ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!


Team Udayavani, Jan 5, 2022, 7:10 AM IST

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

ಸಾಂದರ್ಭಿಕ ಚಿತ್ರ.

ಮಡಿಕೇರಿ: ಕೊಕ್ಕೆ ಚಾಕು ಹಿಡಿದು ವೃದ್ಧರೇ ಇರುವ ಮನೆಗಳಿಗೆ ನುಗ್ಗುವ ಮುಸುಕುಧಾರಿ ವ್ಯಕ್ತಿಯ ಬಗ್ಗೆ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಆತಂಕ ಮೂಡಿದೆ. ಒಂದು ವರ್ಷದಲ್ಲಿ ಗ್ರಾಮದ ನಾಲ್ಕು ಮನೆಗಳಿಗೆ ನುಗ್ಗಿರುವ ಈತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಲೇ ಇದ್ದಾನೆ.

2021ರ ಡಿ. 28ರಂದು ನಾಲ್ಕೇರಿ ಗ್ರಾಮದಲ್ಲಿ ಕೊಕ್ಕೆ ಚಾಕು ವ್ಯಕ್ತಿಯಿಂದ ದಾಳಿಗೊಳಗಾದ ಬೆಳೆಗಾರ ಸುಳ್ಳಿಮಾಡ ಪಿ. ತಿಮ್ಮಯ್ಯ ಅವರ ಪುತ್ರ ಸುಳ್ಳಿಮಾಡ ಟಿ.ಪೊನ್ನಪ್ಪ ಅವರು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್‌ ನಾಣಯ್ಯ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರಿಗೆ ಮಂಗಳವಾರ ದೂರು ಸಲ್ಲಿಸಿದರು.

ಪೊಲೀಸರು ತನಿಖೆಯನ್ನು ವಿಳಂಬ ಮಾಡು ತ್ತಿರುವ ಕಾರಣದಿಂದಲೇ ಆಗಂತುಕನ ದಾಳಿ ನಿರಂತರ ವಾಗಿದೆ ಎಂದು ಪೊನ್ನಪ್ಪ ಆರೋಪಿಸಿದ್ದಾರೆ.

ಇದನ್ನೂ ಓದಿ:ದಕ್ಷಿಣ ಧ್ರುವ ತಲುಪಿದ ಭಾರತೀಯ ಮೂಲದ ಕ್ಯಾಪ್ಟನ್‌ ಹರ್‌ಪ್ರೀತ್‌ ಚಾಂದಿ!

ನಾಲ್ಕು ನಾಯಿಗಳೂ ಬೊಗಳಲಿಲ್ಲ!
ನಾಲ್ಕೇರಿ ಗ್ರಾಮದಲ್ಲಿ ವೃದ್ಧರೇ ಇರುವ ಮನೆಗಳನ್ನು ಗುರಿಯಾಗಿಸಿ ಈತ ದಾಳಿ ಮಾಡುತ್ತಿದ್ದಾನೆ. ನನ್ನ ತಂದೆ ತಿಮ್ಮಯ್ಯ ಹಾಗೂ ತಾಯಿ ಪಾರ್ವತಿ ಅವರು ಮನೆಯಲ್ಲಿದ್ದಾಗ ಡಿ.28ರಂದು ಮಧ್ಯಾಹ್ನ ಆತ ದಿಢೀರ್‌ ಪ್ರವೇಶಿಸಿದ್ದಾನೆ. ತಾಯಿಗೆ ಕೊಕ್ಕೆ ಚಾಕು ತೋರಿಸಿ ಬೆದರಿಸಿ, ಕೋಣೆಯಲ್ಲಿದ್ದ ತಂದೆ ಬಂದು ಗದರಿದಾಗ ಇಬ್ಬರಿಗೂ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ತಂದೆ ತೀವ್ರವಾಗಿ ಗಾಯಗೊಂಡಿದ್ದು, ತಾಯಿ ಜೋರಾಗಿ ಕಿರುಚಿಕೊಂಡಾಗ ಆತ ಕಾಲ್ಕಿತ್ತಿದ್ದಾನೆ. “ದುಡ್ಡು, ದುಡ್ಡು, ರಕ್ತ’ ಎಂದಷ್ಟೇ ಈತ ಹೇಳುತ್ತಿರುತ್ತಾನೆ. ಮನೆಯಲ್ಲಿ ನಾಲ್ಕು ನಾಯಿಗಳಿದ್ದು, ಅಪರಿಚಿತ ಬಂದರೂ ಬೊಗಳ ದಿರುವುದು ಆಶ್ಚರ್ಯ ಮೂಡಿಸಿದೆ ಎಂದು ಪೊನ್ನಪ್ಪ ಅವರು ತಿಳಿಸಿದ್ದಾರೆ.

ತೇಲಪಂಡ ಶಿವಕುಮಾರ್‌ ನಾಣಯ್ಯ ಮಾತನಾಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕಳ್ಳನ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಗೃಹ ಸಚಿವರಿಗೆ ದೂರು ನೀಡಬೇಕಾಗುತ್ತದೆ ಎಂದರು.

ಆತನ ಬಂಧನಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಯ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.