ಡಾ| ಕಸ್ತೂರಿರಂಗನ್ ವರದಿ: ಕೇಂದ್ರ ಪರಿಸರ ಸಚಿವರಿಗೆ ಮನವಿ
Team Udayavani, Aug 12, 2017, 7:10 AM IST
ಮಡಿಕೇರಿ: ಡಾ| ಕಸ್ತೂರಿ ರಂಗನ್ ವರದಿ ಕುರಿತು ಕೊಡಗು ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜನರಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಆತಂಕ ಮನೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಂಸದ ರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಪ್ರಹ್ಲಾದ್ ಜೋಶಿ, ಅನಂತ್ ಕುಮಾರ್ ಹೆಗಡೆ, ಶಾಸಕರಾದ ಕೆ.ಜಿ. ಬೋಪಯ್ಯ ಸಂಸದರಾದ ಪ್ರತಾಪ್ ಸಿಂಹ ಅವರನ್ನೊಳಗೊಂಡ ನಿಯೋಗ ಇಂದು ಕೇಂದ್ರ ಪರಿಸರ ಖಾತೆ ಸಚಿವರಾದ ಡಾ| ಹರ್ಷವರ್ಧನ್ ಅವರನ್ನು ಭೇಟಿಯಾಗಿ ಚರ್ಚಿಸಿತು. ಡಾ| ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ವಿಷಯದಲ್ಲಿ ಜನರಲ್ಲಿ ಉಂಟಾಗಿರುವ ಆತಂಕದ ನಿವಾರಣೆಯ ಬಗ್ಗೆ ಪ್ರಮುಖರು ಮನವಿ ಮಾಡಿದರು.