ಬಡತನ ನಿರ್ಮೂಲನೆಗೆ ಶಿಕ್ಷಣ ಅಗತ್ಯ : ಪ್ರೊ| ಪಿ.ಎಲ್‌. ಧರ್ಮ


Team Udayavani, Mar 9, 2020, 5:56 AM IST

ಬಡತನ ನಿರ್ಮೂಲನೆಗೆ ಶಿಕ್ಷಣ ಅಗತ್ಯ : ಪ್ರೊ| ಪಿ.ಎಲ್‌. ಧರ್ಮ

ಮಡಿಕೇರಿ: ಬಡತನವನ್ನು ಮೀರಿ ಜೀವನದಲ್ಲಿ ಸಾಧನೆ ಮಾಡಿ ಗುರಿ ತಲುಪಲು ಶಿಕ್ಷಣದಿಂದ ಮಾತ್ರವೇ ಸಾಧ್ಯ. ಶಾಂತಿ, ಪ್ರೀತಿಯಿಂದ ಎಲ್ಲರನ್ನು, ಎಲ್ಲಾ ಧರ್ಮ ಸಮುದಾಯಗಳನ್ನು ಗೌರವಿಸುವ ಪ್ರಜ್ಞೆ ವಿದ್ಯಾರ್ಥಿಗಳಲ್ಲಿ ಇರಬೇಕು. ಸಮಾಜದಲ್ಲಿ ಸಮುದಾಯ ಮತ್ತು ಜನರ ಹೃದಯಗಳನ್ನು ಕಟ್ಟುವ ಕಾರ್ಯ ವಿದ್ಯಾರ್ಥಿಗಳಿಂದ ಆಗಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಪ್ರೊ| ಪಿ.ಎಲ್‌.ಧರ್ಮ ಅವರು ಹೇಳಿದ್ದಾರೆ.

ನಗರದ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಶನಿವಾರ ನಡೆದ 71ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಮುದಾಯ ಮತ್ತು ಜನರ ಹೃದಯಗಳನ್ನು ಕಟ್ಟುವ ಕಾರ್ಯ ವಿದ್ಯಾರ್ಥಿಗಳಿಂದ ಆಗಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ಸಿಗ¾ ನೆಟ್‌ವರ್ಕ್ಸ್ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಅವರೆಮಾದಂಡ ಶರಣ್‌ ಪೂಣಚ್ಚ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಫೀ| ಮಾ| ಕಾರ್ಯಪ್ಪ ಕಾಲೇಜು ಸಾಕಷ್ಟು ನೀಡಿದೆ. ವಿದ್ಯಾರ್ಜನೆಗೆ ಅಗತ್ಯವಾದ ವಾತಾವರಣ ಕಾಲೇಜಿನಲ್ಲಿದೆ. ಇವೆಲ್ಲವನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ. ಮುಂದಿನ ಪೀಳಿಗೆಗೆ ಕಾಲೇಜನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರದ ಜಗತ್‌ ತಿಮ್ಮಯ್ಯ ಅವರು, ಕಾಲೇಜಿನ ವಿದ್ಯಾಭ್ಯಾಸ ಮುಗಿಸಿದ ನಂತರ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ. ಕಾಲೇಜು ಶಿಸ್ತಿಗೆ ಹೆಸರುವಾಸಿಯಾಗಿದೆ. ಬೆಂಗಳೂರಿನ ಸಿಗ¾ ನೆಟ್‌ವರ್ಕ್ಸ್ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಅವರೆಮಾದಂಡ ಶರಣ್‌ ಪೂಣಚ್ಚ ಅವರು ಕಾಲೇಜಿಗೆ ಲ್ಯಾಪ್‌ಟಾಪ್‌ ಕೊಡುಗೆಯಾಗಿ ನೀಡಿದರು. ಪಠ್ಯ ವಿಷಯಗಳಲ್ಲಿ, ಕ್ರೀಡೆ ಮತ್ತು ಎನ್‌.ಸಿ.ಸಿ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಮತ್ತು ಪದಕಗಳನ್ನು ಪ್ರಧಾನ ಮಾಡಲಾಯಿತು. ವಿವಿಧ ವಿಭಾಗಗಳ ದತ್ತಿ ಬಹುಮಾನವನ್ನು ವಿದ್ಯಾರ್ಥಿಗಳಿಗೆ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ‌ ಪ್ರತೀಕ್‌ ಶೆಟ್ಟಿ ಬಿ.ಎಸ್‌., ಕಾರ್ಯದರ್ಶಿಗಳಾದ ಲಿಶಾಲ್‌ ಬೆನ್ನಿ, ಜಂಟಿ ಕಾರ್ಯದರ್ಶಿಗಳಾದ ಮಂಜುನಾಥ್‌ ಪಿ.ಆರ್‌, ಸುಚಿತ್‌ ಟಿ.ಆರ್‌., ಅಜಿತ್‌ ಎಂ.ಎಸ್‌. ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕರಾದ ಮೇ| ರಾಘವ್‌ ಅವರು ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಸಲಹೆಗಾರರಾದ ಡಾ| ಈ ತಿಪ್ಪೇಸ್ವಾಮಿ ಅವರು 2019-20 ನೇ ಸಾಲಿನ ಕಾಲೇಜಿನ ವಾರ್ಷಿಕ ವಿವರಗಳನ್ನು ಓದಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಮೊನಿಷ ಜಿ ಅವರು ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ಲೀನಾ ಕೆ.ಎಲ್‌ ವಂದಿಸಿದರು.

ವಿದ್ಯಾರ್ಥಿಯಾಗಿದ್ದೆ
34 ವರ್ಷದ ಹಿಂದೆ ಇದೇ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದೆ. ಇಂದು ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದು ಸಂತಸ ತಂದಿದೆ. ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿಗೆ ತನ್ನದೇ ಆದ ಇತಿಹಾಸವಿದೆ. ಸಾರ್ವಜನಿಕರು ಬಾಹ್ಯವಾಗಿ ಕಾಲೇಜನ್ನು ಗಮನಿಸುತ್ತಿರುತ್ತಾರೆ. ಪರಂಪರೆ ಯನ್ನು ಉಳಿಸಿ ಬೆಳೆಸುವ ಕೆಲಸ ವಿದ್ಯಾರ್ಥಿಗಳಿಂದ ಆಗಬೇಕು ಎಂದು ಪ್ರೊ| ಪಿ.ಎಲ್‌.ಧರ್ಮ ಹೇಳಿದರು. ವೃತ್ತಿಗಳಲ್ಲಿ ಮೇಲು ಕೀಳು ಎಂಬುದಿಲ್ಲ ಎಂದರು.

ಎಲ್ಲ ವೃತ್ತಿಗಳನ್ನೂ ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ತರಗತಿಯಲ್ಲಿ ಬಹಳ ಕುತೂಹಲದಿಂದ ಪಾಠ ಪ್ರವಚನಗಳನ್ನು ಕೇಳಬೇಕು. ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ ಇರಬೇಕು. ಇಲ್ಲದಿದ್ದರೆ. ಸಾಧನೆಯ ಹಾದಿ ಕಠಿನವಾಗಿರಲಿದೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.