ಭೂಕಂಪನ, ಅತಿ ಮಳೆ ಭೂ ಕುಸಿತಕ್ಕೆ ಕಾರಣ


Team Udayavani, Dec 15, 2018, 11:00 AM IST

kodagu.jpg

ಮಡಿಕೇರಿ: ಕೊಡಗು ಕೃಷಿ ವಿಜ್ಞಾನಿಗಳ ವೇದಿಕೆಯು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ಅತಿವೃಷ್ಟಿ ಕುರಿತು ಅಧ್ಯಯನ ನಡೆಸಿ ಭೂ ಕುಸಿತಕ್ಕೆ ಕಾರಣವಾದ ಕೆಲವು ಅಂಶಗಳನ್ನು ಗುರುತಿಸಿ ಪ್ರಕಟಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೃಷಿ ವಿಜ್ಞಾನ ವೇದಿಕೆಯ ಅಧ್ಯಕ್ಷ ಕೆ.ಆರ್‌. ಬಾಬು ರಾಘವನ್‌ ಹಾಗೂ ಇತರ ಪ್ರಮುಖರು, ಭೂ ಕುಸಿತದ ಕಾರಣಗಳ ಕುರಿತು ಮಾಹಿತಿ ನೀಡಿದರು. 2018ರ ಜುಲೈ 9ರಂದು ಮಡಿಕೆೇರಿ ವಿಭಾಗದಲ್ಲಿ ಭೂಕಂಪನವಾಗಿತ್ತು. ಇದರ ತೀವ್ರತೆ 3.4 ಎಂದು ರಿಕ್ಟರ್‌ ಮಾಪಕದಲ್ಲಿ ಕಂಡು ಬಂದಿದೆ. ಭೂ ಕಂಪನವು ಒಂದು ತಿಂಗಳ ಅನಂತರ ನಡೆದ ಭೂ ಕುಸಿತಕ್ಕೆ ಕಾರಣವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಜೂನ್‌ನಿಂದ ಸಪ್ಟೆಂಬರ್‌ವರೆಗೆ 3,463 ಮಿ.ಮೀ. ಮಳೆ ದಾಖಲಾಗಿದ್ದು, ಸಾಧಾರಣ ಮಳೆಗಿಂತ ಶೇ.59ರಷ್ಟು ಹೆಚ್ಚಾಗಿದೆ. ಆಗಸ್ಟ್‌ 13 ರಿಂದ 19ರ ವರೆಗೆ ಜಿಲ್ಲೆಯಲ್ಲಿ 594.2ಮಿ.ಮೀ. ಮಳೆೆಯಾಗಿದ್ದು, ಇದು ಸಾಧಾರಣ ಮಳೆಗಿಂತ ಶೇ.272 ರಷ್ಟು ಹೆಚ್ಚಾಗಿದೆ. ಇದು ಕೂಡ ಭೂ ಕುಸಿತಕ್ಕೆ ಮೂಲ ಕಾರಣವೆಂದು ಹೇಳಬಹುದಾಗಿದೆ. ಇದರ ಪರಿಣಾಮದಿಂದ ಆಗಸ್ಟ್‌ 15, 16 ಮತ್ತು 17 ರಂದು ವಿವಿಧ ಕಡೆ ಭೂ ಕುಸಿತ ಸಂಭವಿಸಿದೆ.

ಭೂ ಕುಸಿತದಿಂದಾಗಿ ಅತಿವೃಷ್ಟಿ ಹಾನಿ ಪೀಡಿತ ಪ್ರದೇಶಗಳಲ್ಲಿ ಒಟ್ಟು 629.158 ಹೆಕ್ಟೇರ್‌ ಪ್ರದೇಶ ನಾಶವಾಗಿದೆ. ಅತಿಯಾದ ಮಳೆಯಿಂದ ಇಳಿಜಾರು ಪ್ರದೇಶ ಗಳಲ್ಲಿ ಭೂ ಕುಸಿತ ಉಂಟಾಗಿದೆ. ಇಳಿಜಾರು ಪ್ರದೇಶವನ್ನು ಗಟ್ಟಿ ಮಾಡುವುದರಿಂದ ಮತ್ತು ಭೂ ಸವೆತವನ್ನು ತಡೆಗಟ್ಟುವುದರಿಂದ ಮುಂದೆ ಎದುರಾಗಬಹುದಾದ ಅಪಾಯವನ್ನು ತಡೆಯಬಹುದಾಗಿದೆ.ಪತ್ರಿಕಾಗೋಷ್ಠಿಯಲ್ಲಿ ಭೂ ವಿಜ್ಞಾನಿ ಡಾ| ರವಿ ಕುಮಾರ್‌, ವೇದಿಕೆ ಉಪಾಧ್ಯಕ್ಷ ಸುಬ್ರಹ್ಮಣ್ಯ, ಕಾರ್ಯದರ್ಶಿ ಡಾ| ಸತೀಶ್‌, ಪ್ರಮುಖರಾದ ಜಿ.ಎಂ. ದೇವಗಿರಿ ಹಾಗೂ ಶೋಭಾ ಉಪಸ್ಥಿತರಿದ್ದರು.

ಹಿನ್ನೀರಿನ ಒತ್ತಡವೂ ಕಾರಣ
ಹಾರಂಗಿ ಜಲಾಶಯದಿಂದ ಒಳಹರಿವಿನ ಮಟ್ಟವನ್ನು ಮೊದಲೇ ಗಮನಿಸದೆ ಏಕಾಏಕಿ ನೀರನ್ನು ಹೊರಬಿಟ್ಟ ಪರಿಣಾಮವೂ ಮತ್ತು ಜಲಾಶಯದ ಹಿನ್ನೀರಿನ ಒತ್ತಡದಿಂದಲು ಭೂ ಕುಸಿತ ಉಂಟಾಗಿದೆ. ಬೆಟ್ಟ ಗುಡ್ಡಗಳ ಕಲ್ಲಿನ ರಚನೆಗಳಲ್ಲಿ ಉಂಟಾಗಿರುವ ಬಿರುಕುಗಳಿಂದಾಗಿ ಮಣ್ಣಿನ ಪ್ರದೇಶ ಸಡಿಲವಾಗಿದ್ದು, ತೇವಾಂಶ ಸಂಗ್ರಹಗೊಂಡು ಅಸ್ಥಿರತೆ ಉಲ್ಬಣಗೊಂಡಿದೆ. ಇಂತಹ ಪ್ರದೇಶಗಳು ಸಡಿಲಗೊಂಡು ಸಣ್ಣ ಕಣಿವೆ ಪ್ರದೇಶಗಳಾಗಿ ಪರಿವರ್ತನೆಗೊಂಡು ಭೂ ಕುಸಿತ ಉಂಟಾಗಿದೆ ಎಂದು ಪ್ರಮುಖರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.