ದಸರಾ ಜಂಬೂಸವಾರಿ ಆನೆಗಳಿಗೆ ದುಬಾರೆಯಿಂದ ಬೀಳ್ಕೊಡುಗೆ
Team Udayavani, Aug 22, 2019, 6:27 AM IST
ಮಡಿಕೇರಿ: ಮೈಸೂರು ದಸರಾ ಗಜಪಯಣದಲ್ಲಿ ಪಾಲ್ಗೊಳ್ಳಲು ದುಬಾರೆ ಶಿಬಿರದ 3 ಆನೆಗಳನ್ನುಹುಣಸೂರು ವೀರನ ಹೊಸಳ್ಳಿ ಶಿಬಿರಕ್ಕೆ ಬುಧವಾರ ಕಳುಹಿಸಿಕೊಡಲಾಯಿತು. ದುಬಾರೆ ಶಿಬಿರದ ಆನೆಗಳಾದ ಧನಂಜಯ (47), ಈಶ್ವರ (51), ವಿಜಯ (56) ಆನೆಗಳಿಗೆ ಪೂಜೆ ಸಲ್ಲಿಸಿ ಅರಣ್ಯ ಇಲಾಖೆ ಅಧಿಕಾರಿ, ಸಿಬಂದಿ ಬೀಳ್ಕೊಟ್ಟರು.
ಪೂಜೆಯ ಅನಂತರ ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ. ನೆಹರು, ಉಪ ಅರಣ್ಯ ವಲಯಾಧಿಕಾರಿಗಳಾದ ಕನ್ನಂಡ ರಂಜನ್, ಅನಿಲ್ ಮತ್ತು ಸಿಬಂದಿ ಬೆಲ್ಲ, ಕಬ್ಬು ತಿನ್ನಿಸಿ ಆನೆಗಳನ್ನು ಬೀಳ್ಕೊಡಲಾಯಿತು. ಆನೆ ಜತೆಗೆ ಮಾವುತ, ಕವಾಡಿಗರ ಕುಟುಂಬ ಸದಸ್ಯರು ತೆರಳಿದ್ದಾರೆ.
ಎರಡನೇ ತಂಡ ಸೆಪ್ಟಂಬರ್ ತಿಂಗಳಲ್ಲಿ ಮೈಸೂರಿಗೆ ಮತ್ತೆ 3 ಆನೆಗಳನ್ನು ಕಳುಹಿಸಿಕೊಡಲಾಗುವುದು ಎಂದು ಕುಶಾಲನಗರ ಅರಣ್ಯ ವಲಯಾಧಿಕಾರಿ ಸಿ.ಆರ್.ಅರುಣ್ ಮಾಹಿತಿ ನೀಡಿದರು.
ಮುಂದಿನ ವಾರ ತೆರಳುವ ಮತ್ತೂಂದು ತಂಡದ ಮೂರು ಆನೆಗಳು ಈ ಸಂದರ್ಭ ಜತೆಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ