಒತ್ತುವರಿ ಮಾಡಿ ಕೊಂಡಿದ್ದರು. ವಿಷಯ ಗ್ರಾಮಸ್ಥರಿಗೆ ತಿಳಿದು ಈ ಕುರಿತು ಸೋಮವಾರಪೇಟೆ ತಾಹಶೀಲ್ದಾರರಿಗೆ ಗ್ರಾಮಸ್ಥರು ಅಹಮದ್‌ ವಿರುದ್ಧ‌್ದ ದೂರುನೀಡಿ ಜಾಗವನ್ನು ತೆರವುಗೊಳಿಸಿಕೊಡುವಂತೆ ಮನವಿ ಮಾಡಿದ್ದರು. ಅದರಂತೆ ತಹಶೀಲ್ದಾರರು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ಸೇರಿದ ಶ್ಮಶಾನದ ಜಾಗವನ್ನು ಒತ್ತುವರಿ ಮಾಡಿದ್ದ ಅಹಮದ್‌ಗೆ ಜಾಗವನ್ನು ತೆರವುಗೊಳಿಸುವಂತೆ ಸೂಚಿಸಿದ್ದರು. ಆದರೂ ಸಹ ಶ್ಮಶಾನ ಅಹಮದ್‌ ಅತಿಕ್ರಮಿಸಿದ ಜಾಗವನ್ನು ತೆರವುಗೊಳಿಸಿದಿದ್ದ ಹಿನ್ನೆಲೆ ಯಲ್ಲಿ ದೊಡ್ಡಕುಂದ, ರಾಮೇನಹಳ್ಳಿ ಮತ್ತು ಕಿರಿಕೊಡ್ಲಿ ಗ್ರಾಮಸ್ಥರು ಎಲ್ಲಾರೂ ಒಂದಾಗಿ ಒತ್ತುವರಿ ಮಾಡಿಕೊಂಡಿದ್ದ ಶ್ಮಶಾನ‌ಕ್ಕೆ ಸೇರಿದ ಜಾಗವನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಿದರು.

ತೆರವು ಕಾರ್ಯಾಚರಣೆಯಲ್ಲಿ ಉಭಯ ಗ್ರಾಮಗಳ ಪ್ರಮುಖರಾದ ಶಿವಣ್ಣ ಮಾಸ್ತರ್‌, ಜವರೇಗೌಡ, ಬಿ.ಕೆ.ವಸಂತ್‌, ಬಿ.ಕೆ.ಮಧು, ಬಿ.ಜೆ.ರಾಜು, ಜರ್ನಾದ‌ನ್‌, ಜೆ.ಆರ್‌.ವೇದ‌ಕುಮಾರ್‌ ,ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.