ಕಾಫಿ ಬೆಳೆಗಾರರಿಗೆ ವಂಚನೆ : ಸೂದನ ಈರಪ್ಪ ಆರೋಪ


Team Udayavani, Mar 13, 2017, 4:18 PM IST

Z-SOODANA-ERAPPA.jpg

ಮಡಿಕೇರಿ: ಮುಕ್ತ ಮಾರುಕಟ್ಟೆಯಾದ ನಂತರ ಕಾಫಿಯ ದರ ಹೆಚ್ಚಾದರೂ ಕೆಲವು ವ್ಯಾಪಾರಿಗಳು ನಾನಾ ವಿಧದಲ್ಲಿ ಬೆಳೆಗಾರರನ್ನು ವಂಚಿಸುತ್ತಾ ಬಂದಿದ್ದಾರೆ. ಕೇಂದ್ರ ಸರಕಾರ ನೋಟು ಅಮಾನ್ಯಗೊಳಿಸಿದ ನಂತರವಂತೂ ಈ ಬೆಳವಣಿಗೆ ಹೆಚ್ಚಾಗಿದ್ದು, ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಬೆಳೆಗಾರ ಹಾಗೂ ಸಮಾಜ ಸೇವಕರಾದ ಸೂದನ ಈರಪ್ಪ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಕೆಲವು ವರ್ಷಗಳಿಂದ ಕಾಫಿಗೆ “ಔಟ್‌ ಟರ್ನ್’ ಮತ್ತು “ಮಾಕ್ಸರ್‌’ ಎಂಬ ಆಂಗ್ಲ ಪದಗಳು ಹುಟ್ಟಿಕೊಂಡಿದ್ದು, ಈ ಎರಡು ಮಾರಕ ಶಬ್ದಗಳ ಬಗ್ಗೆ ಶೇ.90ರಷ್ಟು ಮುಗ್ಧ ಬೆಳೆಗಾರರಿಗೆ ಮಾಹಿತಿ ಇಲ್ಲ. ಈ ಎರಡು ಪದಗಳೇ ಬೆಳೆಗಾರರನ್ನು ವಂಚಿಸುತ್ತಿರುವುದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ವ್ಯಾಪಾರಿಗಳು ಕಾಫಿಯನ್ನು ಪರೀಕ್ಷಿಸುತ್ತಾರೆ ಮತ್ತು ದರವನ್ನು ನಿಗದಿ ಮಾಡುತ್ತಾರೆ. ಮನೆಯಲ್ಲಿ ಔಟ್‌ಟರ್ನ್ ಯಂತ್ರದಲ್ಲಿ ಕಾಫಿಯನ್ನು ಪರೀಕ್ಷಿಸಿದಾಗ 28 ಕೆಜಿ ತೂಗುವ ಕಾಫಿ ವ್ಯಾಪಾರಿಗಳ ಔಟ್‌ ಟರ್ನ್ ನಲ್ಲಿ 27 ಕೆಜಿ ಮಾತ್ರ ತೂಗುತ್ತದೆ. ಇದರಿಂದ 1 ಕೆಜಿ ಕಾಫಿ ಬೇಳೆಯ ಬೆಲೆ ರೂ.135ರ ಪ್ರಕಾರ ಬೆಳೆಗಾರರಿಗೆ ನಷ್ಟ ಉಂಟಾಗುತ್ತದೆ.
 ತುರ್ತು ಸಂದರ್ಭಗಳಲ್ಲಿ ಬಡ, ಮಧ್ಯಮ ವರ್ಗದ ಬೆಳೆಗಾರರು ಕಾಫಿ ಮಾರಲು ಹೋದರೆ ಆ ಕಾಫಿಗೆ ಔಟ್‌ ಟರ್ನ್ ಬೇಡ ಎಂದು ವ್ಯಾಪಾರಿಗಳು ಸಮಜಾಯಿಷಿಕೆ ನೀಡಿ ದರ ನಿಗದಿಪಡಿಸುತ್ತಾರೆ. ಈ ರೀತಿ ಮಾಡುವುದರಿಂದಲೂ ಬೆಳೆಗಾರರಿಗೆ ನಷ್ಟವಾಗುತ್ತಿದೆ. 

10-20 ಚೀಲ ಕಾಫಿ ಇದ್ದರೆ ಮಾತ್ರ ವ್ಯಾಪಾರಿಗಳು ಔಟ್‌ ಟರ್ನ್ ನೋಡುವ ಪರಿಸ್ಥಿತಿ ಇದೆ. ಒಂದು ಚೀಲ ಕಾಫಿಯ ಮಾರುಕಟ್ಟೆದರ ಅಂದಾಜು 3,800 ರೂ. ಇದ್ದರೆ ವ್ಯಾಪಾರಿಗಳು ನೀಡುವ ದರ 3,600-3,650 ಮಾತ್ರ. ಕಾಫಿ ನೀಡಿದ ತತ್‌ಕ್ಷಣ ಹಣ ಬೇಕು ಎಂದು ಬೆಳೆಗಾರರು ಕೇಳಿದರೆ ಚೀಲವೊಂದಕ್ಕೆ ರೂ.50 ಕಡಿಮೆ ನೀಡುವುದಾಗಿ ಅಥವಾ ಬ್ಯಾಂಕ್‌ ಖಾತೆಗೆ ಜಮಾ ಮಾಡುವುದಾಗಿ ಹೇಳುತ್ತಾರೆ. 

 ವರ್ಷ ಪೂರ್ತಿ ದುಡಿದು ಹಣದ ತುರ್ತು ಅಗತ್ಯ ಇರುವ ಬೆಳೆಗಾರರು ವ್ಯಾಪಾರಿಗಳ ಮುಂದೆ ಹಣಕ್ಕಾಗಿ ಅಂಗಲಾಚಬೇಕಾದ ಪರಿಸ್ಥಿತಿ ಇದೆ. ಔಟ್‌ ಟರ್ನ್ ಮತ್ತು ಮಾಕ್ಸರ್‌ ಕುರಿತು ಕಾಫಿ ಮಂಡಳಿ ಬೆಳೆಗಾರರಿಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ ಹಾಗೂ ಬೆಳೆಗಾರರ ಮೇಲೆ ನಿಯಂತ್ರಣವಿಲ್ಲವೆಂದು ಸೂದನ ಈರಪ್ಪ ಆರೋಪಿಸಿದ್ದಾರೆ. 
 ಕೊಡಗು ಕಾಫಿ ಬೆಳೆಗಾರರ ಸಹಾಕಾರ ಸಂಘ ಕೂಡ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹಣದ ಅಗತ್ಯ ಇರುವ ಬೆಳೆಗಾರರಿಂದ ಕಾಫಿ ಖರೀದಿಸಿ ಮುಂಗಡ ಹಣ ನೀಡಿ, ಅವರುಗಳ ಕಾಫಿಯನ್ನು ಶೇಖರಣೆ ಮಾಡುವ ಕೆಲಸವನ್ನು ಕಾಫಿ ಬೆಳೆಗಾರರ ಸಹಕಾರ ಸಂಘ ಮಾಡಬೇಕು ಮತ್ತು ಬೆಳೆಗಾರರ ರಕ್ಷಣೆಗೆ ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.