ರಾಜ್ಯ ಸರಕಾರದ ವರದಿಯಲ್ಲೇ ನ್ಯೂನತೆ: ಶಾಸಕದ್ವಯರ ಟೀಕೆ


Team Udayavani, Aug 16, 2017, 7:15 AM IST

Z-BOPAHIA-APPACHU.jpg

ಮಡಿಕೇರಿ: ರಾಜ್ಯ ಸರಕಾರದ ತಜ್ಞರ ಸಮಿತಿ ನ್ಯೂನತೆಯಿಂದ ಕೂಡಿದ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಪರಿಣಾಮವಾಗಿ ಡಾ| ಕಸ್ತೂರಿ ರಂಗನ್‌ ವರದಿಯ ಕುರಿತು ಹೊರಡಿಸಲಾಗಿರುವ ಆದೇಶ ಕೊಡಗು ಸೇರಿದಂತೆ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜನರಿಗೆ ಮಾರಕವಾಗಿ ಪರಿಣಮಿಸಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಬಿಜೆಪಿ ನಿಯೋಗ ಕೇಂದ್ರ ಪರಿಸರ ಖಾತೆ ಸಚಿವ ಹರಿಪ್ರಸಾದ್‌ ಅವರನ್ನು ಭೇಟಿಯಾಗಿ ಡಾ| ಕಸ್ತೂರಿ ರಂಗನ್‌ ವರದಿ ಜಾರಿಯಿಂದ ಆಗಬಹುದಾದ ಕಷ್ಟ ನಷ್ಟಗಳ ಬಗ್ಗೆ ಚರ್ಚಿಸಿದಾಗ ರಾಜ್ಯ ಸರಕಾರ ನೀಡಿದ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ತಜ್ಞರು ನೀಡಿದ ವರದಿಯನ್ನು ಕೂಡ ನಿಯೋಗದ ಮುಂದಿಟ್ಟಿದ್ದು, ಸಂಪೂರ್ಣ ನ್ಯೂನತೆಯಿಂದ ಕೂಡಿದೆ ಎಂದು ಹೇಳಿದರು.
 
ಕೇರಳ ಸರಕಾರದ ಮಾದರಿಯಲ್ಲಿ ಕರ್ನಾಟಕ ಸರಕಾ ರಕ್ಕೆ ತಕರಾರನ್ನು ಸಲ್ಲಿಸಲು ಯಾಕೆ ಸಾಧ್ಯವಾಗಿಲ್ಲವೆಂದು ಪ್ರಶ್ನಿಸಿದ ಅವರು ತಜ್ಞರ ಸಮಿತಿ ಜನಪ್ರತಿನಿಧಿಗಳು ಹಾಗೂ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ತಯಾರಿಸಬೇಕಾಗಿತ್ತು ಎಂದರು. ಕೇರಳ ಸರಕಾರಕ್ಕೆ ಜನರ ಮೇಲೆ ಇರುವ ಕಾಳಜಿ ಕರ್ನಾಟಕ ಸರಕಾರಕ್ಕಿಲ್ಲ. ಮತ್ತೆ ತಕರಾರು ಸಲ್ಲಿಸಲು ಎರಡು ವರ್ಷಗಳ ಕಾಲಾವಕಾಶ ಇರುವುದರಿಂದ ರಾಜ್ಯ ಸರಕಾರ ತತ್‌ ಕ್ಷಣ ಎಚ್ಚೆತ್ತುಕೊಂಡು ಜನಪರವಾಗಿ ಸೂಕ್ತ ರೀತಿಯಲ್ಲಿ ವರದಿಯನ್ನು ನೀಡಲಿ ಎಂದು ಕೆ.ಜಿ. ಬೋಪಯ್ಯ ಹೇಳಿದರು. ಅರಣ್ಯ ಸಚಿವರಿಗೆ ಯಾವುದೇ ಮಾಹಿತಿ ಇಲ್ಲ, ಅಧಿಕಾರಿಗಳು ಹೇಳುವುದನ್ನು ಕೇಳುತ್ತಾರೆ ಅಷ್ಟೆ ಎಂದು ಟೀಕಿಸಿದರು.

ಸೂಕ್ಷ್ಮ ಪರಿಸರ ತಾಣ ಘೋಷಣೆಯಾದಾಗ ಜಿಲ್ಲೆಯ ಶಾಸಕರು ರಾಜೀನಾಮೆ ನೀಡಲಿ ಎಂದು ಕೆಲವರು ಒತ್ತಾಯಿಸಿದ್ದರು.ಆದರೆ ರಾಜಿನಾಮೆ ನೀಡಬೇಕಾಗಿರುವುದು ನಾವಲ್ಲ, ಬದಲಿಗೆ ಜನವಿರೋಧಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮ ಯ್ಯನವರೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿ  ಎಂದು ಮಾತ್ರ ನಿರೀಕ್ಷೆ ಮಾಡುವ ಸರಕಾರ ಜಿಲ್ಲೆಯ ಜನರ ಕಣ್ಣೊರೆಸುವ ಕಾರ್ಯ ಮಾಡುತ್ತಿಲ್ಲ. ಕೇವಲ ಘೋಷಣೆಗಳಿಗಷ್ಟೇ ಸೀಮಿತವಾಗಿರುವ ಸರಕಾರದಿಂದ ವಿಶೇಷ ಪ್ಯಾಕೇಜ್‌ನ ಹಣ ಬಿಡುಗಡೆಯಾಗದೇ ಇರುವುದರಿಂದ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಗುತ್ತಿಗೆದಾರರು ಮುಂದೆ ಬರುತ್ತಿಲ್ಲವೆಂದರು. 

ಮರಗಳ ಹನನದಿಂದ ಮಳೆಯಾಗುತ್ತಿಲ್ಲವೆಂದು ಹೇಳಲಾಗುತ್ತಿದೆ. ಆದರೆ ಸ್ವಂತ ಉಪಯೋಗಕ್ಕೆ ಮರ ಕಡಿದರೆ ವಶ ಪಡಿಸಿಕೊಳ್ಳುವ ಅರಣ್ಯ ಇಲಾಖೆ ಅರಣ್ಯದೊಳಗೆ ನಿರಂತರವಾಗಿ ಮರಗಳು ಲೂಟಿಯಾಗುತ್ತಿದ್ದರೂ ಯಾಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಪ್ರಶ್ನಿಸಿದರು. ಹಾಡಿಗಳಲ್ಲಿ ಗಿರಿಜನರು ಮೂಲಭೂತ ಸೌಲಭ್ಯಗಳಿ ಲ್ಲದೆ ಸಂಕಷ್ಟದಲ್ಲಿದ್ದು, ಎಲ್ಲಾ ಕಾರ್ಯಗಳಿಗೂ ಅರಣ್ಯ ಅಧಿಕಾರಿಗಳು ಅಡ್ಡಿಯಾಗಿದ್ದಾರೆ ಎಂದು ಬೋಪಯ್ಯ ಟೀಕಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್‌ ಮಾತನಾಡಿ, ಪ್ರತಿವರ್ಷ ಜಿಲ್ಲೆಗೆ ರೂ. 50 ಕೋಟಿ ವಿಶೇಷ ಪ್ಯಾಕೇಜ್‌ ಎಂದು ಘೋಷಣೆ ಮಾಡುತ್ತಿದೆಯೇ ಹೊರತು ಕಳೆದ ನಾಲ್ಕು ವರ್ಷಗಳಲ್ಲಿ ಕೇವಲ ರೂ. 41 ಕೋಟಿಯಷ್ಟೆ ಬಿಡುಗಡೆ ಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಸರಕಾರವಿದ್ದಾಗ ಪ್ಯಾಕೇಜ್‌ ಘೋಷಣೆಯಾದ ವರ್ಷವೇ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈಗಿನ ಕಾಂಗ್ರೆಸ್‌ ಸರಕಾರ ಕೊಡಗು ಜಿಲ್ಲೆಯನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು. 
ಕಾವೇರಿ ನೀರಾವರಿ ಪ್ರದೇಶ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆಯನ್ನು ಸರಕಾರ ಕರೆದಿದ್ದು, ಕೊಡಗಿನ ನಿರ್ಲಕ್ಷ್ಯವನ್ನು ಖಂಡಿಸಿ ಸಭೆಯಲ್ಲಿ ತಾವುಗಳು ಭಾಗವಹಿಸಲಿಲ್ಲವೆಂದು ಅಪ್ಪಚ್ಚುರಂಜನ್‌ ಹೇಳಿದರು.

ಸರಕಾರದ ಕಡೆಗಣನೆಯನ್ನು ಖಂಡಿಸಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು, ಕಾಡಾನೆ ಹಾವಳಿಯನ್ನು ತಡೆಗಟ್ಟಲು ಸರಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆಂದು ಟೀಕಿಸಿದರು. ಅರಣ್ಯ ಭಾಗದಲ್ಲಿ 1500 ಹಾಗೂ ತೋಟಗಳಲ್ಲಿ 300 ಕಾಡಾನೆಗಳಿವೆ ಎಂದು ಸರಕಾರವೇ ಮಾಹಿತಿ ನೀಡಿದೆ ಎಂದರು. 

ಆದರೆ ಕಾಡಾನೆಗಳನ್ನು ಹಿಡಿಯುವ ಕಾರ್ಯಾ ಚರಣೆ ನಡೆದಿಲ್ಲ. ಅರಣ್ಯ ಭಾಗದಲ್ಲಿರುವ ಆಹಾರಕ್ಕೆ ಯೋಗ್ಯವಲ್ಲದ ಮರಗಳನ್ನು ತೆಗೆದು ವನ್ಯಜೀವಿಗಳ ಹಸಿವನ್ನು ನೀಗಿಸುವ ಮರಗಳನ್ನು ಬೆಳೆಸುವಂತೆ ಅರಣ್ಯ ಸಚಿವರಲ್ಲಿ ಮನವಿ ಮಾಡಲಾಗಿದೆ. ಈ ಕಾರ್ಯಕ್ಕೆ ಸರಕಾರ ಮುಂದಾದರೆ ಯೋಗ್ಯವಲ್ಲದ ಮರಗಳನ್ನು ತೆರವುಗೊಳಿಸಲು ಕೇಂದ್ರ ಸರಕಾರದಿಂದ ಅನುಮತಿ ದೊರಕಿಸಿ ಕೊಡುವುದಾಗಿ ಅಪ್ಪಚ್ಚು ರಂಜನ್‌ ಹೇಳಿದರು.
 
ಸಿ ಮತ್ತು ಡಿ ಭೂಮಿ ಮಂಜೂರು 
ಕೊಡಗು ಜಿಲ್ಲೆಯ ಮೂರು ತಾಲ್ಲೂಕಿನಲ್ಲಿ ಸುಮಾರು 3669 ಅರ್ಜಿದಾರರು ಹೊಂದಿರುವ 6105.20 ಎಕರೆ ಸಿ ಮತ್ತು ಡಿ ಭೂಮಿಯನ್ನು ಸಕ್ರಮಗೊಳಿಸಲು ಸರಕಾರ ಆದೇಶ ನೀಡಿದೆ. ಇದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಕಾಳಜಿಯಿಂದ ಆಗಿದೆ ಎಂದು ಅಪ್ಪಚ್ಚುರಂಜನ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಸೋಮವಾರಪೇಟೆ ತಾಲೂಕಿನಲ್ಲಿ 3032 ಅರ್ಜಿ ದಾರರು 4368.20 ಎಕರೆ, ಮಡಿಕೇರಿ ತಾಲೂಕಿನಲ್ಲಿ 523 ಅರ್ಜಿದಾರರು 1249 ಎಕರೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 114 ಅರ್ಜಿದಾರರು 488 ಎಕರೆ ಸಿ ಮತ್ತು ಡಿ ಭೂಮಿಯನ್ನು ಹೊಂದಿದ್ದಾರೆ ಎಂದು ಅವರು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.