ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಈಗ ಅನಿವಾರ್ಯ


Team Udayavani, Aug 26, 2018, 6:00 AM IST

gadgil-report.jpg

ಮಡಿಕೇರಿ: ಕೊಡಗು ಅನಾಹುತದ ಮೂಲಕ ಪ್ರಕೃತಿ ಕಲಿಸಿದ ಪಾಠದ ಬಳಿಕ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಪಶ್ಚಿಮ ಘಟ್ಟ ಸಂರಕ್ಷಣೆಗೆ ಡಾ. ಕಸ್ತೂರಿ ರಂಗನ್‌ ವರದಿ ಜಾರಿಯೇ ಇಂತಹ ವಿಪತ್ತು ತಡೆಗೆ ಸೂಕ್ತ ಮದ್ದು ಎಂಬ ತೀರ್ಮಾನಕ್ಕೆ ಬಂದಿದೆ.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕೃತಿ ವಿಕೋಪಗಳು ಮತ್ತಷ್ಟು ಸಂಭವಿಸಿ, ಅಪಾರ ಜೀವ ವೈವಿಧ್ಯ ನಷ್ಟವಾಗುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಕಸ್ತೂರಿ ರಂಗನ್‌ ವರದಿಯನ್ನು ಕೆಲ ತಿದ್ದುಪಡಿಗಳನ್ನು ಮಾಡಿ ಜಾರಿಗೊಳಿಸಬಹುದು ಎಂದು ಈ ಹಿಂದೆಯೇ ಸರ್ಕಾರವನ್ನು ಅರಣ್ಯ ಇಲಾಖೆ ಎಚ್ಚರಿಸಿತ್ತು. ಇದೀಗ ಕೊಡಗಿನ ಘಟನೆಯನ್ನು ಉಲ್ಲೇಖೀಸಿ ಪಶ್ಚಿಮ ಘಟ್ಟ ಪ್ರದೇಶದ ಉಳಿವಿಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಿದ್ದು, ಕಸ್ತೂರಿ ರಂಗನ್‌ ವರದಿ ಅನುಷ್ಠಾನಕ್ಕೆ ಸಲಹೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕೇರಳ ಸಮೇತವಾಗಿ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಅರಣ್ಯ ನಾಶ ಮತ್ತು ಅದರ ಮೇಲೆ ಮಾನವನ ಸವಾರಿಯ ಬಗ್ಗೆ ಡಾ.ಕಸ್ತೂರಿ ರಂಗನ್‌ ಅವರು ವಿಸ್ತೃತವಾದ ವರದಿ ನೀಡಿದ್ದರು. ಆಗಲೂ ಯಾರೂ ಎಚ್ಚೆತ್ತು ಕೊಂಡಿಲ್ಲ. ಕಸ್ತೂರಿ ರಂಗನ್‌ ವರದಿ ಅನುಷ್ಠಾನಗೊಂಡಿದ್ದರೆ ಸ್ವಲ್ಪವಾದರೂ, ಪರಿಸರ ಸಂರಕ್ಷಣೆ ಮಾಡಬಹುದಿತ್ತು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಸಂಶೋಧನೆ)ಎಚ್‌.ಪೂರ್ಣಿಮಾ “ಉದಯವಾಣಿ’ಗೆ ತಿಳಿಸಿದರು.

ಕಾಡಿನ ಮರುಸೃಷ್ಟಿ
ಕೊಡಗಿನಲ್ಲಿ ಒಂದೆಡೆ ಜನವಸತಿ ಪುನರ್‌ನಿರ್ಮಾಣ ಕಾರ್ಯಕ್ಕೆ ಯೋಜನೆಗಳು ಸಿದ್ಧವಾಗುತ್ತಿದ್ದಂತೆಯೇ, ಮತ್ತೂಂದೆಡೆ ಕಾಡಿನ ಮರುಸೃಷ್ಟಿಗೆ ಅರಣ್ಯ ಇಲಾಖೆ ಸಜ್ಜಾಗುತ್ತಿದೆ. ಮಳೆಯಿಂದ ಕಾಡಿನ ಸಂಪತ್ತು ನಾಶಗೊಂಡಿದೆ. ಹೀಗಾಗಿ, ಮತ್ತೆ ಕಾಡಿನ ಮರುಸೃಷ್ಟಿ ಅನಿವಾರ್ಯ. ಅದಕ್ಕಾಗಿ ಎಲ್ಲ ರೀತಿಯ ಸಂಶೋಧನೆಗಳನ್ನು ನಡೆಸಲಿದ್ದೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಕಾಡಿನ ಪ್ರದೇಶದಲ್ಲಿ ಎಲ್ಲೆಲ್ಲಿ ಭೂ ಕುಸಿತವಾಗಿದೆಯೋ ಆ ಭಾಗದಲ್ಲಿ ನಿತ್ಯ ಹಸಿರಾಗಿರುವ ಜಾತಿ ಮರಗಳನ್ನು ನೆಡಲಾಗುತ್ತದೆ. ಒಮ್ಮೆ ಗಿಡ ನೆಟ್ಟ ನಂತರ ಅದರ ಭವಿಷ್ಯ ಹಾಗೂ ವಾಸ್ತವಾಂಶ ಪರಿಶೀಲನೆ ಮಾಡಿಯೇ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ಗಿಡ ಸಂಗ್ರಹ ಆರಂಭಿಸಿ, ಮೇ ಅಥವಾ ಜೂನ್‌ನಲ್ಲಿ ಸಸಿ ನೆಡುವ ಕಾರ್ಯ ಮಾಡಲಿದ್ದಾರೆ.

ಖಾಸಗಿ ಭೂಮಿ ಅರಣ್ಯಕ್ಕೆ ಹೊಂದಿಕೊಂಡಿದ್ದರೂ ಕಾಡಿನ ಜಾತಿಯ ಮರಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಖಾಸಗಿ ಭೂಮಿಯಲ್ಲಿ ಭೂ ಕುಸಿತ ಹೆಚ್ಚಾಗಿರುವುದಕ್ಕೆ ಇದು ಕೂಡ ಒಂದು ಕಾರಣ ಇರಬಹುದು. ದಟ್ಟಾರಣ್ಯದ ಒಳಗೆ ಭೂ ಕುಸಿತವಾಗಿಲ್ಲ. ಹೀಗಾಗಿ, ಕಾಡಿನ ಮರುಸೃಷ್ಟಿಗೆ ಬೇಕಾದ ಎಲ್ಲ ರೀತಿಯ ಸಂಶೋಧನೆಗಳನ್ನು ನಡೆಸಲಿದ್ದೇವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಂಶೋಧನೆ ಖಾಸಗಿ ಭೂಮಿಯಲ್ಲಿರುವ ಮರಗಳ ಜತೆಗೆ ಅರಣ್ಯ ಭೂಮಿಯಲ್ಲಿರುವ ಹತ್ತಾರು ಬಗೆಯ ಹಲವು ಮರಗಳು ನಾಶವಾಗಿದೆ. ಖಾಸಗಿ ಭೂಮಿಯಲ್ಲಿ ಇರುವ ಮರಗಳನ್ನು ಕಡಿದು ಬೇವು ಮೊದಲಾದ ಮರಗಳನ್ನು ಹೆಚ್ಚಾಗಿ ಬೆಳೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಶೇ.19 ರಷ್ಟು ಕಾಡು ಉಳಿದಿದೆ. ಇವೆಲ್ಲದರ ಮಧ್ಯೆ ಅರಣ್ಯ ಒತ್ತುವರಿಯೂ ಹೆಚ್ಚಾಗಿದೆ ಎನ್ನುತ್ತಾರೆ ಪೂರ್ಣಿಮಾ.

ಗಾಡ್ಗಿಳ್‌ ವರದಿಯಲ್ಲೇನಿತ್ತು?
ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತಂತೆ ಮಾಧವ ಗಾಡ್ಗಿಳ್‌ ವರದಿ ಬಂದಾಗಲೇ ಅದನ್ನು ಅನುಷ್ಠಾನ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ಮಾಡಿದ್ದರು. ಆದರೆ, ಇದು ಕಠಿಣ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಈ ವರದಿ ಜಾರಿಗೊಳಿಸದೆ ಕಸ್ತೂರಿ ರಂಗನ್‌ ಸಮಿತಿ ರಚಿಸಿ ಮತ್ತೂಂದು ವರದಿ ಸಿದ್ಧಪಡಿಸಿತ್ತು. ಕಸ್ತೂರಿರಂಗನ್‌ ವರದಿಯಲ್ಲಿ ಜನವಸತಿ ಪ್ರದೇಶವನ್ನು ಉಳಿಸಿಕೊಳ್ಳುವುದರ ಜತೆಗೆ ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೇಗೆ ಎಂಬುದನ್ನು ಸ್ಪಷ್ಟವಾಗಿ ಹೇಳಲಾಗಿತ್ತು. ಹೀಗಾಗಿ ಈ ವರದಿಯನ್ನು ಜಾರಿಗೊಳಿಸಬೇಕು ಎಂದು ಆರಂಭದಲ್ಲೇ ಅರಣ್ಯ ಇಲಾಖೆ ಸರ್ಕಾರಕ್ಕೆ ಸಲಹೆ ಮಾಡಿತ್ತು. ಆದರೆ, ರಾಜಕೀಯ ಕಾರಣಗಳು, ಜನರಿಗೆ ತೊಂದರೆಯಾಗಬಾರದು ಎಂದು ಸರ್ಕಾರ ತೀರ್ಮಾನ ಕೈಗೊಳ್ಳಲಿಲ್ಲ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.