ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಿಸಿ


Team Udayavani, Aug 30, 2019, 5:19 AM IST

GANESHA-2

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ನಾನಾ ಕಾರಣದಿಂದಾಗಿ ಪರಿಸರ ಹಾಳಾಗುತ್ತಿದೆ. ಜಲಮೂಲಗಳು ಕಲುಷಿತಗೊಳ್ಳುತ್ತಿದೆ. ಸ್ವತ್ಛ ಪರಿಸರ ಹಾಗೂ ಜಲ ಮೂಲಗಳು ಉಳಿಯಬೇಕಾದರೆ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸುವುದು ಅನಿವಾರ್ಯ ಎಂದು ಪತ್ರಕರ್ತ ಹಾಗೂ ಕೊಡಗು ಪ್ರಸ್‌ಕ್ಲಬ್‌ ಉಪಾಧ್ಯಕ್ಷ ವಿಘ್ನೇಶ್ ಭೂತನಕಾಡು ಹೇಳಿದ್ದಾರೆ.

ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್‌ನಿಂದ ಬುಧವಾರ ನಡೆದ ಪರಿಸರ ಸ್ನೇಹಿ ಗಣೇಶ ಹಬ್ಬ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಪ್ಲಾಸ್ಟರ್‌ ಆಫ್ ಪ್ಯಾರಿಸ್‌(ಪಿಒಪಿ) ಹಾಗೂ ರಾಸಾಯನಿಕ ಬಣ್ಣದಿಂದ ತಯಾರಿಸಿ ರುವ ಗೌರಿ ಗಣೇಶ ಮೂರ್ತಿ ಗಳನ್ನು ನದಿ, ಹೊಳೆ, ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲ ಗಳಿಗೆ ವಿಸರ್ಜಿಸಿದಾಗ ನೀರು ಕಲುಷಿತ ಗೊಳ್ಳುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣು ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಸರ್ಜಿಸ ಬೇಕು. ಈ ಮೂಲಕ ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿಸಲು ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದರು.
ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕಾಳಜಿ ಮೂಡಿಬರಬೇಕು. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಗಣೇಶ ಮೂರ್ತಿಗಳ ವಿಸರ್ಜನೆ ಯಿಂದಾಗಿ ಜಲಮೂಲಗಳಿಗೆ ಹಾನಿಯಾಗುತ್ತಿದೆ. ಇದರಿಂದ ಕಳೆದೆರಡು ವರ್ಷದಿಂದ ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಿಸಲಾಗುತ್ತಿದ್ದರೂ ಅಷ್ಟಾಗಿ ಪರಿಣಾಮಕಾರಿಯಾಗಿಲ್ಲ ಎಂದರು.

ಶಾಲೆಯ ಮುಖ್ಯೋಪಾಧ್ಯಾಯ ಶಿವರಾಮ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಸಾಯನಿಕ ವಸ್ತುಗಳಿಂದ ಮಾಡಲ್ಪಟ್ಟ ಗಣೇಶ ಮೂರ್ತಿಯನ್ನು ನದಿ, ಹೊಳೆಯಲ್ಲಿ ವಿಸರ್ಜನೆ ಮಾಡಬಾರದರು. ಗಣೇಶನ ಮೂರ್ತಿ ಆಕರ್ಷಣೆಯಾಗಿರಲೆಂದು ವಿವಿಧ ಬಣ್ಣಗಳನ್ನು ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಲಾಗುತ್ತದೆ. ಇದರಿಂದ ವಿಷಕಾರಿ ಅಂಶಗಳು ಜಲ ಮೂಲಕ್ಕೆ ಸೇರುತ್ತದೆ. ಈ ನೀರನ್ನು ನಾವು ಕುಡಿದರೆ ರೋಗ ಹರಡುವುದು ಖಚಿತವಾಗಿದೆ. ಆದ್ದರಿಂದ ಮಣ್ಣಿನಿಂದ ಮಾಡಿದ ಗಣೇಶ ಮೂರ್ತಿಯನ್ನು ಪ್ರಾಕೃತಿಕ ಬಣ್ಣ ಬಳಸಿ ಅದನ್ನು ವಿಸರ್ಜನೆ ಮಾಡಬೇಕು ಎಂದು ಸಲಹೆ ನೀಡಿದರು.

ಶಿಕ್ಷಕಿ ರೇವತಿ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಸ್ವಾತಂತ್ರ್ಯದ ಕಾಲಘಟ್ಟದಲ್ಲಿ ಎಲ್ಲರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹಬ್ಬದ ಹೆಸರಿನಲ್ಲಿ ಅಲಂಕಾರಿಕ ಗಣಪತಿ ಮೂರ್ತಿಗಳನ್ನು ತಯಾರಿಸಿ ನೀರನ್ನು ಕಲುಷಿತ ಮಾಡಲಾಗುತ್ತಿದೆ. ಇದು ಪರಿಸರಕ್ಕೆ ಮಾರಕವಾಗಿದ್ದು, ಮಕ್ಕಳು ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಹೇಳಿದರು.

ವೇದಿಕೆಯಲ್ಲಿ ಶಾಲೆಯ ಶಿಕ್ಷಕರಾದ ವತ್ಸಲ, ಜಾನಕಿ, ಇಕೋ ಕ್ಲಬ್‌ ಸಂಚಾಲಕರು ತೇಜಸ್ವಿನಿ, ಇಂದ್ರಾಣಿ, ಕಾವ್ಯ, ನಿತ್ಯ ಮತ್ತಿತರರು ಹಾಜರಿದ್ದರು.

ವಿದ್ಯಾರ್ಥಿಗಳು ಮಣ್ಣಿನಿಂದ ಪರಿಸರ ಸ್ನೇಹಿ ಗಣಪತಿ ಮೂರ್ತಿಯನ್ನು ಮಾಡಿದ್ದರು. ಶಾಲೆಯ ಸುಮಾರು 20ಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಕಲ್ಪನೆಯಿಂದ ಮಾಡಿದ್ದ ಬಗೆ ಬಗೆಯ ಗಣಪತಿ ಮೂರ್ತಿಗಳು ಗಮನ ಸೆಳೆದವು. ಯಾವುದೇ ರಾಸಾಯನಿಕ ಬಣ್ಣ ಬಳಸದೆ ಪ್ರಾಕೃತಿಕ ದತ್ತವಾದ ಬಣ್ಣವನ್ನು ಹಚ್ಚಿ ಪರಿಸರ ಸ್ನೇಹಿ ಗಣಪತಿ ಮೂರ್ತಿಯನ್ನೇ ಪ್ರತಿಷ್ಠಾಪಿಸಿ ಎಂಬ ಸಂದೇಶ ಸಾರಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.