ಮಾಕುಟ್ಟ ರಸ್ತೆ ದುರಸ್ತಿಗೆ ಅಧಿಕಾರಿಗಳ ಸಹಕಾರ ಅಗತ್ಯ : ಹಿರಲಾಲ್
ಅರಣ್ಯ ಸಮನ್ವಯ ಸಭೆ
Team Udayavani, Jan 20, 2020, 5:19 AM IST
ಮಡಿಕೇರಿ: ಮಾಕುಟ್ಟ ರಸ್ತೆ ದುರಸ್ತಿ ಕಾರ್ಯ ನಡೆಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳು ಆಗಮಿಸುವ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕೆಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್ ನಿರ್ದೇಶನ ನೀಡಿದ್ದಾರೆ.
ಅರಣ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಗರದ ಅರಣ್ಯ ಭವನದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್ ಅವರು ಪ್ರಕೃತಿ ವಿಕೋಪದಿಂದಾಗಿ ರಸ್ತೆ ಹಾಗೂ ಸೇತುವೆ ಬಳಿ ಬಿದ್ದಿರುವ ಮರಗಳನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗುವುದು. ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸ್ಪಂದಿಸದಿದ್ದರೆ ನನ್ನ ಗಮನಕ್ಕೆ ತರುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಹೇಳಿದರು.
ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ನಾರಾಯಣ ಸ್ವಾಮಿ ಅವರು ಪ್ರವಾಹದಿಂದ ರಸ್ತೆ ಹಾಗೂ ಸೇತುವೆ ಬಳಿ ಬಿದ್ದಿರುವ ಮರಗಳನ್ನು ಸ್ಥಳದಲ್ಲಿಯೇ ಹರಾಜು ಮಾಡಿದರೆ ಹೇಗೆ ಎಂದು ಅವರು ಸಲಹೆ ಮಾಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ದೂರು ಬಾರದಂತೆ ನೋಡಿಕೊಳ್ಳಬೇಕು. ಸಮಯೋಚಿತವಾಗಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಕಿರಿಕಿರಿ ಮಾಡಿಕೊಳ್ಳುವುದು ಸರಿಯಲ್ಲ. ಆ ನಿಟ್ಟಿನಲ್ಲಿ ಜನರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಸಲಹೆ ಮಾಡಿದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ನಾರಾಯಣ ಸ್ವಾಮಿ ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ನಾಗರಹೊಳೆಯ ಗಿರಿಜನ ಹಾಡಿ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಮನೆ ನಿರ್ಮಾಣ, ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಭಾಕರನ್, ಶಿಂಧೆ, ಕಾರ್ಯಪ್ಪ, ಶಿವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸೀಮಾ, ದಯಾನಂದ, ರೋಷನ್, ಆಂಥೋನಿ, ಸೆಸ್ಕ್ ಇಇ ಸೋಮಶೇಖರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸುರೇಶ್, ಶಿವರಾಮು, ವೇಣುಗೋಪಾಲ್, ತಾ.ಪಂ.ಇಒಗಳಾದ ಲಕ್ಷಿ¾, ಸುನಿಲ್ ಕುಮಾರ್, ತಾಲ್ಲೂಕು ಸಮಾಜ ಕಲ್ಯಾಣಾದಿಕಾರಿ ಶೇಖರ್ ಇತರರು ಉಪಸ್ಥಿತರಿದ್ದರು.
ಆರ್ಟಿಸಿ ನೀಡಬೇಕಿದೆ
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಅರಣ್ಯ ಹಕ್ಕುಪತ್ರ ನೀಡಿರುವುದಕ್ಕೆ ಆರ್ಟಿಸಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ ಕಾರ್ಯ ಕೈಗೊಳ್ಳಲಾಗುವುದು. ನಾಗರಹೊಳೆ ವ್ಯಾಪ್ತಿಯ ಸಮಸ್ಯೆಗಳಿರುವ ಹಾಡಿ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದ್ದು, ಯಾವುದೇ ರೀತಿ ತೊಂದರೆ ನೀಡಬಾರದು ಎಂದು ತಿಳಿಸಿದರು.
ಮೂರು ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದವರು ಹೇಳಿದರು.
ಜಿಲ್ಲೆಯಲ್ಲಿ ಅರಣ್ಯ ಹಕ್ಕುಪತ್ರ ನೀಡಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ