ಸಿದ್ದಾಪುರ: ಪುಂಡು ಹೆಣ್ಣಾನೆ ಸೆರೆ
Team Udayavani, May 29, 2019, 6:10 AM IST
ಮಡಿಕೇರಿ: ಸಿದ್ದಾಪುರದ ನೆಲ್ಯಹುದಿಕೇರಿ ವ್ಯಾಪ್ತಿಯ ನಲ್ವತ್ತೆಕ್ರೆ ಬೆಟ್ಟದ ಕಾಡು ಸುತ್ತಮುತ್ತ ಪುಂಡಾಟ ಮಾಡುತ್ತಿದ್ದ ಹೆಣ್ಣು ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಸೋಮವಾರ ಸಂಜೆಯಿಂದಲೇ ಕಾಡಾನೆಯ ಚಲನವಲನದ ಮೇಲೆ ನಿಗಾ ಇರಿಸಿದ್ದ ಅರಣ್ಯ ಇಲಾಖೆ ಸಿಬಂದಿ ಮಂಗಳವಾರ ಮಧ್ಯಾಹ್ನದ ವೇಳೆಗೆ ಸಾಕಾನೆಗಳ ಸಹಕಾರದಿಂದ ತೋಟದೊಳಗಿದ್ದ ಕಾಡಾನೆಯನ್ನು ಸೆರೆ ಹಿಡಿದರು. ವೈದ್ಯಾಧಿಕಾರಿ ಡಾ| ಮುಜೀಬ್ ಅವರ ಮಾರ್ಗದರ್ಶನದಂತೆ ಕಾಡಾನೆಗಳ ಹಿಂಡಿನಲ್ಲಿದ್ದ ಹೆಣ್ಣು ಪುಂಡಾನೆಗೆ ಅರಿವಳಿಕೆ ಗುಂಡನ್ನು ಹಾರಿಸಲಾಯಿತು. ಅನಂತರ ಸಾಕಾನೆಗಳ ಸಹಾಯದಿಂದ ಮುಖ್ಯ ರಸ್ತೆಗೆ ಕರೆತಂದು ಲಾರಿ ಮೂಲಕ ಕುಶಾಲನಗರದ ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು.
ಕಾರ್ಯಾಚರಣೆಯಲ್ಲಿ ಡಿಎಫ್ಒ ಮಂಜುನಾಥ್, ವೈದ್ಯಾಧಿಕಾರಿ ಮುಜೀಬ್, ಎಸಿಎಫ್ ಚಿಣ್ಣಪ್ಪ, ವಲಯ ಅರಣ್ಯಾಧಿಕಾರಿ ಅರುಣ್, ಉಪವಲಯ ಅರಣ್ಯಾಧಿಕಾರಿಗಳಾದ ರಂಜನ್, ವಿಲಾಸ್, ಸಿಬಂದಿ, ಮಾವುತರು ಮತ್ತು ಕಾವಾಡಿಗಳು ಪಾಲ್ಗೊಂಡಿದ್ದರು.
ಅಭ್ಯತ್ಮಂಗಲ ಗ್ರಾಮದ ಸಮೀಪ ಕಾಡಾನೆ ಸೆರೆಗೆ ಸಿದ್ಧತೆ ನಡೆಸಲಾಗಿತ್ತು. ದುಬಾರೆ ಮತ್ತು ಮತ್ತಿಗೋಡು ಆನೆ ಶಿಬಿರದ ಹರ್ಷ, ಕೃಷ್ಣ, ಅಭಿಮನ್ಯು, ಧನಂಜಯ, ಲಕ್ಷ್ಮಣ, ಈಶ್ವರ, ಅಜಯ್, ವಿಕ್ರಮ್ ಆನೆಗಳೊಂದಿಗೆ ಸುಮಾರು ಐವತ್ತಕ್ಕೂ ಹೆಚ್ಚು ಸಿಬಂದಿ ಕಾಡಾನೆ ಇರುವಿಕೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಮಂಗಳವಾರ ಬೆಳಗಿನಿಂದಲೇ ಕಾರ್ಯಾಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ