ನಕಲಿ ಐಟಿ ಅಧಿಕಾರಿ ದಾಳಿ: ಮಡಿಕೇರಿಯಲ್ಲಿ ವ್ಯಾಪಾರಿಗೆ ಪಂಗನಾಮ


Team Udayavani, Jan 25, 2023, 11:53 PM IST

money 2

ಮಡಿಕೇರಿ: ತಾನು ಐಟಿ ಅಧಿಕಾರಿ ಎಂದು ಹೇಳಿಕೊಂಡು ವ್ಯಾಪಾರಿಯೊಬ್ಬರಿಂದ ಹಣ ಲಪಟಾ ಯಿಸಿದ ಸಿನಿಮೀಯ ಮಾದರಿಯ ಪ್ರಕರಣವೊಂದು ಗೋಣಿಕೊಪ್ಪಲಿನಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗೋಣಿಕೊಪ್ಪಲಿನ ಪಾಲಿಬೆಟ್ಟ ರಸ್ತೆ ಯಲ್ಲಿರುವ ವ್ಯಾಪಾರ ಮಳಿಗೆಯೊಂದಕ್ಕೆ ಹಳದಿ ಬಣ್ಣದ ಸಂಖ್ಯಾ ಫ‌ಲಕದ ಬೆಂಗಳೂರು ನೋಂದಣಿಯ ಕಾರಿನಲ್ಲಿ ಬಂದ ಇಳಿ ವಯಸ್ಸಿನ ವ್ಯಕ್ತಿ ತಾನು ಐಟಿ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ.

ದಾಖಲೆಗಳನ್ನು ಪರಿಶೀಲಿಸ ಬೇಕಾಗಿದ್ದು, ಇಲ್ಲಿ ಯಾರೂ ಇರಬಾರದು ಮಾಲಕರು ಮಾತ್ರ ಇರಬೇಕೆಂದು ತಾಕೀತು ಮಾಡಿದ್ದಾನೆ. ಈತನ ಸೂಚನೆಯಂತೆ ಅಲ್ಲಿದ್ದವರೆಲ್ಲರು ಹೊರ ಹೋಗಿದ್ದಾರೆ. ಮಾಲಕ ಮಾತ್ರ ತನ್ನ ಬಳಿ ಇದ್ದ ಎಲ್ಲ ದಾಖಲೆಗಳನ್ನು ನಕಲಿ ಅಧಿಕಾರಿಗೆ ನೀಡಿದ್ದಾರೆ. ಐಟಿ ಅಧಿಕಾರಿಯಂತೆಯೇ ದಾಖಲೆಗಳನ್ನು ಪರಿಶೀಲಿಸಿದ ವಂಚಕ ಲೋಪಗಳಿದೆ ಎಂದು ಹೇಳಿ 3,28,000 ರೂ. ದಂಡ ಪಾವತಿಸುವಂತೆ ರಶೀದಿಯೊಂದನ್ನು ಬರೆದು ನೀಡಿದ್ದಾನೆ.

ಇದನ್ನು ನಂಬಿದ ವ್ಯಾಪಾರಿ ತನ್ನ ಬಳಿ ಈಗ ಹಣವಿಲ್ಲ ಎಂದು ಹೇಳಿದ್ದಾರೆ. ಹಾಗಿದ್ದರೆ ಮುಂದಿನ 5 ದಿಗಳೊಳಗೆ ಬೆಂಗಳೂರಿನ ಐಟಿಯ ಕೇಂದ್ರ ಕಚೇರಿಗೆ ಭೇಟಿ ನೀಡಿ ದಾಖಲೆಗಳೆಲ್ಲವನ್ನು ತೋರಿಸಿ ದಂಡ ಪಾವತಿಸುವಂತೆ ಸೂಚನೆ ನೀಡಿದ ನಕಲಿ ಅಧಿಕಾರಿ ಅಲ್ಲಿಂದ ತೆರಳುತ್ತಾನೆ. ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಬಂದ ವಂಚಕ ಬೆಂಗಳೂರಿಗೆ ಬರಲು ಸಾಧ್ಯವಾಗದಿದ್ದಲ್ಲಿ ಇಲ್ಲೇ ಸೆಟಲ್‌ ಮೆಂಟ್‌ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದ. ಈಗ ನನ್ನ ಬಳಿ ಹಣವಿಲ್ಲ, ಸ್ವಲ್ಪ ಹೊತ್ತಿನಲ್ಲಿ ಹೊಂದಿಸಿ ಕೊಡುವೆ ಎಂದು ತಿಳಿಸಿದ ವ್ಯಾಪಾರಿಯ ಮಾತಿಗೆ ಒಪ್ಪಿದ ವಂಚಕ ಒಂದು ಗಂಟೆ ಕಾಲ ಕಾದು ಕುಳಿತುಕೊಂಡಿದ್ದ. ಬೆಂಗಳೂರಿಗೆ ಹೋಗುವುದು ಕಷ್ಟಕರವೆಂದು ಭಾವಿಸಿದ ವ್ಯಾಪಾರಿ ಹೇಗೋ ಸೆಟಲ್‌ ಮೆಂಟ್‌ಗೆ ಬೇಕಾದ ಹಣ ಹೊಂದಿಸಿ ತಂದು ನಕಲಿ ಅಧಿಕಾರಿಗೆ ನೀಡುತ್ತಾರೆ. ಹಸುರು ಶಾಯಿಯ ಪೆನ್ನನ್ನು ಬಳಸಿ ಹಳೆಯ ರಶೀದಿಯ ಮೇಲೆ ಇನ್ನು ದಂಡ ಪಾವತಿಸುವಂತಿಲ್ಲವೆಂದು ಬರೆದ ಇಳಿ ವಯಸ್ಸಿನ ವ್ಯಕ್ತಿ ಹಣ ಪಡೆದು ಅಲ್ಲಿಂದ ಮರಳಿದ್ದ.

ನಡೆದ ವಿಚಾರವನ್ನೆಲ್ಲ ವ್ಯಾಪಾರಿ ಇತರರೊಂದಿಗೆ ಹಂಚಿಕೊಂಡಾಗ ಕಾರ್ಯಾಚರಣೆ ಬಗ್ಗೆ ಸಂಶಯ ವ್ಯಕ್ತವಾಗಿತ್ತು. ಈ ಕಾರಣದಿಂದ ಬೆಂಗಳೂರು ಕೇಂದ್ರ ಐಟಿ ಕಚೇರಿಗೆ ಕರೆ ಮಾಡಿ ಕೇಳಿದಾಗ ಆ ರೀತಿಯ ಯಾವುದೇ ದಾಳಿ ನಾವು ನಡೆಸಿಲ್ಲವೆಂದು ತಿಳಿದು ಬಂದಿದೆ. ಎಲ್ಲೂ ಸಂಶಯ ಬಾರದ ರೀತಿಯಲ್ಲಿ ನಡೆದುಕೊಂಡ ಇಳಿವಯಸ್ಸಿನ ವಂಚಕನ ಬಣ್ಣ ಬಯಲಾಗುವ ಹೊತ್ತಿಗೆ ಕಾಲಮಿಂಚಿ ಹೋಗಿತ್ತು. ಹಣ ಕಳೆದುಕೊಂಡ ವ್ಯಾಪಾರಿ ಪಶ್ಚಾತ್ತಾಪ ಪಟ್ಟುಕೊಂಡು ಸುಮ್ಮನಾಗಿದ್ದಾರೆ. ಇಲ್ಲಿಯವರೆಗೆ ದೂರು ದಾಖಲಾಗಿಲ್ಲವೆಂದು ತಿಳಿದು ಬಂದಿದೆ.
ತಮಿಳಿನಲ್ಲಿ ಮಾತನಾಡುತ್ತಿದ್ದ ವಂಚಕ ಬಂದ ಕಾರಿನಲ್ಲಿ ಆತ ಮತ್ತು ಚಾಲಕ ಮಾತ್ರ ಇದ್ದರು ಎನ್ನುವುದು ಸ್ಪಷ್ಟವಾಗಿದೆ. ಆತ ನೀಡಿದ್ದ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದಾಗ ಸಂಖ್ಯೆ ಚಾಲ್ತಿಯಲ್ಲಿ ಇಲ್ಲ ಎಂದು ಉತ್ತರ ಬರುತ್ತಿದೆ ಎಂದು ಹೇಳಲಾಗಿದೆ. ಒಟ್ಟಿನಲ್ಲಿ ಸಿನಿಮೀಯ ಮಾದರಿಯಲ್ಲಿ ನಕಲಿ ಐಟಿ ಅಧಿಕಾರಿಯೊಬ್ಬ ವ್ಯಾಪಾರಿಗೆ ಪಂಗನಾಮ ಹಾಕಿರುವ ಪ್ರಕರಣ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.