- Monday 09 Dec 2019
ಇಗ್ಗೋಡ್ಲು: ರೋಟರಿಯಿಂದ 25 ಮನೆ ಹಸ್ತಾಂತರ
Team Udayavani, Jun 20, 2019, 5:39 AM IST
ಮಡಿಕೇರಿ: ಸೂರಿಲ್ಲದವರಿಗೆ ಮನೆ ನಿಮಿ9ಸಿ ಸೂಕ್ತ ಆಶ್ರಯ ನೀಡುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಗಳು ಆದ್ಯತೆಯ ಮೇರೆಗೆ ಕಾರ್ಯಪ್ರವೃತ್ತವಾಗಬೇಕೆಂದು ಅಂತರರಾಷ್ಟ್ರೀಯ ರೋಟರಿಯ ಮಾಜಿ ಅಧ್ಯಕ್ಷ ಕಲ್ಯಾಣ್ ಬ್ಯಾನರ್ಜಿ ಕರೆ ನೀಡಿದ್ದಾರೆ.
ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ ರೋಟರಿ ಜಿಲ್ಲೆ 3181 ನಿಂದ ರೀ ಬಿಲ್ಡ್ ಕೊಡಗು ಯೋಜನೆಯಡಿ ನಿರ್ಮಿಸಲಾದ 25 ಮನೆಗಳನ್ನು ಜಲಪ್ರಳಯ ಸಂತ್ರಸ್ಥರಿಗೆ ಹಸ್ತಾಂತರಿಸಿ ಕಲ್ಯಾಣ್ ಬ್ಯಾನರ್ಜಿ ಮಾತನಾಡಿದರು.
ಕೊಡಗಿನಲ್ಲಿ ಪ್ರಕೃತಿ ವಿಕೋಪ ಸಂತ್ರಸ್ಥರಿಗೆ ರೋಟರಿ ಜಿಲ್ಲೆ 3181 ವತಿಯಿಂದ 25 ಮನೆ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ ಎಂದು ಹೇಳಿದರು.
ರೋಟರಿ ಜಿಲ್ಲಾ ಗವನ9ರ್ ಪಿ.ರೋಹಿನಾಥ್ ಮಾತನಾಡಿ, . ಕೇವಲ 3 ತಿಂಗಳಲ್ಲಿ 25 ಮನೆಗಳನ್ನು ತಲಾ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಂತ್ರಸ್ಥರಿಗೆ ಯೋಗ್ಯ ಮನೆಗಳನ್ನು ನಿಗಥಿತ ಅವಧಿಯಲ್ಲಿಯೇ ನೀಡಿದ ತೃಪ್ತಿ ತನಗಿದೆ ಎಂದರು.
ರೋಟರಿಗಾಗಿ ಮನೆಗಳನ್ನು ನಿರ್ಮಿಸಿಕೊಟ್ಟ ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿದೇ9ಶಕ ರಾಜನ್ ಸ್ಯಾಮುವೆಲ್ ಮಾತನಾಡಿ, ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯು 25 ಮನೆಗಳನ್ನು ತಲಾ 5 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿದ್ದು 10 ಕುಟುಂಬಗಳಲ್ಲಿ ಮಹಿಳೆಯರೇ ನಿವ9ಹಿಸುತ್ತಿದ್ದು ಐವರು ವಿಧವೆಯರೂ ಮನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಹೆಉಈಳಿದರು.
ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯ ಹಿರಿಯ ನಿದೇ9ಶಕ ಸಂಜಯ್ ದಾಸ್ವಾನಿ ರೋಟರಿಯ ರೀಬಿಲ್ಡ್ ಕೊಡಗು ರೋಟರಿ ಮಾಜಿ ಗವರ್ನರ್ ಕೃಷ್ಣಶೆಟ್ಟಿ ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ಲತಾ, ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಗಳಾದ ಡಾ| ನಾಗಾರ್ಜುನ್, ದೇವದಾಸರೈ, ಮಾತಂಡ ಸುರೇಶ್ ಚಂಗಪ್ಪ, ಆರ್.ಕೃಷ್ಣ, ನಾಗೇಂದ್ರಪ್ರಸಾದ್, ಮುಂದಿನ ಸಾಲಿನ ರೋಟರಿ ಗವರ್ನರ್ ಜ್ಯೊಸೆಫ್ ಮ್ಯಾಥ್ಯು, ನಿಯೋಜಿತ ಗವನ9ರ್ ರಂಗನಾಥ ಭಟ್ ಉಪಸ್ಥಿತರಿದ್ದರು.
ಫಲಾನುಭವಿಗಳಿಗೆ ಮನೆಗಳ ಕೀಲಿಕೈ ಹಸ್ತಾಂತರಿಸಲಾಯಿತು ಕುಶಾಲನಗರ ಇನ್ನರ್ ವೀಲ್ ಸಂಸ್ಥೆಯಿಂದ 25 ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ಮತ್ತು ವಾಟರ್ ಫಿಲ್ಟರ್ ಗಳನ್ನು ನೀಡಲಾಯಿತು.
ಈ ವಿಭಾಗದಿಂದ ಇನ್ನಷ್ಟು
-
ಕಾಸರಗೋಡು: ಎಡರಂಗ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ವರೆಗೆ ಲೋಕೋಪಯೋಗಿ ಕ್ಷೇತ್ರದಲ್ಲಿ 20 ಸಾವಿರ ಕೋಟಿ ರೂ.ಗಳ ಕಾಮಗಾರಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ...
-
ಕಾಸರಗೋಡು: ವಿವಿಧ ಕಾರಣ ಗಳಿಂದ ವಿಳಂಬವಾಗಿ ಆರಂಭಗೊಂಡ ಮಹತ್ವಾಕಾಂಕ್ಷೆಯ ಕಣ್ಣೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಡಿ. 9ರಂದು ಒಂದು ವರ್ಷ ಪೂರೈಸಲಿದ್ದು,...
-
ಮಡಿಕೇರಿ: ಕೊನೆಗೂ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ನಗರ ಪ್ರದಕ್ಷಿಣೆ ಮಾಡಿದ್ದು, ರಸ್ತೆ ಅವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿದ್ದಾರೆ. ನಗರೋತ್ಥಾನ...
-
ಕುಂಬಳೆ: ಮೊಗ್ರಾಲಿನ ಸುತ್ತ ಮುತ್ತಲಿನ ಪ್ರದೇಶದ ನೀರಿನ ಕ್ಷಾಮ ಪರಿಹಾರಕ್ಕಾಗಿ ಈ ತನಕ ಸರಕಾರದ ತ್ರಿಸ್ತರ ಸ್ಥಳೀಯಾಡಳಿತ ಮತ್ತು ಜಿಲ್ಲಾಡಳಿತದ ವಿವಿಧ ಯೋಜನೆಗಳಲ್ಲಿ...
-
ಕಾಸರಗೋಡು: ಜಿಲ್ಲೆಯಲ್ಲೇ ಅತ್ಯಂತ ಎತ್ತರದ ಎಂಬ ಖ್ಯಾತಿಗೆ ಪಾತ್ರವಾದ ಆಯಂಕಡವು ಸೇತುವೆ ಡಿ. 8 ರಂದು ಮಧ್ಯಾಹ್ನ 2 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಪುಲ್ಲೂರು- ಪೆರಿಯ-...
ಹೊಸ ಸೇರ್ಪಡೆ
-
ಬೆಂಗಳೂರು: ರಾಜ್ಯದಲ್ಲಿ ಐದು ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಅನಂತರ ರಚನೆಯಾದ ಬಿಜೆಪಿ ಸರಕಾರದ ಅಳಿವು-ಉಳಿವು ಹಾಗೂ ಅನರ್ಹಗೊಂಡ 17 ಶಾಸಕರ ಪೈಕಿ ಉಪಚುನಾವಣೆಗೆ...
-
ಹೊಸದಿಲ್ಲಿ: ಸೋಮವಾರದಿಂದ ರಣಜಿ ಪಂದ್ಯಾವಳಿ ಆರಂಭವಾಗಲಿದೆ. ಆದರೆ ಬಿಸಿಸಿಐ ಇನ್ನೂ ಅಂಕಣ ಹೇಗಿರಬೇಕೆಂಬ ಮಾರ್ಗದರ್ಶಿ ಸೂತ್ರಗಳನ್ನು ತಿಳಿಸಿಲ್ಲ ಎಂದು ಕ್ಯುರೇಟರ್ಗಳು...
-
ಹೊಸದಿಲ್ಲಿ: ಎಲ್ಲ ವಾಹನ ಮಾಲಕರೂ ತಮ್ಮ ವಾಹನಗಳ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಗಳನ್ನು ಜೋಡಿಸುವ ನಿಯಮ ಎ. 1ರಿಂದ ದೇಶವ್ಯಾಪಿ ಕಡ್ಡಾಯವಾಗಲಿದೆ. ಕೇಂದ್ರ ಸಾರಿಗೆ...
-
ಕೋಟಿ ರೂ. ಎನ್ನುವುದು ನಮಗೆ ಇಂದಿಗೂ ಕನಸು. ಅಷ್ಟು ಹಣ ಸಂಪಾದಿಸಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ, ಬ್ಯಾಂಕಿನಲ್ಲಿ ತಿಂಗಳಿಗೆ ಕೇವಲ 5,000ರೂ. ಕೂಡಿಡುವುದರ...
-
ಮೇಲುನೋಟಕ್ಕೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳ ನಡುವೆ ಜನರಿಗೆ ವ್ಯತ್ಯಾಸವೇನೂ ಕಾಣುವುದಿಲ್ಲ. ಅವೆರಡೂ ಒಂದೇ ರೀತಿ ಕಾರ್ಯ ನಿರ್ವಹಿಸುತ್ತಿರುವಂತೆ ಕಾಣುತ್ತದೆ....