![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಎಷ್ಟು ಸಾವಿರ ಕೋಟಿ ಹಣ ಖರ್ಚಾದರೂ ಸರಕಾರ ಜನರ ಜತೆಗಿದೆ: ಮಹೇಶ್
Team Udayavani, Aug 23, 2018, 7:05 AM IST
![z-sa-ra-mahesh-2.jpg](https://www.udayavani.com/wp-content/uploads/2018/08/23/z-sa-ra-mahesh-2.jpg)
ಮಡಿಕೇರಿ: ಮಹಾಮಳೆಯ ಆರ್ಭಟದಿಂದ ನೆಲೆ ಕಳೆದುಕೊಂಡವರಿಗೆ ಹೊಸ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರ ಕೊಡಗಿನ ಜನತೆಯೊಂದಿಗಿದೆ. ಇದಕ್ಕಾಗಿ ಎಷ್ಟು ಸಾವಿರ ಕೋಟಿ ರೂಪಾಯಿ ವೆಚ್ಚವಾದರೂ ಚಿಂತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 41 ಪುನರ್ವಸತಿ ಕೆೇಂದ್ರಗಳಲ್ಲಿ 4 ಸಾವಿರ ಸಂತ್ರಸ್ತರಿದ್ದಾರೆ. ಅವರೆಲ್ಲರಿಗೆ ಮತ್ತೆ ಉತ್ತಮ ಬದುಕನ್ನು ಕಲ್ಪಿಸಲಾಗುವುದು. ಬೆಳೆ ಹಾನಿಗೆ ಅಗತ್ಯ ಪರಿಹಾರ ಒದಗಿಲು ಸರಕಾರ ಬದ್ಧವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.
32 ಪಂಚಾಯತ್ಗಳಲ್ಲಿ ಸಂಕಷ್ಟ
ಒಂದು ವಾರದ ಮಹಾಮಳೆಯಿಂದ ಕೊಡಗು ಜಿಲ್ಲೆಯ 3 ತಾಲೂಕುಗಳ 32 ಗ್ರಾಮ ಪಂಚಾಯತ್ಗಳು ನಲುಗಿವೆ. ಇದರಲ್ಲಿ ಮಡಿಕೇರಿ ತಾಲೂಕು 12, ಸೋಮವಾರಪೇಟೆ 12 ಮತ್ತು ವೀರಾಜಪೇಟೆ ತಾಲೂಕಿನ 8 ಪಂಚಾಯತ್ಗಳೆಂದು ತಿಳಿಸಿದರು. ಈ ಎಲ್ಲಾ ಪ್ರದೇಶಗಳಲ್ಲಿ ಘಟಿಸಿರುವ ಪ್ರಾಕೃತಿಕ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಮಂದಿಗೆ ನೆರವನ್ನು ಒದಗಿಸಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಮತ್ತು ವಿವಿಧ ಇಲಾಖಾ ಅಧಿಕಾರಿಗಳಿಗೆ ಪೂರ್ಣ ಅಧಿಕಾರವನ್ನು ನೀಡಿ, ಅಗತ್ಯವಿರುವ ಎಲ್ಲನೆರವನ್ನು ಒದಗಿಸಲು ನಿರ್ದೇಶ ನೀಡಲಾಗಿದೆ ಎಂದರು.
ನೆರವು ಕಾರ್ಯ ಬಿರುಸು
ಜಿಲ್ಲೆಯ ಎಲ್ಲ 104 ಪಂಚಾಯತ್ಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಅಗತ್ಯ ನೆರವು ಒದಗಿಸಲು ಆಯಾ ಪಂಚಾಯತ್ಗಳ ಕಂದಾಯ ಅಧಿಕಾರಿಗಳು, ಪಿಡಿಒಗಳಿಗೆ ಸೂಚಿಸಲಾಗಿದೆ. ಪರಿಹಾರ ಕಾರ್ಯ ನಡೆಸಲು ವಿವಿಧ ಇಲಾಖೆಗಳಿಗೆ ಅಗತ್ಯ ಹಣಕಾಸಿನ ಸೌಲಭ್ಯವನ್ನು ಜಿಲ್ಲಾಧಿಕಾರಿ ಒದಗಿಸಲಿದ್ದಾರೆ ಎಂದರು. ಮಹಾಮಳೆಯ ಸಂದರ್ಭ ಯಾವುದೇ ವ್ಯಕ್ತಿ ನಾಪತ್ತೆಯಾಗಿದ್ದರೂ ಜಿಲ್ಲಾಧಿಕಾರಿಗೆ ತತ್ಕ್ಷಣ ಮಾಹಿತಿ ಒದಗಿಸುವಂತೆ ಸೂಚಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶ್ರೀವಿದ್ಯಾ, ರಾಜ್ಯ ಕಾರ್ಯದರ್ಶಿ ಅಂಬುದಾಸ್, ಸಿಇಒ ಪ್ರಶಾಂತ್ ಕುಮಾರ್ ಹಾಗೂ ಹಿರಿಯ ಅಧಿಕಾರಿ ಚಾರುಲತಾ ಸೋಮಲ್ ಉಪಸ್ಥಿತರಿದ್ದರು.
ತಿಂಗಳ ವೇತನ ಘೋಷಣೆ
ಕೊಡಗಿನ ಸಂತ್ರಸ್ತರಿಗೆ ನೆರವಾಗಲು ಸ್ಥಾಪಿಸಲಾಗಿರುವ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಒಂದು ತಿಂಗಳ ವೇತನ ನೀಡುವುದಾಗಿ ಘೋಷಿಸಿದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.