“ಯಾಂತ್ರೀಕೃತ ನಾಟಿ ಪದ್ಧತಿಯಿಂದ ಹೆಚ್ಚಿನ ಇಳುವರಿ’


Team Udayavani, Aug 11, 2017, 7:35 AM IST

Z-KRISHI-1.jpg

ಮಡಿಕೇರಿ: ಭತ್ತ ಬೆಳೆಯಲ್ಲಿ ಯಾಂತ್ರೀ ಕೃತ ನಾಟಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯುವಂತಾಗಬೇಕು ಎಂದು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್‌ ಅವರು ಕರೆ ನೀಡಿದ್ದಾರೆ.  

ಜಿಲ್ಲಾ ಪಂಚಾಯತ್‌, ಕೃಷಿ ಇಲಾಖೆ ವತಿಯಿಂದ ಭೂಚೇತನ ಯೋಜನೆಯಡಿ ಕಗ್ಗೊàಡ್ಲುವಿನ ಪ್ರಗತಿಪರ ರೈತ ಪೊಡನೋಳಂಡ ಕೆ. ಬೋಪಣ್ಣ ಮತ್ತು ಕೋದಂಡ ಬಿ. ದೇವಯ್ಯ ಅವರ ಭತ್ತದ ಗದ್ದೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಭತ್ತ ಬೆಳೆಯಲ್ಲಿ ಯಾಂತ್ರೀಕೃತ ನಾಟಿ ಪದ್ಧತಿಯ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. 
 
ಜಿಲ್ಲೆಯಲ್ಲಿ ಶೇ. 40ಕ್ಕೂ ಹೆಚ್ಚು ಗದ್ದೆ ಭೂಮಿ ನಾನಾ ಕಾರಣಗಳಿಂದ ಪಾಳು ಬಿದ್ದಿದ್ದು, ಈ ಪ್ರದೇಶಗಳಲ್ಲಿ ಯಾಂತ್ರೀಕೃತ ನಾಟಿ ಪದ್ಧತಿ ಮೂಲಕ ಭತ್ತ ಕೃಷಿ ಮಾಡಿ, ಹೆಚ್ಚಿನ ಇಳುವರಿ ಪಡೆಯುವುದರ ಜೊತೆಗೆ ಕಾರ್ಮಿಕರ ಕೊರತೆ ನೀಗಿಸುವತ್ತ ರೈತರು ಮುಂದಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ ಕೃಷಿಯಿಂದ ಲಾಭವಿಲ್ಲವೆಂದು ಯುವಜನರು ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗುವುದು ಹೆಚ್ಚಾಗಿದೆ. ಇದರಿಂದ ಕೃಷಿ ಬೆಳೆ ಉತ್ಪಾದನೆ ಕುಂಠಿತವಾಗಿ, ಆಹಾರದ  ಕೊರತೆ ಉಂಟಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಲ್ಲ.  ಆದ್ದರಿಂದ ಭತ್ತದ ಭೂಮಿ ಪಾಳು ಬಿಡದೆ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಲಾಭದಾಯಕ ಕೃಷಿಯತ್ತ ಹೆಜ್ಜೆ ಹಾಕಬೇಕಿದೆ ಎಂದು ಬಿ.ಎ. ಹರೀಶ್‌ ಅಭಿಪ್ರಾಯಪಟ್ಟರು.  
 
ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್‌ ಮಾತನಾಡಿ, ಇಂದಿನ ಯುವಜನರು ಕೃಷಿಯಿಂದ ವಿಮುಖರಾಗುತ್ತಿರುವುದರಿಂದ ಆಹಾರದ ಉತ್ಪಾದನೆಗಿಂತ, ಉಪಯೋಗಿಸು ವುದು ಹೆಚ್ಚಾಗಿದೆ. ಆದ್ದರಿಂದ ಉತ್ಪಾದನೆಯತ್ತ ಹೆಚ್ಚು ಗಮನ ಹರಿಸಬೇಕಿದೆ ಎಂದರು. 
 
ಕೃಷಿ ಕ್ಷೇತ್ರದಲ್ಲಿ ಲಾಭ ಕಂಡುಕೊಳ್ಳಲು ಕೃಷಿ ಯಾಂತ್ರೀಕರಣ ಬಳಸಿಕೊಳ್ಳುವಂತಾಗಬೇಕು, ಕೃಷಿ ಯಾಂತ್ರೀಕರಣಕ್ಕಾಗಿ ಸರ್ಕಾರ ಸಹಾಯ ಧನದಡಿ ಸೌಲಭ್ಯ ನೀಡಲಿದ್ದು, ಇದನ್ನು ಪಡೆದು ಕೊಳ್ಳುವಂತಾಗಬೇಕು ಎಂದು ಅವರು ಸಲಹೆ ನೀಡಿದರು.   
 
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್‌ ಮಾತನಾಡಿ, ಭತ್ತ ಬೆಳೆಯಲ್ಲಿ ಯಾಂತ್ರೀಕರಣ ನಾಟಿ ಪದ್ಧತಿ ಅಳವಡಿಸಿ ಕೊಳ್ಳುವುದರಿಂದ ಸಮತೋಲನವಾಗಿ ಭತ್ತ ಬೆಳೆಯಬಹುದಾಗಿದೆ. ಕಾರ್ಮಿಕ ಕೊರತೆಯನ್ನು ನೀಗಿಸಬಹುದಾಗಿದೆ. ಕಡಿಮೆ ವೆಚ್ಚದಲ್ಲಿ ಹೆಚ್ಚು ಉತ್ಪಾದನೆ ಮಾಡಬಹುದಾಗಿದೆ ಎಂದು ಹೇಳಿದರು. 

ಮಡಿಕೇರಿ ತಾಲೂಕು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಎ.ಸಿ. ಗಿರೀಶ್‌ ಮಾತನಾಡಿ ಹೊಸ ತಾಂತ್ರಿಕತೆ ಬಳಸಿ ಯಂತ್ರದ ಮೂಲಕ ನಾಟಿ ಮಾಡುವುದು ಅತ್ಯಗತ್ಯವಾಗಿದೆ. ಇದರಿಂದ ಕೃಷಿ ಕಾರ್ಮಿಕರ ಸಂಖ್ಯೆ ಮತ್ತು ಅಗತ್ಯತೆಗಳನ್ನು ಕಡಿಮೆ ಮಾಡಬಹುದಾಗಿದೆ. ಸಮಯಕ್ಕೆ ಸರಿಯಾಗಿ ಆಳ ಮತ್ತು ಅಂತರದಲ್ಲಿ ನಾಟಿ ಮಾಡಬಹುದು. ಪ್ರತೀ ಚದರ ಮೀಟರ್‌ ಪ್ರದೇಶದಲ್ಲಿ ಸೂಕ್ತ ಸಸ್ಯ ಸಂಖ್ಯೆಗಳನ್ನು ಕಾಪಾಡ ಬಹುದು. ನಾಟಿ ಮಾಡಲು ಬೇಕಾದ ಸಸಿಗಳನ್ನು ಬೆಳೆಸಲು ಕಡಿಮೆ ಜಾಗ ಸಾಕಾಗುತ್ತದೆ ಎಂದು ಮಾಹಿತಿ ನೀಡಿದರು.
 
ಕೊಡಗು ಕೃಷಿ ವಿಸ್ತರಣಾ ಕೇಂದ್ರದ ಮುಖ್ಯಸ್ಥ ರಾದ ಕೆಂಚರೆಡ್ಡಿ ಮಾತನಾಡಿ, ಭತ್ತ ಗದ್ದೆಗಳನ್ನು ಪಾಳು ಬಿಡದೆ ಭತ್ತದ ಕೃಷಿ ಮಾಡಬೇಕು. ಭತ್ತ ಕೃಷಿಯಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರಗತಿಪರ ರೈತರಾದ ಪೊಡನೋಳಂಡ ಕೆ. ಬೋಪಣ್ಣ ಮಾತನಾಡಿ, ಎರಡರಿಂದ ಮೂರು ಜನ ಕಾರ್ಮಿಕರ ಸಹಾಯದಿಂದ ಪ್ರತಿ ದಿನದಲ್ಲಿ 4 ಎಕರೆ ಭತ್ತ ನಾಟಿ ಮಾಡಬಹುದಾಗಿದೆ ಎಂದು ತಿಳಿಸಿದರು.
 
ಪೊನ್ನಂಪೇಟೆ ಕೃಷಿ ವಿಸ್ತರಣಾ ಕೇಂದ್ರದ ನಿವೃತ್ತ ಪ್ರಾಧ್ಯಾಪಕರಾದ ಪೂಣಚ್ಚ, ತಾ.ಪಂ.ಸದಸ್ಯರಾದ ರಶ್ಮೀ ಕುಮುದಾ, ಹಾಕತ್ತೂರು ಎಪಿಎಂಸಿ ಸದಸ್ಯರಾದ ನಿರ್ಮಲಾ ನಂಜಪ್ಪ, ರೈತರು, ಹಾಕತ್ತೂರು ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.