ಕೇಂದ್ರದಿಂದ 100 ಕೋಟಿ  ನೆರವಿಗೆ ಡಿಸಿಎಂ ಮನವಿ


Team Udayavani, Aug 21, 2018, 6:35 AM IST

180820kpn67.jpg

ಮಡಿಕೇರಿ: ಕೇರಳಕ್ಕೆ 500 ಕೋಟಿ ರೂ. ನೀಡಿರುವ ಪ್ರಧಾನಿ ಮೋದಿ ಕೊಡಗು ಜಿಲ್ಲೆಯಲ್ಲಿ ಪರಿಹಾರ ಕಾರ್ಯಗಳಿಗಾಗಿ ಕನಿಷ್ಠ 100 ಕೋಟಿ ರೂ.ಗಳನ್ನಾದರೂ ಪ್ರಥಮ ಹಂತದಲ್ಲಿ ಬಿಡುಗಡೆಗೊಳಿಸಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮನವಿ ಮಾಡಿದ್ದಾರೆ.

ಪ್ರಕೃತಿ ವಿಕೋಪದಿಂದ ನಲುಗಿರುವ ಕೊಡಗಿನಲ್ಲಿ ಈವರೆಗೆ 5 ಸಾವಿರ ಮನೆಗಳು ನಾಶವಾಗಿದ್ದು, ರಾಜ್ಯ ಸರ್ಕಾರ ಸದಾ ಕೊಡಗಿನ ಜನತೆಯೊಂದಿಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯವು ಕೊಡಗಿನ ಸಮಸ್ಯೆ ಪರಿಹಾರಕ್ಕೆ ಪ್ರಥಮ ಹಂತದಲ್ಲಿ ಕನಿಷ್ಠ 100 ಕೋಟಿ ರೂ.ಗಳನ್ನು ನಿರೀಕ್ಷಿಸುತ್ತಿದೆ ಎಂದು ಹೇಳಿದರು. ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಪರಮೇಶ್ವರ್‌ ಮಡಿಕೇರಿಯಲ್ಲಿನ ನಿರಾಶ್ರಿತರ ಕೇಂದ್ರಗಳಿಗೂ ತೆರಳಿ ಅಲ್ಲಿ ಆಶ್ರಯ ಪಡೆದಿರುವ ಜನರಿಗೆ ಸಾಂತ್ವನ ಹೇಳಿದರು. ಹಾನಿ ಸ್ಥಳಕ್ಕೆ ಕೇಂದ್ರ ಸಚಿವರು ಭೇಟಿ ನೀಡದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಸಮೀಕ್ಷೆ ಸಾಧ್ಯವಾಗಿಲ್ಲ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನೆರೆ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 7 ಜನ ಸಾವನ್ನಪ್ಪಿರುವುದು ಅಧಿಕೃತವಾಗಿದ್ದರೂ ಮಣ್ಣಿನಡಿ ಇನ್ನೂ ಕೆಲವರು ಸಿಲುಕಿ ಸಾವನ್ನಪ್ಪಿರುವ ಶಂಕೆಯಿದೆ. ಈವರೆಗೆ 5 ಸಾವಿರ ಮನೆಗಳು ನಾಶವಾಗಿದ್ದು, ನಿರಾಶ್ರಿತರಿಗೆ ಮನೆಗಳನ್ನು ಹೊಸ ಬಡಾವಣೆ ನಿರ್ಮಾಣದ ಮೂಲಕ ನಿರ್ಮಿಸಿಕೊಡಲಾಗುತ್ತದೆ. ಕೊಡಗಿನಲ್ಲಿ ಸಂಭವಿಸಿರುವ ನಷ್ಟದ ಲೆಕ್ಕ ಹಾಕಲು ಇನ್ನೂ ಸಾಧ್ಯವಾಗಿಲ್ಲ ಎಂದರು.

ವೇತನದ ಪರಿಹಾರ: ಕಳೆದೆರಡು ದಿನಗಳಿಗೆ ಹೋಲಿಸಿದರೆ ಈಗಿನ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಕೊಡಗಿನ ಸಂತ್ರಸ್ತರ ಪರಿಹಾರ ನಿಧಿಗೆ ರಾಜ್ಯದ ಪೊಲೀಸ್‌ ಸಿಬ್ಬಂದಿ 1 ದಿನದ ವೇತನ  5.82 ಕೋಟಿ ರೂ. ಮತ್ತು ಅಗ್ನಿಶಾಮಕ ದಳದ 10 ಸಾವಿರ ಸಿಬ್ಬಂದಿ  1 ದಿನದ ವೇತನ ನೀಡಲಿದ್ದು ಸುಮಾರು 7 ಕೋಟಿ ರೂ. ಆರ್ಥಿಕ ಪರಿಹಾರ ನೀಡಲಿದ್ದಾರೆ ಎಂದರು. ಕೊಡಗಿಗೆ ರವಾನಿಸಿರುವ ಪರಿಹಾರ ಸಾಮಗ್ರಿಗಳು ದುರ್ಬಳಕೆಯಾಗುತ್ತಿದೆ ಎಂದು ಕೇಳಿಬಂದಿರುವ ದೂರಿನ ಬಗ್ಗೆ ಗಮನ ಹರಿಸಲಾಗುತ್ತದೆ ಎಂದರು.

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಭೂ ಕುಸಿತದಿಂದ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದಲೇ “ಫ್ರೀ ಫ್ಯಾಬ್ರಿಕ್‌’ ಮಾದರಿ ಮನೆ ನಿರ್ಮಿಸಿಕೊಡುವ ಕುರಿತು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ  ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಮನೆ, ಆಸ್ತಿ ಕಳೆದುಕೊಂಡವರ ನೆರವಿಗೆ ಸರ್ಕಾರವಿದ್ದು, ಯಾರೂ  ಧೈರ್ಯ ಕಳೆದುಕೊಳ್ಳುವುದು ಬೇಡ.
– ಡಾ.ಜಿ.ಪರಮೇಶ್ವರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.