ಸಹಪಾಠಿ ತಂದೆಗೆ ಅನಾರೋಗ್ಯ ವಿದ್ಯಾರ್ಥಿಗಳಿಂದ ನಿಧಿ ಸಂಗ್ರಹ
Team Udayavani, Jul 18, 2019, 5:45 AM IST
ಶನಿವಾರಸಂತೆ: ಸೋಮವಾರಪೇಟೆ ತಾಲೂಕಿನ ಮಾದಪುರ ಗ್ರಾಮದ ನಿವಾಸಿ ಹರೀಶ್ ಎಂಬುವರು ಇತ್ತೀಚಿಗೆ ಹಾಸನಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ಸಕಲೇಶಪುರದ ಆನೆಮಾಲು ಗ್ರಾಮದ ಬಳಿ ಎದುರಿಗೆ ಬರುತ್ತಿದ್ದ ಬಸ್ಸೊಂದಕ್ಕೆ ಢಿಕ್ಕಿ ಸಂಭವಿಸಿದ ಪರಿಣಾಮ ಹರೀಶ್ ತೀವ್ರವಾಗಿ ಗಾಯಗೊಂಡು ಹಾಸನದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳು ಹರೀಶ್ ಚಿಕಿತ್ಸೆಗಾಗಿ 6 ಲಕ್ಷ ರೂ ವೆಚ್ಚವಾಗುವುದ್ದರಿಂದ ಬಡ ಕುಟುಂಬದ ಹರೀಶ್ ಕುಟುಂಬ ಚಿಕಿತ್ಸೆಗಾಗಿ ಸಾರ್ವಜನಿಕರಿಂದ ಧನ ಸಹಾಯ ಕೋರಿತು. ಹರೀಶ್ ಚಿಕಿತ್ಸೆಗಾಗಿ ಇನ್ನು 3 ಲಕ್ಷ ರು ಬೇಕಾಗುವ ಹಿನ್ನೆಲೆಯಲ್ಲಿ ಮಾದಪುರ ಪದವಿ ಪೂರ್ವ ಕಾಲೇಜ್ವೊಂದರಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿಯಾಗಿರುವ ಹರೀಶ್ ಪುತ್ರಿ ಲೇಖನ ತನ್ನ ಸಹಪಾಠಿಗಳೊಂದಿಗೆ ಕಾಲೇಜಿನ ಆಡಳಿತ ಮಂಡಳಿ ಅನುಮತಿ ಪಡೆದುಕೊಂಡು ಸೋಮವಾರಪೇಟೆ ತಾಲೂಕಿನ ಕೆಲವು ಹೋಬಳಿ ಕೇಂದ್ರಗಳಿಗೆ ತೆರಳಿ ಸಾರ್ವಜನಿಕರಿಂದ ತಂದೆಯ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡುತ್ತಿದ್ದಾರೆ.
ಹರೀಶ್ ಪುತ್ರಿ ಲೇಖನ ಮತ್ತು ಸಹಪಾಠಿಗಳು ತಾಲೂಕಿನ ಶುಂಠಿ ಕೊಪ್ಪ, ಕುಶಾಲನಗರ, ಸೋಮ ವಾರಪೇಟೆ, ಕೊಡ್ಲಿಪೇಟೆ ಮತ್ತು ಶನಿವಾರಸಂತೆ ಪಟ್ಟಣಗಳಿಗೆ ತೆರಳಿ ನಿಧಿ ಸಂಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ