ಸ್ವಚ್ಛಮೇವ ಜಯತೆ: ಕೊಡಗು ಪರಿವರ್ತನ ಮೇಳದಲ್ಲಿ ಜನಜಾಗೃತಿ


Team Udayavani, Jul 7, 2019, 5:35 AM IST

swatch

ಮಡಿಕೇರಿ :ಸ್ವಚ್ಛ ಭಾರತ್‌ ಮಿಷನ್‌ ವತಿಯಿಂದ ಸ್ವಚ್ಛ ಮೇವ ಜಯತೆ ಕಾರ್ಯಕ್ರಮವು ಜಿಲ್ಲೆಯಲ್ಲಿ ಜೂ.10 ರಂದು ಚಾಲನೆಗೊಂಡಿದ್ದು, ಗ್ರಾಮ ಪಂಚಾಯತ್‌ ಮಟ್ಟದಲ್ಲಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ತ್ಯಾಜ್ಯ ವಿಂಗಡಣೆ, ಜಲಾಮೃತ-ಜಲ ಸಂರಕ್ಷಣೆ, ಸ್ವಚ್ಛತೆ, ಶ್ರಮದಾನ, ಗಿಡ ನೆಡುವ ಕಾರ್ಯಕ್ರಮ ಹಾಗೂ ಶೌಚಾಲಯ ನಿರ್ವಹಣೆ ಮತ್ತು ವಿದ್ಯಾರ್ಥಿಗಳಿಗೆ ತ್ಯಾಜ್ಯದಿಂದ ವಿವಿಧ ಮಾದರಿಗಳ ತಯಾರಿ ಸ್ಪರ್ಧೆ ನಡೆಸುವುದರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜು.10 ರಂದು ಅಭಿಯಾನ ಸಮಾರೋಪ ಗೊಳ್ಳುತ್ತಿದ್ದರೂ ಜಿಲ್ಲೆಯಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷ್ಮಿಪ್ರಿಯ ಅವರು ತಿಳಿಸಿದ್ದಾರೆ.

ಸ್ವಚ್ಛ ಮೇವ ಜಯತೆ ಕಾರ್ಯಕ್ರಮದಡಿ ಕೊಡಗು ಜಿಲ್ಲಾ ಪಂಚಾಯತ್‌ ರಾಜ್ಯದಲ್ಲಿಯೇ ಪ್ರಪ್ರಥ ಮವಾಗಿ ಬೃಹತ್‌ ”ಕೊಡಗು ಪರಿವರ್ತನ ಮೇಳ-2019”ಸ್ವಚ್ಛತೆಯ ಸಾಧನೆಗೆ ಪರ್ಯಾಯ ಮಾರ್ಗಗಳ ಅನ್ವೇಷಣೆ ಮತ್ತು ಮಾರಾಟ ಮೇಳವನ್ನು ಕ್ಲೀನ್‌ ಕೂರ್ಗ ಇನಿಸಿಯೆಟಿವ್‌ (ಸಿಸಿಐ) ಕೊಡಗು ಹಾಗೂ ಎಲ್ಲ ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಜೂನಿಯರ್‌ ಕಾಲೇಜುನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಸಂಘ ಸಂಸ್ಥೆಗಳಾದ ಚೆಶೈರ್‌ ಹೋಮ್‌, ಗೋಣಿಕೊಪ್ಪ, ಸ್ವಸ್ಥ ಸಂಸ್ಥೆ, ಸುಂಟಿಕೊಪ್ಪ, ರಿಬಿಲ್ಡ್ ಕೊಡಗು, ಡೆಟ್ಯಾಕ್‌ ಸಲ್ಯೂಷನ್‌, ಬ್ಯಾಂಬೊ ಇಂಡಿಯಾ, ಶಕ್ತಿ/ ಮಹಿಳಾ ಮತ್ತು ಮಕ್ಕಳ ಆರೋಗ್ಯ ಉತ್ಪನ್ನಗಳ ಜಾಗೃತಿ ಸಂಸ್ಥೆ, ಪರಿಸರ ಪ್ರಿಯ ಚೆನ್ನಪಟ್ಟಣ ಗೊಂಬೆಗಳ ಮಳಿಗೆ, ಇ ತ್ಯಾಜ್ಯ ಸಂಗ್ರಹಣೆ ಸಂಸ್ಥೆ, ಅಗ್ರೀ ಪ್ಲೆಕ್ಸ್‌ ಸ್ವಾಭಾವಿಕ ಗೊಬ್ಬರ ತಯಾರಿಕೆ, ಬಯೋ ಇಂಧ‌ನ ಶಕ್ತಿ ಸಂಸ್ಥೆಗಳು ಕೊಡಗು ಪರಿವರ್ತನ ಮೇಳ 2019ರಲ್ಲಿ ಭಾಗವಹಿಸಿ ಪ್ಲಾಸ್ಟಿಕ್‌ ಬದಲಿಗೆ ಬಳಕೆ ಮಾಡಬಹುದಾದ ವಿವಿಧ ವಿನ್ಯಾಸಗಳ ಬಟ್ಟೆ ಬ್ಯಾಗ್‌ಗಳು, ಕಾಂಪೋಸ್ಟ್‌ ತಯಾರಿಕೆಯ ವಿವಿಧ ವಿಧಾನಗಳು, ಮಹಿಳಾ ಮತ್ತು ಮಕ್ಕಳ ಆರೋಗ್ಯ ಉತ್ಪನ್ನಗಳ ಕುರಿತು ಜಾಗೃತಿ, ಪೇಪರ್‌ ಉತ್ಪನ್ನಗಳು ಹಾಗೂ ಎಲೆಯಿಂದ ತಯಾರಿಸಿದ ಉತ್ಪನ್ನಗಳು, ಪರಿಸರ ಪ್ರಿಯ ಉತ್ಪನ್ನಗಳು, ಕಡಿಮೆ ಇಂದನ ಶಕ್ತಿ ಹೆಚ್ಚು ಸಾಮರ್ಥ್ಯದ ಒಲೆಗಳು, ಬಯೋಗ್ಯಾಸ್‌, ಸೋಲಾರ್‌, ಉತ್ಪನ್ನಗಳ ಕುರಿತು ಜಾಗೃತಿ, ನೀರಿನ ಸಂರಕ್ಷಣೆ ಹಾಗೂ ಮಳೆ ನೀರಿನ ಕೊಯ್ಲು ಕುರಿತು ಪ್ರಾತ್ಯಕ್ಷಿಕೆ ಹಾಗೂ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ.

ಕೊಡಗು ಪರಿವರ್ತನ ಮೇಳದಲ್ಲಿ ಇ-ತ್ಯಾಜ್ಯವನ್ನು ಸಂಗ್ರಹಿಸಲಾಗುವುದು. ಸಾರ್ವಜನಿಕರು ಇ ತ್ಯಾಜ್ಯವನ್ನು ತಂದು ಕೊಡಲು ಸಿಇಒ ವಿನಂತಿ ಮಾಡಿದ್ದಾರೆ. ಇ-ತ್ಯಾಜ್ಯ (ಎಲೆಕ್ಟ್ರಾನಿಕ್‌ ಮತ್ತು ಎಲೆಕ್ಟ್ರಿಕಲ್ ವಸ್ತುಗಳು) ವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ, ಮೇಳ ನಡೆಯುವ ಸ್ಥಳದಲ್ಲಿ ಇ-ತ್ಯಾಜ್ಯ ಹಾಕಲು ಇ-ಕೇರ್‌ ಬುಟ್ಟಿಗಳನ್ನು ಅಳವಡಿಸಲಾಗಿದೆ.

ಸಾರ್ವಜನಿಕರು ಬೇಡವಾದ ಇ-ತ್ಯಾಜ್ಯ ವನ್ನು ಇಲ್ಲಿ ನೀಡಬಹುದು. ನೀಡಿದ ಇ-ತ್ಯಾಜ್ಯದಿಂದ ಅರಣ್ಯ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬದಲಿ ವ್ಯವಸ್ಥೆ

ಈ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ ಪ್ರತಿನಿಧಿಗಳು, ತಾಲೂಕು ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ ಪ್ರತಿನಿಧಿಗಳು, ಸಾರ್ವಜನಿಕರು, ವರ್ತಕರು, ಹೋಟೆಲ್, ಹೊಂಸ್ಟೇ, ರೆಸಾರ್ಟ್‌, ಅಂಗಡಿ ಹಾಗೂ ಸಂಕೀರ್ಣಗಳ ಮಾಲಕರು, ಕಲ್ಯಾಣ ಮಂಟಪಗಳು, ದೇವಸ್ಥಾನ ಸಮಿತಿಗಳು, ಶಾಲಾ, ಕಾಲೇಜು, ಅಧ್ಯಾಪಕರು/ ವಿದ್ಯಾರ್ಥಿಗಳು, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬಂದಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರ್ವರೂ ಭಾಗವಹಿಸಿ ಪ್ಲಾಸ್ಟಿಕ್‌ ಅನಾಹುತದ ಹಾಗೂ ಬದಲಿ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯುವಂತೆ ಜಿಲ್ಲಾ ಪಂಚಾಯತ್‌ ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ಕೋರಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.