ಹಲವೆಡೆ ಧಾರಾಕಾರ ಮಳೆ
Team Udayavani, Jul 18, 2020, 7:17 AM IST
ಹಾರಂಗಿ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಶುಕ್ರವಾರ 4 ಕ್ರಸ್ಟ್ ಗೇಟ್ಗಳ ಮೂಲಕ ನೀರನ್ನು ಹೊರ ಬಿಡಲಾಗಿದೆ.
ಚಿಕ್ಕಮಗಳೂರು/ಮಡಿಕೇರಿ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬುಧವಾರ ರಾತ್ರಿಯಿಂದಲೇ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕುದುರೆಮುಖ, ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ ಪ್ರದೇಶದಲ್ಲೂ ಮಳೆಯಾಗುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ, ಕಾರವಾರ, ಅಂಕೋಲಾ, ಕುಮಟಾ, ಭಟ್ಕಳದಲ್ಲೂ ಭಾರೀ ಮಳೆಯಾಗಿದೆ. ಕೊಡಗಿನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕಾವೇರಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ದಕ್ಷಿಣ ಕೊಡಗಿನ ಬಿರುನಾಣಿ ರಸ್ತೆಯ ಸೇತುವೆ ಮೇಲೆ ನೀರು ಹರಿದಿದೆ. ಬ್ರಹ್ಮಗಿರಿ ಅರಣ್ಯ ವ್ಯಾಪ್ತಿಯ ಈ ಪ್ರದೇಶದ ಜನರು ಸಂಪರ್ಕ ಕಡಿತಕ್ಕೆ ಒಳಗಾಗಿದ್ದಾರೆ. ಕಕ್ಕಟ್ಟ್ ಪೊಳೆ ತುಂಬಿ ಹರಿಯುತ್ತಿದೆ. ಲಕ್ಷ್ಮಣ ತೀರ್ಥ, ರಾಮ ತೀರ್ಥ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.
ಹಾರಂಗಿ ನೀರು ಬಿಡುಗಡೆ
ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಶುಕ್ರವಾರ 4 ಕ್ರಸ್ಟ್ ಗೇಟ್ಗಳ ಮೂಲಕ ನೀರನ್ನು ಹೊರ ಬಿಡಲಾಗಿದೆ. ಬೆಳಗ್ಗೆ ಜಲಾಶಯದ ಕ್ರಸ್ಟ್ ಗೇಟ್ಗಳಿಗೆ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪೂಜೆ ಸಲ್ಲಿಸುವುದರೊಂದಿಗೆ ಸೈರನ್ ಮೊಳಗಿಸುವ ಮೂಲಕ 2,500 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಯಿತು. ಕಳೆದ ಎರಡು ವರ್ಷಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಹಿನ್ನೆಲೆಯಲ್ಲಿ ಈ ಬಾರಿ ಜಲಾಶಯ ಭರ್ತಿಗೆ 6 ಅಡಿ ಬಾಕಿ ಇರುವಾಗಲೇ ನೀರು ಹೊರಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ