ವರ್ಷವಿಡೀ ಕಾರ್ಯಕ್ರಮ ನಡೆಸಲು ನಿರ್ಧಾರ
Team Udayavani, Aug 12, 2017, 6:15 AM IST
ಮಡಿಕೇರಿ: ಕೊಡವರ ಆದಿ ಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವವನ್ನು ವರ್ಷವಿಡೀ ಆಚರಿಸಲು ಅಖೀಲ ಕೊಡವ ಸಮಾಜ ತೀರ್ಮಾನಿಸಿದೆ.
ಅಖೀಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯ ಅಖೀಲ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ವಿವಿಧ ಕೊಡವ ಸಮಾಜದ ಪ್ರತಿನಿಧಿಗಳು ಹಾಗೂ ಪ್ರಮುಖರ ಸಭೆಯಲ್ಲಿ ವರ್ಷವಿಡೀ ಅಪ್ಪಚ್ಚ ಕವಿಯನ್ನು ನೆನಪು ಮಾಡಿಕೊಳ್ಳುವಂತಹ ಕಾರ್ಯಕ್ರಮವನ್ನು ನಡೆಸಲು ನಿರ್ಧಾರ ತೆಗೆದುಕೊಳ್ಳಲಾಯಿತು.
ಸೆಪ್ಟಂಬರ್ ತಿಂಗಳಿನಲ್ಲಿ ಅಪ್ಪಚ್ಚ ಕವಿಯ ಜನ್ಮೋತ್ಸವವನ್ನು ಉದ್ಘಾಟಿಸಲಾಗುವುದು. ಅನಂತರ ಪ್ರತಿ ತಿಂಗಳು ಒಂದೊಂದು ಪ್ರದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಕುರಿತು ತಾತ್ಕಾಲಿಕವಾಗಿ “”ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಸಂಚಾಲಕ ಸಮಿತಿಯೊಂದನ್ನು ರಚಿಸಲಾಯಿತು. ಆ.22 ರಂದು ವಿರಾಜಪೇಟೆಯಲ್ಲಿ ಮತ್ತೂಮ್ಮೆ ಎಲ್ಲಾ ಕೊಡವ ಸಮಾಜ, ಕೊಡವ ಸಮಾಜಗಳ ಒಕ್ಕೂಟ ಪ್ರತಿನಿಧಿಗಳ ಸಭೆ ನಡೆಸಲಾಗುವುದು. ಅಲ್ಲಿ ಕಾರ್ಯಕ್ರಮಗಳ ವಿವರವನ್ನು ಚರ್ಚೆಸಿ ಅಂತಿಮಗೊಳಿಸಲಾಗುವುದು ಎಂದು ಅಖೀಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ತಿಳಿಸಿದ್ದಾರೆ. ಸಭೆಯಲ್ಲಿ ಅಖೀಲ ಕೊಡವ ಸಮಾಜದ ಖಜಾಂಚಿ ಮಂಡೇಪಂಡ ಸುಗುಣ, ಕಾರ್ಯದರ್ಶಿ ಅಮ್ಮಣಿಚಂಡ ರಾಜಾ ನಂಜಪ್ಪ, ಕೊಡವ ಸಮಾಜದ ಪ್ರತಿನಿಗಳು ಹಾಗೂ ಸಾಹಿತಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ