![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೊಡಗಿನಲ್ಲಿ 50 ಟ್ರಾನ್ಸ್ಫಾರ್ಮರ್,550 ವಿದ್ಯುತ್ ಕಂಬಗಳಿಗೆ ಹಾನಿ
Team Udayavani, Aug 21, 2018, 6:50 AM IST
![damage-kodagu.jpg](https://www.udayavani.com/wp-content/uploads/2018/08/21/damage-kodagu.jpg)
ಬೆಂಗಳೂರು: ಕೊಡಗಿನಲ್ಲಿ ವಾರದಿಂದೀಚೆಗೆ ಸುರಿದ ಭಾರೀ ಮಳೆಗೆ 55ಕ್ಕೂ ಹೆಚ್ಚು ಟ್ರಾನ್ಸ್ಫಾರ್ಮರ್ಗಳು ಹಾಳಾಗಿದ್ದರೆ, 550ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದಿವೆ. ಗುಡ್ಡ ಪ್ರದೇಶ ಸೇರಿ ದುರ್ಗಮ ಪ್ರದೇಶಗಳಲ್ಲಿನ ಕೆಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಕಡಿತಗೊಂಡಿರುವ ಕಡೆ ದುರಸ್ತಿ ಕಾರ್ಯಕ್ಕೆ ಅಡ್ಡಿಯಾಗಿದ್ದು, ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು (ಸೆಸ್ಕ್) ಅಧಿಕಾರಿ, ನೌಕರರ ವಿಶೇಷ ತಂಡ ರಚಿಸಿ ಕಾರ್ಯಾಚರಣೆಗಿಳಿದಿದ್ದು, ಮಳೆ ಪ್ರಮಾಣ ತಗ್ಗಿದ ಕೂಡಲೇ ದುರಸ್ತಿ ಕಾರ್ಯಕ್ಕೆ ಸಿದ್ಧರಾಗಿದ್ದಾರೆ. ಮಳೆ ನಿಂತ ಬಳಿಕ ವಾರದಲ್ಲಿ ಮುರಿದ ಕಂಬಗಳು, ಹಾಳಾದ ಟ್ರಾನ್ಸ್ಫಾರ್ಮರ್ಗಳನ್ನು ಬದಲಾಯಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಕೊಡಗಿನಲ್ಲಿ ಏಪ್ರಿಲ್ನಿಂದ ಈವರೆಗೆ ಸುರಿದ ಮಳೆಗೆ 3,500 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, 282 ಟ್ರಾನ್ಸ್ಫಾರ್ಮರ್ ಹಾಳಾಗಿವೆ. ಇದರಲ್ಲಿ ಶೇ.80ರಷ್ಟು ದುರಸ್ತಿ ಕಾರ್ಯ ಪೂರ್ಣಗೊಂಡಿತ್ತು. ವಾರದಿಂದೀಚೆಗೆ ಸುರಿದ ಭಾರಿ ಮಳೆಗೆ 550 ವಿದ್ಯುತ್ ಕಂಬ ಹಾಗೂ 50ಕ್ಕೂ ಅಧಿಕ ಟ್ರಾನ್ಸ್ಫಾರ್ಮರ್ಗಳಿಗೆ ಹಾನಿಯಾಗಿದೆ. ಇತ್ತೀಚೆಗೆ ಬದಲಾಯಿಸಿದ್ದ ಕಂಬಗಳು ಮತ್ತೆ ಹಾನಿಗೊಳಗಾಗಿವೆ ಎಂದು ಸೆಸ್ಕ್ ನಿರ್ದೇಶಕ (ತಾಂತ್ರಿಕ) ಎನ್. ನರಸಿಂಹೇಗೌಡ “ಉದಯವಾಣಿ’ಗೆ ತಿಳಿಸಿದರು.
ಈಗಾಗಲೇ ಮೈಸೂರು, ಮಂಡ್ಯ, ಹಾಸನದಿಂದ ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಟ್ರಾನ್ಸ್ಫಾರ್ಮರ್ಗಳು, ವಿದ್ಯುತ್ ಕಂಬ ಸೇರಿದಂತೆ ಇತರೆ ಸಲಕರಣೆಗಳು ಅಗತ್ಯ ಪ್ರಮಾಣದಲ್ಲಿ ಯಾವುದಕ್ಕೂ ಕೊರತೆ ಇಲ್ಲ ಎಂದು ಹೇಳಿದರು.
ವಾರದಲ್ಲಿ ಸಂಪೂರ್ಣ ದುರಸ್ತಿ: ಗುಡ್ಡ ಕುಸಿತದಿಂದಾಗಿ ಕೆಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯಕ್ಕೆ ಅಡ್ಡಿಯಾಗಿದೆ. ಮುಕ್ಕಂದೂರು, ಕರ್ವಾಲೆ, ಸುರ್ಲಬ್ಬಿ ಸೇರಿದಂತೆ ಇತರೆ ಕೆಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಉಳಿದಂತೆ ಜಿಲ್ಲೆಯಾದ್ಯಂತ ವಿದ್ಯುತ್ ಪೂರೈಕೆ ವ್ಯವಸ್ಥೆ ಇದೆ. ಮಳೆ ನಿಂತರೆ ವಾರದಲ್ಲಿ ಇತರೆಡೆಗಳಲ್ಲೂ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.