Madikeri ವಿರಾಜಪೇಟೆಯಲ್ಲಿ ಗಾಂಜಾ ದಂಧೆ; ನಾಲ್ವರ ಸೆರೆ
Team Udayavani, Oct 28, 2023, 9:25 PM IST
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿರಾಜಪೇಟೆ ನಿವಾಸಿಗಳಾದ ಮಹಮ್ಮದ್ ಆಲಿ ಕಲ್ಲುಬಾಣೆ (54), ಸಂದೀಪ ಜಂಗ್ಲಿ ಅರಸು ನಗರ (28), ಅಶೋಕ ಬಿಳುಗುಂದ (50) ಹಾಗೂ ಮಹೇಶ ಸುಂಕದಕಟ್ಟೆ (35) ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳ ಬಳಿಯಿಂದ 1.12 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಹಿನ್ನೆಲೆ ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್. ಮೋಹನ್ ಕುಮಾರ್, ವಿರಾಜಪೇಟೆ ವೃತ್ತದ ಬಿ. ಎಸ್.ಶಿವರುದ್ರಪ್ಪ, ಪಿಎಸ್ಐಗಳಾದ ರವೀಂದ್ರ, ಗಣಪತಿ ಪಿ.ಕೆ. ಹಾಗೂ ಸಿಬಂದಿ ತನಿಖೆ ಕೈಗೊಂಡು ದಾಳಿ ನಡೆಸಿದರು.
ನೈತಿಕ ಪೊಲೀಸ್ ಗಿರಿಯ ಕುರಿತು
ಸುಳ್ಳು ಸುದ್ದಿ: ಪೊಲೀಸರ ಎಚ್ಚರಿಕೆ
ಮಡಿಕೇರಿ: ನಾಪೋಕ್ಲು ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.
ಕೋಮು ಸೌಹಾರ್ದತೆಗೆ ದಕ್ಕೆ ತರುವ ಯತ್ನ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವವರ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ವ್ಯಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತು ಟ್ವಿಟರ್ ಮೂಲಕ ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಹರಡಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ