ದಿಡ್ಡಳ್ಳಿ: ಗುಂಡು ಹಾರಿಸಿದಾತನ ಬಂಧನ


Team Udayavani, Apr 13, 2017, 1:43 PM IST

diddalli.jpg

ಮಡಿಕೇರಿ: ಶಾಶ್ವತ ನಿವೇಶನಕ್ಕಾಗಿ ಆಗ್ರಹಿಸಿ ಹೋರಾಟದ ರೂಪದಲ್ಲಿ ದಿಡ್ಡಳ್ಳಿಯಲ್ಲಿ ನೆಲೆಸಿರುವ ಆದಿವಾಸಿ ಕುಟುಂಬಗಳ ಗುಡಿಸಲಿನ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಮಾಲ್ದಾರೆಯ ಗೂಡೂರು ನಿವಾಸಿ ಎ. ಪೂಣಚ್ಚ ಬಂಧಿತ ಆರೋಪಿ. ಕೆಲಸಕ್ಕೆ ಬರುವುದಾಗಿ ಹೇಳಿ ಸಾಲ ಪಡೆದ ಕಾರ್ಮಿಕರು ಹಣವನ್ನು ಮರುಪಾವತಿಸಲಿಲ್ಲ ಎಂದು ಕುಪಿತಗೊಂಡು ಬೆದರಿಸುವ ಸಲುವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಆತ ಸಮಜಾಯಿಸಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ. 
ಆರೋಪಿ ದುಷ್ಕೃತ್ಯಕ್ಕೆ ಬಳಸಿದ್ದ ಬೈಕ್‌ ಹಾಗೂ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ
ಎ. 10ರಂದು ರಾತ್ರಿ ಮಳೆಯ ನಡುವೆಯೇ ಬೈಕ್‌ನಲ್ಲಿ ಆಗಮಿಸಿದ ದುಷ್ಕರ್ಮಿ ಗುಡಿಸಲೊಂದರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್‌ ಮಳೆ ಸುರಿಯುತ್ತಿದ್ದ ಕಾರಣ ಅಂದು ಆ ಗುಡಿಸಲಿನಲ್ಲಿ ಯಾರೂ ಇರಲಿಲ್ಲವಾದ್ದರಿಂದ ಭಾರೀ ದುರ್ಘ‌ಟನೆ ತಪ್ಪಿದೆ. ಗುಂಡಿನ ಶಬ್ದ ಕೇಳಿ ಸುತ್ತಮುತ್ತಲ ಆದಿವಾಸಿಗಳು ಗುಡಿಸಲಿನಿಂದ ಹೊರ ಬರುವಷ್ಟರಲ್ಲಿ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದ. ಆದರೆ ಸ್ಥಳದಲ್ಲಿ ಗುಂಡಿನ ಚಿಲ್ಲುಗಳು ದೊರಕಿವೆ.
ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ದಿಡ್ಡ‌ಳ್ಳಿಯ ಪಣಿಯರವರ‌ ಬಸವ, ತಾನು ರಾತ್ರಿ ವೇಳೆ ಮನೆಯ ಬಳಿ ಇರುವ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಟಾತ ಬೈಕ್‌ನಲ್ಲಿ ಆಗಮಿಸಿ ಗುಡಿಸಲಿನತ್ತ ಗುಂಡು ಹಾರಿಸಿದ್ದ. ಈ ಶಬ್ದ ಕೇಳಿ ತಾನು ಅತ್ತ ಧಾವಿಸಿದ ಸಂದರ್ಭ ಆತ ನೇರವಾಗಿ ನನ್ನ ಮೇಲೆ ಗುಂಡು ಹಾರಿಸಲು ಯತ್ನಿಸಿದ. ತಾನು ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡೆ. ಅನಂತರ ಹಾಡಿಯ ನಿವಾಸಿಗಳು ಆತನನ್ನು ಹುಡುಕುವ ಸಂದರ್ಭ ಆತ 
ರಾತ್ರಿ ತಲೆಮರೆಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಹಾಡಿಯ ನಿವಾಸಿ ರಂಜು ಮಾತನಾಡಿ, ಹೋರಾಟವನ್ನು ಹತ್ತಿಕ್ಕಲು ಯಾವುದೇ ರೀತಿಯ ಷಡ್ಯಂತ್ರಗಳು ನಡೆದರೂ ಶಾಶ್ವತ ಸೂರು ಸಿಗುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದಿವಾಸಿಗಳು ಹಾಗೂ ದುರ್ಬಲರು ಸ್ವತಂತ್ರವಾಗಿ ಬದುಕಲು ಬಯಸುವುದನ್ನು ಅರಗಿಸಿಕೊಳ್ಳಲಾಗದ ಬಲಾಡ್ಯರು ದಿಡ್ಡಳ್ಳಿಯಲ್ಲಿ ನೆಲೆ ನಿಂತಿರುವ ನಿರಾಶ್ರಿತರ ಗುಡಿಸಲುಗಳ ಮೇಲೆ ಗುಂಡು ಹಾರಿಸಿ, ಹೋರಾಟವನ್ನು ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ ಎಂದು ಭೂು ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪ್ರಮುಖರಾದ ಅಮಿನ್‌ ಮೊಹಿಸಿನ್‌ ಆರೋಪಿಸಿದ್ದಾರೆ.

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

Dr-Parameshwar

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್ 

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

death

Bantwal: ಪಾಣೆಮಂಗಳೂರು; ಮಹಿಳೆ ಆತ್ಮಹ*ತ್ಯೆ

POlice

Punjalkatte: ಸಿದ್ದಕಟ್ಟೆ; ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ

2

Mangaluru: ದಾವಣಗೆರೆ ಮೂಲದ ಯುವತಿ ನಾಪತ್ತೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.