ಕಳಪೆ ಕಾಮಗಾರಿ ಗುತ್ತಿಗೆದಾರರಿಗೆ ಬಿಲ್‌ ಪಾವತಿಸದಿರಿ


Team Udayavani, Feb 27, 2020, 5:12 AM IST

25-SPT-01

ಸೋಮವಾರಪೇಟೆ: ಕೊಡಗು ಪ್ಯಾಕೇಜ್‌ ಸೇರಿದಂತೆ ಇತರ ಯೋಜನೆಯಡಿ ತಾಲೂಕಿನಲ್ಲಿ ನಿರ್ಮಾಣ ವಾಗುತ್ತಿರುವ ರಸ್ತೆ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಆರೋಪಿಸಿದ ತಾ.ಪಂ. ಸದಸ್ಯರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ, ಸೋಮವಾರ ನಡೆದ ತಾಪಂ ಸಭೆಯಲ್ಲಿ ನಡೆಯಿತು.

ತಾ.ಪಂ. ಅಧ್ಯಕ್ಷೆ ಪುಷ್ಪರಾಜೇಶ್‌ ಅಧ್ಯಕ್ಷತೆಯಲ್ಲಿ ನಡೆದ ಮುಂದುವರಿದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಬಿಲ್‌ ಪಾವತಿಸಬಾರದು ಎಂದು ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್‌ ಸೂಚಿಸಿದರು.

ಕೊತ್ನಳ್ಳಿ, ಬೀದಳ್ಳಿ ರಸ್ತೆ ಕಳಪೆಯಾಗಿರುವ ಬಗ್ಗೆ ಸಾಬೀತಾಗಿದ್ದು, ಕೂಡಲೆ ಗುತ್ತಿಗೆದಾರ ಮರು ಡಾಮರೀಕರಣ ಮಾಡಬೇಕೆಂದು ಅಭಿಮನ್ಯುಕುಮಾರ್‌, ಸದಸ್ಯರಾದ ಧರ್ಮಪ್ಪ, ಬಿ.ಬಿ. ಸತೀಶ್‌, ಶಾಂತಳ್ಳಿ ಗ್ರಾ.ಪಂ. ಅಧ್ಯಕ್ಷ ಬಿ.ಪಿ. ಅನಿಲ್‌ ಕುಮಾರ್‌ ಸೂಚಿಸಿದರು. ತಾ.ಪಂ. ಗ್ರಾಪಂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲೇ ಬುಧವಾರ ಮರುಡಾಮ ರೀಕರಣ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಸ. ಕಾರ್ಯಪಾಲಕ ಅಭಿಯಂತರ ಮೋಹನ್‌ ಕುಮಾರ್‌ ಭರವಸೆ ನೀಡಿದರು.

ರಸ್ತೆ ಕಾಮಗಾರಿ ನಡೆಯವಾಗ ನಾಲ್ಕು ಸ್ಟೇಜ್‌ನಲ್ಲಿ ವಿಡಿಯೋ ಚಿತ್ರೀ ಕರಣ ಮಾಡಬೇಕು ಎಂದು ಬಿ.ಬಿ. ಸತೀಶ್‌ ಹೇಳಿದರು. ಸರ್ಕಾರದ‌ ಪ್ರತಿನಿಧಿ ಗಳಾದ ತಾಪಂ ಸದಸ್ಯರಿಗೆ ಆ ವ್ಯಾಪ್ತಿ ಯಲ್ಲಿ ನಡೆಯುವ ಕಾಮಗಾರಿಗಳ ಮಾಹಿತಿ ನೀಡುವಂತಾಗಬೇಕು. ಕಾಮಗಾರಿಯ ಅಂದಾಜುಪಟ್ಟಿ ಸೇರಿದಂತೆ ಎಲ್ಲ ವಿವರಗಳನ್ನು ನೀಡಬೇಕು. ಈ ಬಗ್ಗೆ ಸಭೆ ನಿರ್ಣಯ ಕೈಗೊಂಡು ಸಂಬಂಧಪಟ್ಟ ಇಲಾಖೆಗೆ ಕಳುಹಿಸಬೇಕೆಂದು ಸದಸ್ಯ ಅನಂತ್‌ ಕುಮಾರ್‌ ಹೇಳಿದರು.

ಸುಂಟಿಕೊಪ್ಪದ ಗದ್ದೆಹಳ್ಳ, ಚೆಟ್ಟಳ್ಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಿಯಮದಂತೆ ರಸ್ತೆ ಅಗಲೀಕರಣ ಮಾಡಬೇಕು. ಕಂಬಗಳ ತೆರವು ಆಗಬೇಕು. 15 ದಿನಗಳ ಒಳಗೆ ಅಗಲೀಕರಣ ಮಾಡದಿದ್ದರೆ ಲೋಕೋಪಯೋಗಿ ಇಲಾಖೆಯ ವಿರುದ್ಧ ಸತ್ಯಾಗ್ರಹ ನಡೆಸಲಾಗುವುದು ಎಂದು ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಎಚ್ಚರಿಸಿದರು.
67ಲಕ್ಷ ರೂ.ಗಳ ವೆಚ್ಚದಲ್ಲಿ ಕೂಡುಮಂಗಳೂರು, ಚಿಕ್ಕತ್ತೂರು ಸಂಪರ್ಕ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇಲ್ಲಿಯೂ ಗುತ್ತಿಗೆದಾರ ಹಾಗು ಇಂಜಿನಿಯರ್‌ಗಳ ಗೈರಿನಲ್ಲೇ ಕಾಮಗಾರಿ ನಡೆಯುತ್ತಿದೆ ಎಂದು ಸದಸ್ಯ ಗಣೇಶ್‌ ದೂರಿದರು.

ಗಣಗೂರು, ಕೊತ್ನಳ್ಳಿ, ನಾಡ್ನಳ್ಳಿ, ಚನ್ನಾಪುರ ಹಿರಿಕರ, ಸಂಗಯ್ಯನಪುರ ರಸ್ತೆಗಳಲ್ಲಿ ಕಳಪೆ ಬಗ್ಗೆ ದೂರಗಳು ಬಂದಿವೆ. ಮೇಲಧಿಕಾರಿಗಳಿಂದ ತನಿಖೆಯಾಗಬೇಕು. ಮುಂದೆ ನಡೆಯುವ ಹಾನಗಲ್ಲು, ಬಿಟಿಸಿಜಿ ಕಾಲೇಜು ರಸ್ತೆಯ ಕಾಮಗಾರಿ ಕಳಪೆಯಾದರೆ, ಅಧಿಕಾರಿಗಳು ನೇರ ಹೊಣೆ ಹೊರಬೇಕಾಗುತ್ತದೆ ಎಂದು ಸ್ಥಾಯಿ ಸಮಿತಿ ಸದಸ್ಯೆ ತಂಗಮ್ಮ ಎಚ್ಚರಿಸಿದರು.

ತಾಲೂಕಿನಲ್ಲಿ ಕಾಮಗಾರಿ ನಡೆಯು ವಾಗ ಕಡ್ಡಾಯವಾಗಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಾಜರಿರಬೇಕು ಎಂದು ಅಭಿಮನ್ಯು ಕುಮಾರ್‌ ಹೇಳಿದರು.
ಕಳಪೆ ಕಾಮಗಾರಿ ಮಾಡುವ ಗುತ್ತಿಗೆ ದಾರರನ್ನು ನಿರ್ದಾಕ್ಷಿಣ್ಯವಾಗಿ ಕಪ್ಪುಪಟ್ಟಿಗೆ ಸೇರಿಸಬೇಕು. ಕಾಮಗಾರಿಯನ್ನು ವಿಳಂಬ ಮಾಡುವ ಗುತ್ತಿಗೆದಾರರಿಗೆ ಸೂಕ್ತ ದಂಡ ವಿಧಿಸಬೇಕು. ನಿಯಮಗಳನ್ನು ಪಾಲಿಸದೆ ಕಾಮಗಾರಿ ಮಾಡುವುದು ಹಾಗು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ತಾಪಂ ಸಭೆ ನಿರ್ಣಯಗೊಂಡಿತು. ನಿರ್ಣಯವನ್ನು ಲೋಕೋಪಯೋಗಿ ಇಲಾಖೆಯ ಮಂಗಳೂರು ವಿಭಾಗದ ಅಧೀಕ್ಷಕ ಎಂಜಿನಿಯರ್‌, ಮಡಿಕೇರಿ ವಿಭಾಗದ ಇಇ, ಸೋಮವಾರಪೇಟೆ ಎಇಇ ಅವರುಗಳಿಗೆ ಕಳುಹಿಸುವಂತೆ ತೀರ್ಮಾನಿಸಲಾಯಿತು.

ಕ್ವಾಲಿಟಿ ಲ್ಯಾಬ್‌ ಸ್ಥಾಪಿಸಿ
ಪ್ರತಿ ರಸ್ತೆಯಲ್ಲೂ ಕಳಪೆ ಕಾಮಗಾರಿ ನಡೆಯುತ್ತಿದೆ. ನಿಯಮಗಳನ್ನು ಪಾಲಿಸುತ್ತಿಲ್ಲ. ಗುಣಮಟ್ಟದ ವಸ್ತುಗಳನ್ನು ಬಳಸುತ್ತಿಲ್ಲ. ಒಂದು ಕೋಟಿ ಮೇಲ್ಪಟ್ಟ ರಸ್ತೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಕ್ಯಾಲಿಟಿ ಲ್ಯಾಬ್‌ ಸ್ಥಾಪಿಸಬೇಕು. ಇನ್ನು ಮುಂದೆ ಸ್ಥಳದಲ್ಲಿ ಕ್ವಾಲಿಟಿ ಲ್ಯಾಬ್‌ ಕಡ್ಡಾಯ ಸ್ಥಾಪನೆ ಮಾಡಬೇಕು. ಚನ್ನಾಪುರ ಹಿರಿಕರ ರಸ್ತೆಯನ್ನು ಅರ್ಧಂಬರ್ಧ ಮಾಡಲಾಗಿದೆ. ಕಾಮಗಾರಿ ನಿಲ್ಲಿಸಿ ಒಂದು ತಿಂಗಳು ಕಳೆದಿದೆ. ನಡೆದಾಡಲು ಸಮಸ್ಯೆಯಾಗಿದೆ.
– ಅನಿಲ್‌ ಕುಮಾರ್‌

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.