ಕುಸಿದ ಶುಂಠಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರು

ಸಾವಿರಾರು ಎಕ್ರೆ ಪ್ರದೇಶದಲ್ಲಿ ಬೆಳೆ; ಲಕ್ಷಾಂತರ ರೂ. ಖರ್ಚು

Team Udayavani, Sep 11, 2020, 4:36 AM IST

ಕುಸಿದ ಶುಂಠಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರು

ಮಡಿಕೇರಿ: ಶುಂಠಿ ಬೆಲೆ ಈ ಬಾರಿ ಪಾತಾಳಕ್ಕೆ ಕುಸಿದಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಶುಂಠಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಣಿಜ್ಯ ಬೆಳೆಗಳನ್ನು ಬೆಳೆಯುವುದರಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದೆಂಬ ಆಶಯದೊಂದಿಗೆ ಕಳೆದ ಹತ್ತು ವರ್ಷಗಳಿಂದ ಜಿಲ್ಲೆಯ ರೈತರು ಸಾವಿರಾರು ಎಕ್ರೆ ಪ್ರದೇಶದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಶುಂಠಿ ಬೆಳೆಯುತ್ತಿದ್ದಾರೆ. ಆದರೆ ಈ ಬಾರಿ ಶುಂಠಿ ಬೆಲೆ ಹಿಂದೆಂದಿಗಿಂತಲೂ ಕಡಿಮೆ ಯಾಗಿರು ವುದರಿಂದ ಜಿಲ್ಲೆಯಲ್ಲಿ ಶುಂಠಿ ಬೆಳೆದ ರೈತರು ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಈ ಬಾರಿ ಕೋವಿಡ್ ಸಂಕಷ್ಟದ ನಡುವೆಯೂ ಅನೇಕ ರೈತರು ಶುಂಠಿ ಬೆಳೆದಿದ್ದಾರೆ. ಆದರೆ ಇದೀಗ ಸ್ಥಳೀಯ ಮಾರುಕಟ್ಟೆ ಮಾತ್ರವಲ್ಲದೆ ಅಂತಾ ರಾಜ್ಯಗಳಲ್ಲೂ ಬೇಡಿಕೆ ಕಡಿಮೆ ಯಾಗಿರುವ ಹಿನ್ನೆಲೆಯಲ್ಲಿ ಶುಂಠಿಯನ್ನು ಕೇಳುವವರೇ ಇಲ್ಲವಾಗಿದೆ.

ಈಗಾಗಲೇ ಶುಂಠಿ ಬೆಳೆಗೆ ಏಳು ತಿಂಗಳುಗಳು ಕಳೆಯುತ್ತಿದ್ದು, ಫ‌ಸಲನ್ನು ಮಾರಾಟ ಮಾಡುವ ಸಮಯ ಬಂದಿದೆ. ಆದರೆ ಕಳೆದ 10 ವರ್ಷಗಳಿಂದಲೂ 60 ಕೆ.ಜಿ. ಶುಂಠಿ ಮೂಟೆಗೆ ರೂ. 1,500ರಷ್ಟಿದ್ದ ಬೆಲೆ ಈ ಬಾರಿ ರೂ. 750ಕ್ಕೆ ಇಳಿದಿದೆ. ಆದರೂ ಖರೀದಿದಾರರು ಮುಂದೆ ಬಾರದೆ ಬೆಳೆ ಹಾಳಾಗುತ್ತಿದೆ. ಮತ್ತೂಂದೆಡೆ ಆಗಾಗ ಸುರಿಯುತ್ತಿರುವ ಭಾರೀ ಮಳೆ ಶುಂಠಿಗೆ ರೋಗವನ್ನು ಹರಡುತ್ತಿದೆ.

ಕಳೆದ ವರ್ಷಗಳಲ್ಲಿ ಇದೇ ಸಮಯದಲ್ಲಿ ಒಂದು ಮೂಟೆ ಶುಂಠಿಗೆ 2,600-3,000 ರೂ. ಬೆಲೆ ಸಿಗುತ್ತಿತ್ತು. ಆದರೆ ಈ ಬಾರಿ ಶುಂಠಿ ಬೆಳೆಯನ್ನು ಕೆಳುವವರೇ ಇಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

6 ತಿಂಗಳ ಹಿಂದೆ ಬೀಜದ ಶುಂಠಿಗೆ 5,000 ರೂ. ಬೆಲೆ ಇತ್ತು. ಆದರೆ ಈಗ ಬೀಜದ ಶುಂಠಿಗೂ ಕೇವಲ 1,100 ರೂ. ದೊರಕುತ್ತಿದೆ. ಇದರಿಂದಾಗಿ ಕುಶಾಲ ನಗರ ಹೋಬಳಿ ವ್ಯಾಪ್ತಿಯ ಹೆಬ್ಟಾಲೆ, ತೂರೆನೂರು, ಶಿರಂಗಾಲ ಸಿದ್ಧಲಿಂಗಪುರ, ಬಾಣವಾರ, ಗುಡ್ಡೆಹೂಸೂರು ಗ್ರಾ.ಪಂ. ವ್ಯಾಪ್ತಿಗಳಲ್ಲಿ ಮಳೆಯಿಂದಾಗಿ ಶುಂಠಿ ಗದ್ದೆ ಗಳಲ್ಲೇ ಕೊಳೆತು ಹೋಗುತ್ತಿದೆ. ಈ ಬಾರಿ ಶುಂಠಿಯ ಬೀಜದ ಬೆಲೆಯೂ ರೈತರಿಗೆ ದೊರಕುತ್ತಿಲ್ಲ. ಮತ್ತೂಂದೆಡೆ ನೀರು, ಗೊಬ್ಬರ ಹಾಗೂ ಕಾರ್ಮಿಕರಿಗಾಗಿ ಮಾಡಿದ ಖರ್ಚು ಅಧಿಕವಿದ್ದು, ಶುಂಠಿ ಬೆಳೆದ
ರೈತರು ತಲೆ ಮೇಲೆ ಕೈ ಇಟ್ಟು ಕೂರುವ ಪ್ರಸಂಗ ಎದುರಾಗಿದೆ.

ಸಾಲ ಮರುಪಾವತಿ ಚಿಂತೆ
ರೈತರು ಭೂಮಿ, ನೀರು, ಶುಂಠಿ ಬೀಜಕ್ಕೆ ಸಾವಿರಾರು ರೂ. ಖರ್ಚು ಮಾಡಿ ದ್ದಾರೆ. ಸಹಕಾರ ಸಂಘಗಳಲ್ಲಿ ಮತ್ತು ಇತರ ಸಂಸೆœಗಳಲ್ಲಿ ಸಾಲ ಪಡೆದು ಶುಂಠಿ ಬೆಳೆ ದವರೂ ಇದ್ದಾರೆ. ಆದರೆ ಈ ಸಾಲ ಮರುಪಾವತಿ ಹೇಗೆ ಎಂಬ ಚಿಂತೆಯಲ್ಲಿ ರೈತರಿದ್ದಾರೆ.

ಈ ವರ್ಷ ಬೇಡಿಕೆ ಕಡಿಮೆ
ಈ ಹಿಂದೆ ಶುಂಠಿ ಬೆಳೆ ಕಟಾವಿಗೆ ಬರುವುದಕ್ಕೆ ಮುಂಚೆಯೇ ಕೇರಳ ಸಹಿತ ವಿವಿಧೆಡೆಯ ವ್ಯಾಪಾರಿಗಳು ಶುಂಠಿ ಖರೀದಿಗೆ ಮುಂದಾಗುತ್ತಿದ್ದರು. ಆದರೆ ಈ ವರ್ಷ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಶುಂಠಿ ಫ‌ಸಲನ್ನು ಸಾಗಾಟ ಮಾಡಲು ವ್ಯಾಪಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ನೊಂದ ರೈತರು ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.