ಅಭಿವೃದ್ಧಿ ಹೆಸರಿನಲ್ಲಿ ಮರಗಳ ಹನನ: ಕಾವೇರಿಸೇನೆ ಅಸಮಾಧಾನ
Team Udayavani, Jan 24, 2020, 12:00 AM IST
ಮಡಿಕೇರಿ: ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ನವಗ್ರಾಮ ನಿರ್ಮಾಣಕ್ಕೆಂದು ನೂರಾರು ಮರಗಳನ್ನು ಹನನ ಮಾಡಲಾಗುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಾವೇರಿಸೇನೆ ಸಂಘಟನೆ ಜಿಲ್ಲಾ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಕುಶಾಲನಗರದ ಬಸವನಹಳ್ಳಿಯ ಸರ್ವೇ ನಂಬರ್ 1/1ರ ಸರ್ಕಾರಿ ಜಾಗದಲ್ಲಿ ನವಗ್ರಾಮ ನಿರ್ಮಾಣಕ್ಕೆಂದು ನೂರಾರು ಮರಗಳನ್ನು ಕಡಿಯುವುದರಿಂದ ಅಲ್ಲಿರುವ ಅಣೆಕಟ್ಟೆ ಮತ್ತು ನದಿಯ ನೀರಿನ ಮೂಲಕ್ಕೆ ಧಕ್ಕಯಾಗಲಿದ್ದು, ಅರಣ್ಯ ಸಂರಕ್ಷಣೆಗೂ ಚ್ಯುತಿಯಾಗಲಿದೆ ಎಂದು ಆರೋಪಿಸಿದ ಪ್ರತಿಭಟನಕಾರರು ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಬೊಳ್ಳೂರು ಗ್ರಾಮದಲ್ಲಿ 99.40 ಎಕರೆ ಜಾಗವಿದ್ದು, ಅಲ್ಲಿ ಅಕ್ರಮವಾಗಿ ನೂರಾರು ಮನೆಗಳು ತಲೆ ಎತ್ತಿವೆ. ಈ ಜಾಗವು ಅರಣ್ಯ ಇಲಾಖೆಗೆ ಸಂಬಂಧಪಟ್ಟ ಜಾಗವಾಗಿದ್ದರೂ ಅರಣ್ಯ ಇಲಾಖೆಯ ಸಿಬಂದಿ ಈ ಅಕ್ರಮವನ್ನು ಕಂಡೂ ಕಾಣದಂತೆ ನಿದ್ರಾವಸ್ಥೆಗೆ ಜಾರಿರುವುದು ಕಂಡು ಬಂದಿದೆ ಎಂದು ರವಿಚಂಗಪ್ಪ ಆರೋಪಿಸಿದರು. ಮರ ಕಡಿಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಅವರು, ಈ ಬಗ್ಗೆ ಸ್ಪಂದಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾವೇರಿಸೇನೆ ಸಂಚಾಲಕ ರವಿ ಚಂಗಪ್ಪ, ಎಚ್ಚರಿಕೆ ನೀಡಿದರು.
ಕಡಿಯಬಾರದು
ಈ ಸಂದರ್ಭ ಮಾತನಾಡಿದ ಕಾವೇರಿಸೇನೆ ಸಂಚಾಲಕ ರವಿ ಚಂಗಪ್ಪ, ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ನವಗ್ರಾಮ ನಿರ್ಮಾಣಕ್ಕೆಂದು ನೂರಾರು ಮರಗಳನ್ನು ಕಡಿದು ತೊಲೆಗಳಾಗಿ ಮತ್ತು ಸೌದೆಗಳಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೇ ಬಸವನಹಳ್ಳಯಿಂದ ಅನತಿ ದೂರದಲ್ಲೇ ಹಾರಂಗಿ ಜಲಾಶಯ, ಆನೆಕಾಡು ಮೀಸಲು ಅರಣ್ಯ ಮತ್ತು ಕಾವೇರಿ ನದಿ ಇದ್ದು, ಕಳೆದ ಮೂರು ವರ್ಷಗಳ ಹಿಂದೆ ಆನೆಕಾಡು ಅರಣ್ಯಕ್ಕೆ ಬೆಂಕಿ ಬಿದ್ದು, ಸಂಪೂರ್ಣ ನಾಶವಾಗಿದ್ದು, ಮಳೆಯಿಂದಷ್ಟೇ ಕಾಡು ಚಿಗುರುತ್ತಿದೆ. ಈ ಎಲ್ಲ ಸಮಸ್ಯೆಗಳಿಂದ ಪರಿಸರಕ್ಕೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯಬಾರದು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ