ವಕ್ಫ್ ಆಸ್ತಿಯ ಸಂರಕ್ಷಣೆಗೆ ಬದ್ಧ : ಸಮಿತಿ ಅಧ್ಯಕ್ಷ ಯಾಕೂಬ್‌ ಭರವಸೆ


Team Udayavani, Nov 29, 2019, 5:39 AM IST

Z-WALKF-1

ಮಡಿಕೇರಿ: ವಕ್ಫ್ ಆಸ್ತಿಯ ಸಂರಕ್ಷಣೆ ಹಾಗೂ ಮದರಸಗಳ‌ ಅಭಿವೃದ್ಧಿಗೆ ವಕ್ಫ್ ಸಲಹಾ ಸಮಿತಿ ಮುಂದಾಗಿದ್ದು, ಎಲ್ಲಾ ಮಸೀದಿಗಳು ನಿಯಮ ಪಾಲನೆಯ ಮೂಲಕ ಸಹಕರಿಸುವಂತೆ ವಕ್ಫ್ ಸಲಹಾ ಸಮಿತಿ ಮನವಿ ಮಾಡಿದೆ.

ಕೊಡಗು ಜಿಲ್ಲಾ ವಕ್ಫ್ ಕಛೇರಿಯಲ್ಲಿ ನಡೆದ ಸಲಹಾ ಸಮಿತಿಯ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಸಮಿತಿ ಅಧ್ಯಕ್ಷ‌ ಕೆ.ಎ.ಯಾಕೂಬ್‌ ಮಾತನಾಡಿದರು.

ಜಮಾಅತ್‌ಗಳ ಸುತ್ತ ತಡೆಗೋಡೆಗಳನ್ನು ನಿರ್ಮಿಸಿ ವಕ್ಫ್ ಆಸ್ತಿಯನ್ನು ಸಂರಕ್ಷಿಸುವ ಅಗತ್ಯವಿದೆ. ಸರ್ಕಾರದಿಂದ ಒಟ್ಟು 65 ಲಕ್ಷ ರೂ. ಬಿಡುಗಡೆಯಾಗಿದ್ದು, ಮದರಸಗಳಿಗೆ 30 ಲಕ್ಷ ರೂ., ಖಬರಸ್ತಾನ್‌ ಹಾಗೂ ಇತರ ಕಾರ್ಯಕ್ರಮಗಳಿಗಾಗಿ 35 ಲಕ್ಷ ರೂ. ಹಣವನ್ನು ಹಂಚಿಕೆ ಮಾಡಲಾಗಿದೆ ಎಂದರು.

ವಕ್ಫ್ ಬೋರ್ಡ್‌ನಲ್ಲಿ ಮದರಸ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಮದರಸ ಶಿಕ್ಷಣವನ್ನು ಮೊಟಕುಗೊಳಿಸಿರುವ ವಿದ್ಯಾರ್ಥಿಗಳನ್ನು ಮರು ಸೇರ್ಪಡೆಗೊಳಿಸಬೇಕೆನ್ನುವುದು ವಕ್ಫ್ ಸಲಹಾ ಸಮಿತಿಯ ಮುಖ್ಯ ಉದ್ದೇಶವಾಗಿದೆ ಎಂದರು.

ಮದರಸ ಮತ್ತು ಮಸೀದಿಗಳ ಅಭಿವೃದ್ಧಿಗಾಗಿ ಹೆಚ್ಚು ಕಾಳಜಿ ವಹಿಸಲಾಗಿದೆ. ಈ ಹಿಂದಿನ ಸರ್ಕಾರ 50 ವಾಟರ್‌ ಫಿಲ್ಟರ್‌ಗಳನ್ನು ನೀಡಿದ್ದು, ಅದನ್ನು 46 ಮಸೀದಿಗಳಿಗೆ ಹಾಗೂ 4 ಚರ್ಚ್‌ಗಳಿಗೆ ನೀಡಲಾಗಿದೆ ಎಂದು ಯಾಕುಬ್‌ ತಿಳಿಸಿದರು.

ಕೊಡಗಿನಲ್ಲಿ ಸಂಭವಿಸಿದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ವಕ್ಫ್ ಮಂಡಳಿಗೆ ಅನುದಾನದ ಅವಶ್ಯಕತೆ ಇದ್ದು, ಈ ಬಗ್ಗೆ ಈಗಾಗಲೇ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಹೇಳಿದರು.

ವಕ್ಫ್ ಸಮಿತಿ ಕೈಗೊಂಡ ನಿರ್ಣಯದಂತೆ ಜಿಲ್ಲೆಯಲ್ಲಿರುವ ಜಮಾಅತ್‌ಗಳ ಅಭಿವೃದ್ಧಿಗಾಗಿ ಎಲ್ಲಾ ಮಸೀದಿಗಳು ಕಡ್ಡಾಯವಾಗಿ ವಕ್ಫ್ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಹಿಂದೆ ಮಾಡಿದ ಮನವಿಗೆ ಸ್ಪಂದಿಸಿ ಒಟ್ಟು 10 ಜಮಾಅತ್‌ಗಳು ಉತ್ಸಾಹದಿಂದ ನೋಂದಾಯಿಸಿಕೊಂಡಿದ್ದು, ಇದೇ ರೀತಿ ಎಲ್ಲಾ ಜಮಾಅತ್‌ಗಳು ಮುಂದೆ ಬಂದು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಯಾಕುಬ್‌ ಸಲಹೆ ನೀಡಿದರು.

ವಕ್ಫ್ ಸಲಹಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್‌ ರೆಹಮಾನ್‌, ಅಧಿಕಾರಿ ಸಹದುಲ್‌ ರೆಹಮಾನ್‌, ಸದಸ್ಯರಾದ ಎಂ.ಹೆಚ್‌.ತನ್ವೀರ್‌ ಅಹಮ್ಮದ್‌, ಅಬ್ದುಲ್‌ ಹಮೀದ್‌ ಮೌಲವಿ, ಸಿ.ಎ.ಯೂಸುಫ್, ಮೊಹಮ್ಮದ್‌ ಹಾಜಿ ಎಡಪಾಲ, ಅಬ್ದುಲ್‌ ಸಮ್ಮದ್‌, ಮೊಹಮ್ಮದ್‌ ಹಾಜಿ ಕುಂಜಿಲ, ಮೊಹಿದ್ದೀನ್‌ ಬೆಟ್ಟಗೇರಿ, ಅಬ್ದುಲ್‌ ಅಝೀಜ್‌ ರಿಜ್ವಾನ್‌, ಕೆ.ಎಂ.ಅಬ್ದುಲ್‌ ಶುಕೂರ್‌, ಮಹಮ್ಮದ್‌ ಶರೀಫ್, ಹಂಸ ಪಡಿಯಾನಿ, ಎಂ.ಬಿ.ಅಬ್ದುಲ್‌ ನಾಸಿರ್‌, ಲತೀಫ್ ಮನ್ನರ್‌, ಅಬ್ದುಲ್‌ ಅಜೀಜ್‌ ಹಾಗೂ ಕಚೇರಿ ಸಿಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.