ಮಡಿಕೇರಿಯಲ್ಲಿ ಬಂಟರ ಸಂಘದ ಕ್ರೀಡೋತ್ಸವಕ್ಕೆ ವಿಧ್ಯುಕ್ತ ಚಾಲನೆ
Team Udayavani, May 13, 2019, 6:15 AM IST
ಮಡಿಕೇರಿ: ಕೊಡಗು ಜಿಲ್ಲಾ ಬಂಟರ ಯುವ ಘಟಕದ ವತಿಯಿಂದ ಸಮುದಾಯ ಬಾಂಧವರ ಜಿಲ್ಲಾಮಟ್ಟದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಾಗೂ 6ನೇ ವರ್ಷದ ಬಂಟರ ಸಂಘದ ಕ್ರೀಡೋತ್ಸವಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿಧ್ಯುಕ್ತ ಚಾಲನೆ ನೀಡಲಾಯಿತು.
ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ರàವಿಂದ್ರ ರೈ ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಬಂಟರ ಯುವ ಘಟಕ ವಿಭಿನ್ನ ಚಿಂತನೆಗಳೊಂದಿಗೆ ಸಮುದಾಯದ ಸಂಘಟನೆಗೆ ಪೂರಕವಾಗಿ ಕ್ರೀಡೋತ್ಸವವನ್ನು ಆಯೋಜಿಸಿರುವುದು ಹೆಮ್ಮೆಯ ವಿಚಾರ. ಮುಂಬರುವ ದಿನಗಳಲ್ಲಿ ಇಂತಹ ವಿಭಿನ್ನ ಕಾರ್ಯಕ್ರಮಗಳು ನಡೆಯುವಂತಾಗಬೇಕೆಂದು ಆಶಿಸಿ, ಇದಕ್ಕೆ ಜನಾಂಗ ಬಾಂಧವರು ತುಂಬು ಸಹಕಾರವನ್ನು ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ಸಂಘದ ಗೌರವಾಧ್ಯಕ್ಷ ಕೆ.ಆರ್. ಬಾಲಕೃಷ್ಣ ರೈ ಮಾತನಾಡಿ, ಯುವ ಘಟಕ ಆಯೋಜಿಸಿರುವ ಕ್ರೀಡೋ ತ್ಸವದ ಉದ್ದೇಶ ಮತ್ತು ತಯಾರಿಯ ಕುರಿತು ವಿವರಿಸಿದರು.
ಶ್ರದ್ಧಾಂಜಲಿ
ಸಭಾ ಕಾರ್ಯಕ್ರಮಕ್ಕೂ ಮೊದಲು ಕಳೆದ ಸಾಲಿನ ಪ್ರಾಕೃತಿಕ ಕೋಪದಲ್ಲಿ ಮಡಿದ ಜನಾಂಗ ಬಾಂಧವರಿಗೆ ಶ್ರದ್ಧಾಂಜಲಿ ಹಾಗೂ ದೇಶಕ್ಕಾಗಿ ಮಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ಬಂಟರ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ನಾರಾಯಣ ರೈ ಧ್ವಜಾರೋಹಣ ನೇರವೇರಿಸಿದರು. ನಂತರ ಇವರು ಮತ್ತು ಉಪಾಧ್ಯಕ್ಷ ರàಂದ್ರ ರೈ ಅವರು ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಪಂದ್ಯಾಟಗಳಿಗೆ ಚಾಲನೆ ನೀಡಿದರು. ಬಳಿಕ ಬಂಟರ ಯುವ ಘಟಕ ಹಾಗೂ ಪತ್ರಕರ್ತರ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಿತು.
ಕೊಡಗು ಜಿಲ್ಲಾ ಬಂಟರ ಯುವ ಘಟಕ ಅಧ್ಯಕ್ಷ ಶರತ್ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಜಯಪ್ರಕಾಶ್ ರೈ, ಬಂಟರ ಸಂಘದ ನಗರಾಧ್ಯಕ್ಷ ಕೃಷ್ಣ ಶೆಟ್ಟಿ, ತಾಲೂಕು ಅಧ್ಯಕ್ಷ ದುಶ್ಯಂತ್ ರೈ, ಬಿ.ಸಿ.ಹರೀಶ್ ರೈ, ವಿಠಲ್ ರೈ, ರಾಜಪೇಟೆ ಶಬರೀಶ್ ಶೆಟ್ಟಿ, ಸೌಮ್ಯ ಶೆಟ್ಟಿ, ಕಾರ್ಯದರ್ಶಿಗಳಾದ ರುಕ್ಮಿಣಿ, ರೇವತಿ ಶೆಟ್ಟಿ, ಖಜಾಂಜಿಗಳಾದ ಯಶೋಧಾ, ಮಾಲತಿ, ತಾಲೂಕು ಹಾಗೂ ವಿವಿಧ ಹೋಬಳಿ ಘಟಕದ ಪ್ರಮುಖರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ