ಶೋಧ ಕಾರ್ಯಾಚರಣೆ ವೇಳೆ ಅರಣ್ಯ ವೀಕ್ಷಕ ನಾಪತ್ತೆ


Team Udayavani, Sep 26, 2022, 1:16 AM IST

ಶೋಧ ಕಾರ್ಯಾಚರಣೆ ವೇಳೆ ಅರಣ್ಯ ವೀಕ್ಷಕ ನಾಪತ್ತೆ

ಮಡಿಕೇರಿ: ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆಯಾಗಿರುವ ಘಟನೆ ವಿರಾಜಪೇಟೆ ತಾ|ನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಬಾಳೆಲೆ ಗ್ರಾಮದ ನಿವಾಸಿ ತರುಣ್‌ (23) ನಾಪತ್ತೆಯಾದ ಅರಣ್ಯ ವೀಕ್ಷಕನಾಗಿದ್ದು, ಕಾಲು ಜಾರಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಮಾಕುಟ್ಟ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಡುವ ವಿ.ಬಾಡಗ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗಾಗಿ ಅರಣ್ಯ ವೀಕ್ಷಕ ತರುಣ್‌ ಮತ್ತು ಇತರ ನಾಲ್ವರ ತಂಡ ಸೆ. 23ರ ಸಂಜೆ ವೇಳೆ ಕೂಂಬಿಂಗ್‌ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ತರುಣ್‌ ದಿಢೀರ್‌ ಆಗಿ ನಾಪತ್ತೆಯಾಗಿದ್ದಾರೆ.

ಅರಣ್ಯ ಇಲಾಖೆ ಸಿಬಂದಿ, ಪೊಲೀಸ್‌ ಇಲಾಖೆ, ಅಗ್ನಿಶಾಮಕ ದಳ, ಬಿಟ್ಟಾಂಗಲ ಗ್ರಾ.ಪಂ. ಸದಸ್ಯರು ಸೇರಿದಂತೆ ಸ್ಥಳೀಯರು ನಾಪತ್ತೆಯಾದ ತರುಣ್‌ಗಾಗಿ ಕತ್ತಲಿನವರೆಗೆ ಹುಡುಕಾಟ ನಡೆಸಿದ್ದಾರೆ. ಆದರೆ ತರುಣ್‌ ಪತ್ತೆಯಾಗಲಿಲ್ಲ.

ಮಡಿಕೇರಿಯಿಂದ ಸೆ. 23ರ ತಡ ರಾತ್ರಿ ಎನ್‌.ಡಿ.ಆರ್‌.ಎಫ್. ಸಿಬಂದಿಯ ಒಂದು ತಂಡವನ್ನು ಸ್ಥಳಕ್ಕೆ ಕರೆಯಿಸಿಕೊಂಡು ಅರಣ್ಯದಲ್ಲಿ ಶೋಧ ಕಾರ್ಯ ನಡೆಸಲಾಯಿತಾದರೂ ಫ‌ಲಕಾರಿಯಾಗಿಲ್ಲ. ಹೀಗಾಗಿ ಸೆ. 24ರ ಬೆಳಗ್ಗಿನಿಂದ ವಿ.ಬಾಡಗ ವ್ಯಾಪ್ತಿಯ ನೀರುಗುಂಡಿ ಪ್ರದೇಶದ ಕೀರೆಹೊಳೆ ನದಿಯಲ್ಲಿ ಶೋಧ ಕಾರ್ಯ ಮುಂದುವರಿಸಲಾಯಿತು. ಸಂಜೆಯವರೆಗೂ ನಿರಂತರ ಶೋಧ ಕಾರ್ಯ ನಡೆಸಲಾಯಿತಾದರೂ, ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಸ್ಥಳದಲ್ಲಿ ಎನ್‌.ಡಿ.ಆರ್‌.ಎಫ್., ಅಗ್ನಿಶಾಮಕ ದಳ ಮತ್ತು ಪೊಲೀಸ್‌ ಇಲಾಖೆ ಸಿಬಂದಿ ಮೊಕ್ಕಾಂ ಹೂಡಿದ್ದು, ನಾಳೆಯೂ ಶೋಧ ಕಾರ್ಯ ನಡೆಯಲಿದೆ.

ಪೋಷಕರ ಆಕ್ರಂದನ
ತರುಣ್‌ ನಾಪತ್ತೆಯಾಗಿರುವ ಬಗ್ಗೆ ಸೆ. 23ರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ತಮ್ಮನ್ನು ಕೂಡ ಅರಣ್ಯದೊಳಗೆ ತೆರಳಲು ಅವಕಾಶ ನೀಡುವಂತೆ ಸ್ಥಳದಲ್ಲಿದ್ದ ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದರು. ಮಾಕುಟ್ಟ ದಟ್ಟ ಅರಣ್ಯವಾಗಿದ್ದು, ತರುಣ್‌ ನಾಪ್ತತೆಯಾದ ಪ್ರದೇಶ ದುರ್ಗಮ ಸ್ಥಳವಾಗಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳುವುದು ಸೂಕ್ತವಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅವರ ಮನವೊಲಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.