“ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರೂ ಸಹಕರಿಸಿ’

ಸ್ವಚ್ಛ ಮೇವ ಜಯತೆ ಅಭಿಯಾನಕ್ಕೆ ಚಾಲನೆ

Team Udayavani, Jun 15, 2019, 5:51 AM IST

Z-ABHIYANA-1

ಮಡಿಕೇರಿ: ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕಾಗಿ ವೈಜ್ಞಾನಿಕ ರೂಪದಲ್ಲಿ ಹಸಿ ಮತ್ತು ಒಣಕಸವನ್ನಾಗಿ ಬೇರ್ಪಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ‌ ಎಂ.ಪಿ.ಅಪ್ಪಚ್ಚುರಂಜನ್‌ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಗ್ರಾಮೀಣ ಸ್ವತ್ಛ ಭಾರತ ಅಭಿಯಾನ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನ ಜಾಗೃತಿ ಕಾರ್ಯಕ್ರಮದಲ್ಲಿ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಒಣ ಕಸವಾದ ತ್ಯಾಜ್ಯ ಕಾಗದ, ಗಾಜಿನ ಬಾಟಲು, ಪ್ಲಾಷ್ಟಿಕ್‌ ಚೀಲ, ಟೆಟ್ರಾ ಪ್ಯಾಕ್‌, ಲೋಹದ ಕ್ಯಾನುಗಳು, ಹಾಗೆಯೇ ಹಸಿ ಕಸವಾದ ಮನೆಯ ತ್ಯಾಜ್ಯ, ತೆಂಗಿನ ಚಿಪ್ಪು, ಹೂ ಗಳು, ಒಡೆದ ಮೊಟ್ಟೆ ಚಿಪ್ಪು, ಎಲೆಗಳು ಮತ್ತಿತರವನ್ನು ವಿಂಗಡಿಸಿ ಕಸವನ್ನು ಎರೆ ಹುಳು ಗೊಬ್ಬರವನ್ನಾಗಿ ಮಾಡಬೇಕು ಎಂದರು.

ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಬಳಿ ಗೃಹ ಮಂಡಳಿಗೆ ಜಾಗ ನೀಡಿದವರು ಯಾರು, ಹಾಗೆಯೇ 800 ಮರಗಳ ಹನನಕ್ಕೆ ಅನುಮತಿ ಕೊಟ್ಟವರಾರು ಎಂದು ಶಾಸಕರು ಪ್ರಶ್ನಿಸಿದರು. ಆದರೆ ಯಾರೋ ಮಾಡಿದ ತಪ್ಪಿನಿಂದ ಇನ್ನೊಬ್ಬರ ಮೇಲೆ ಕೆಸರು ಎರಚುವ ಕೆಲಸ ಮಾಡಬಾರದು ಎಂದು ಅವರು ಹೇಳಿದರು.

ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್‌ ಅವರು ಮಾತನಾಡಿ ಪ್ರತಿಯೊಬ್ಬರ ಮನೆಯಲ್ಲಿಯೂ ಶೌಚಾಲಯ ಕಡ್ಡಾಯವಾಗಿ ಇರಬೇಕು ಮತ್ತು ಬಳಕೆ ಮಾಡಬೇಕು. ಛತ್ತೀಸ್‌ಘಢ ರಾಜ್ಯದಲ್ಲಿ ಪ್ರತಿಯೊಂದು ಪುಟ್ಟ ಮನೆಯಲ್ಲಿಯೂ ಶೌಚಾಲಯ ಇರುವುದನ್ನು ಕಾಣಬಹುದಾಗಿದೆ ಎಂದರು. ಸ್ವತ್ಛ ಮೇವ ಜಯತೆ ಹಾಗೂ ಜಲಾಮೃತ ಜನಜಾಗೃತಿ ಸಂಬಂಧಿಸಿದಂತೆ ಸ್ಲೆಡ್‌ ಶೋ ಮೂಲಕ ಮಾಹಿತಿ ನೀಡುವಂತೆ ಲೋಕೇಶ್ವರಿ ಗೋಪಾಲ್‌ ಅವರು ಸಲಹೆ ಮಾಡಿದರು. .

ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಅವರು ಸ್ವತ್ಛ ಮೇವ ಜಯತೆ ಹಾಗೂ ಜಲಾಮೃತ ಜನ ಜಾಗೃತಿ ಕುರಿತ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಗಿರೀಶ್‌ ಕಾರ್ನಾಡ್‌ ಅವರ ನಿಧನ ಹಿನ್ನೆಲೆ ಸಂತಾಪ ಸೂಚಿಸಲಾಯಿತು. ಗ್ರೀನ್‌ ಸಿಟಿ ಫೊರಂ ಸ್ಥಾಪಕ ಅಧ್ಯಕ್ಷರಾದ ಚೆಯ್ಯಂಡ ಸತ್ಯ, ಮೊಂತಿ ಗಣೇಶ್‌, ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರಿಕಂಠಮೂರ್ತಿ ಅವರು ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪರಿಸರ ಗೀತೆ ಹಾಡಿದರು. ಮನೋಜ್‌ ಕಾರ್ಯಕ್ರಮ ನಿರೂಪಿಸಿದರು. ಗುಡೂರು ಭೀಮಸೇನ ವಂದಿಸಿದರು.

“104 ಗ್ರಾಮ ಪಂಚಾಯತ್‌ಗಳಲ್ಲಿ ಅಭಿಯಾನ’‌
ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ ಅವರು ಮಾತನಾಡಿ ಸ್ವಚ್ಛ ಮೇವ ಜಯತೇ ಆಂದೋಲನವು ಜಿಲ್ಲೆಯ 104 ಗ್ರಾಮ ಪಂಚಾಯತ್‌ಗಳಲ್ಲಿ ಒಂದು ತಿಂಗಳ ಕಾಲ ಗ್ರಾಮಸ್ಥರ ಸಹಕಾರದಲ್ಲಿ ಜನ ಜಾಗೃತಿ ಹಾಗೂ ಇದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವುದರ ಮೂಲಕ ನಡೆಯಲಿದೆ ಎಂದರು. ಗ್ರಾಮೀಣ ಸಮುದಾಯಕ್ಕೆ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಮಾಡುವ ಬಗ್ಗೆ ಮಾಹಿತಿ ನೀಡುವುದು, ವೈಯಕ್ತಿಕ ಸಮುದಾಯ ಮತ್ತು ಸಾಂಸ್ಥಿಕ ಶೌಚಾಲಯಗಳ ನಿರ್ವಹಣೆ ಮಾಡುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ನೀಡುವುದು, ಜಲಾಮೃತ ಹಾಗೂ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆ ಕುರಿತು ಕಾರ್ಯಕ್ರಮ ಹಮ್ಮಿಕೊಂಡು ಶಾಲೆ, ಅಂಗನವಾಡಿ, ಸರ್ಕಾರಿ ಜಾಗದಲ್ಲಿ ಹಾಗೂ ನರೇಗಾ ಯೋಜನೆಯಡಿಯಲ್ಲಿ ಗಿಡ ನಡುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. ಈ ಕಾರ್ಯಕ್ರಮಗಳಿಗೆ ಪೂರಕವಾಗಿ ಒಂದು ತಿಂಗಳು ಪೂರ್ತಿಯಾಗಿ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಮೂಲಕ ಜಾಗೃತಿ ನೀಡಲಾಗುತ್ತಿದೆ. ಜಿಲ್ಲೆಯ ಮೂರು ತಾಲ್ಲೂಕಿನಲ್ಲಿ ಸ್ವಚ್ಛತಾ ರಥದ ಚಾಲನೆ ಮಾಡಿ ಜನ ಜಾಗೃತಿ ಮೂಡಿಸಲಿದೆ ಎಂದು ಜಿ.ಪಂ.ಸಿಇಒ ಅವರು ಹೇಳಿದರು.

ಸ್ವಚ್ಛತೆ ರಥಕ್ಕೆ ಚಾಲನೆ
ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನ ಜಾಗೃತಿ ಕಾರ್ಯಕ್ರಮದ ಸ್ವಚ್ಛತೆ ರಥಕ್ಕೆ ಶಾಸಕ‌ ಎಂ.ಪಿ.ಅಪ್ಪಚ್ಚುರಂಜನ್‌ ಅವರು ‌ ಚಾಲನೆ ನೀಡಿದರು. ಸ್ವಚ್ಛತಾ ರಥ ವಾಹನವು ಜುಲೈ, 10 ರವರೆಗೆ ಸಂಚರಿಸಲಿದೆ. ಜಿಲ್ಲೆಯ ಮೂರು ತಾಲೂಕುಗಳ ‌ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸ್ವಚ್ಛತಾ ರಥದ ಮೂಲಕ ‌ ಜಾಗೃತಿ ಮೂಡಿಸಲಾಗುತ್ತದೆ.

ಜಲಾಮೃತ ಪರಿಸರ ದಿನಾಚರಣೆ, ಪರಿಸರ ಸಂರಕ್ಷಣೆ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಂಗಡಣೆ ಬಗ್ಗೆ ಜಾಗೃತಿ ಹಾಗೂ 41 ಗ್ರಾಮ ಪಂಚಾಯಿತಇ ಗಳಲ್ಲಿ ತ್ಯಾಜ್ಯ ನಿರ್ವಹಣೆಯ ಅನುಷ್ಟಾನಗೊಳಿಸಲು ಚಾಲನೆ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಶುಚಿತ್ವ, ಕೈ ತೊಳೆಯುವ ಮಹತ್ವ, ಕಿಶೋರಿಯರಿಗೆ ಆರೋಗ್ಯ ಮಾಹಿತಿ ಹಾಗೂ ತ್ಯಾಜ್ಯದಿಂದ ವಿವಿಧ ಮಾದರಿಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರತಿ ಗ್ರಾ.ಪಂ. ಆವರಣದಲ್ಲಿ ಮತ್ತು ಪ್ರತಿ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗೋಡೆ ಬರಹ ಚಿತ್ರ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.