14 ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ: ಅಧಿಕ ಹಣವಿದ್ದರೆ ವಿಚಾರಣೆ


Team Udayavani, Mar 15, 2019, 1:00 AM IST

15-kade.jpg

ಮಡಿಕೇರಿ: ಈಗಾಗಲೇ ಲೋಕಸಭಾ ಚುನಾವಣಾ ಸಂಬಂಧ ಕೊಡಗು ಜಿಲ್ಲೆಯಲ್ಲಿ ಅಂತರರಾಜ್ಯ ಮೂರು ಚೆಕ್‌ಪೋಸ್ಟ್‌ಗಳು ಸೇರಿದಂತೆ ಒಟ್ಟು 14 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಗೆ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು 50 ಸಾವಿರಕ್ಕೂ ಹೆಚ್ಚು ಹಣ ತೆಗೆದುಕೊಂಡು ಹೋಗುವವರು ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳಬೇಕು. 50 ಸಾವಿರದಿಂದ 10 ಲಕ್ಷ ರೂ.ವರೆಗೆ ಬ್ಯಾಂಕ್‌ನಲ್ಲಿ ಚಲಾವಣೆಯಾಗುವ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ ಎಂದರು.  ಎಸ್ಪಿ ಜಿ.ಪಂ.ಸಿಇಒ ಹಾಗೂ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮೀಪ್ರಿಯಾಐ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌ ‌ು ಹಾಜರಿದ್ದರು.

ಅಧಿಕ ಹಣವಿದ್ದರೆ ವಿಚಾರಣೆ::
ವಾಹನಗಳಲ್ಲಿ ರೂ.10 ಲಕ್ಷಕ್ಕಿಂತ ಹೆಚ್ಚು ನಗದು ಇರುವುದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ ಆದಾಯ ತೆರಿಗೆ ಇಲಾಖೆಯಿಂದ ವಿಚಾರಣೆಗೆ ಒಳಪಡಿಸಲಾಗುವುದು. ವಾಹನಗಳಲ್ಲಿ ಅನುಮಾನಾಸ್ಪದವಾಗಿ, ದಾಖಲೆಗಳಿಲ್ಲದೆ ಸಾಗಿಸುವ ಯಾವುದೇ ಗೃಹ ಉಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳು, ಮದ್ಯ, ಮಾದಕ ದ್ರವ್ಯಗಳು ಮತ್ತು ಆಯುಧಗಳು ¤ಗಳನ್ನು ಮುಟ್ಟುಗೋಲು ಹಾಕಲಾಗುವುದು ಎಂದರು. ನಿಶ್ಚಿತಾರ್ಥ, ಮದುವೆ, ನಾಮಕರಣ, ಜಾತ್ರೆ, ಹಬ್ಬ ಇತ್ಯಾದಿ ಖಾಸಗಿ ಸಮಾ ರಂಭಗಳಿಗೆ ಯಾವುದೇ ನಿರ್ಬಂಧ ವಿರುವುದಿಲ್ಲ. ಆದರೆ ಈ ಸಮಾರಂಭಗಳು ರಾಜಕೀಯ ಪ್ರೇರಿತವಾಗಿರಬಾರದು ಎಂ¨ರು.

ಮಾ.19 ರಂದು ಅಧಿಸೂಚನೆ:
ಲೋಕಸಭಾ ಚುನಾವಣೆ ಸಂಬಂಧ ಮಾ.19 ರಂದು ಚುನಾವಣಾ ಅಧಿಸೂಚನೆಯನ್ನು ಚುನಾವಣಾಧಿಕಾರಿ ಅವರು ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಮಾ.26 ಕಡೆ ದಿನವಾಗಿದೆ. ನಾಮಪತ್ರ ಪರಿಶೀಲನಾ ಕಾರ್ಯವು ಮಾ.27 ರಂದು ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಮಾ.29 ಕಡೆ ದಿನವಾಗಿದೆ. ಏ.18 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಎಷ್ಟು ವೆಚ್ಚ ಮಾಡಬಹುದು:
ಒಬ್ಬ ಅಭ್ಯರ್ಥಿಯು ರೂ.70 ಲಕ್ಷದವರೆಗೆ ಚುನಾವಣಾ ವೆಚ್ಚಗಳನ್ನು ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾವಹಿಸಲು ವಿವಿಧ ವೆಚ್ಚ ತಂಡಗಳನ್ನು ನೇಮಕ ಮಾಡಲಾಗಿದೆ.  208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಬ್ಬರಂತೆ ಒಟ್ಟು ಇಬ್ಬರು ಸಹಾಯಕ ವೆಚ್ಚ ವೀಕ್ಷಕರು, 2 ಲೆಕ್ಕ ಪತ್ರ ತಂಡ, ಒಂದು ವೀಡಿಯೋ ವಿವಿಂಗ್‌ ತಂಡ, 4 ವೀಡಿಯೋ ಸರ್ವಿಲೆನ್ಸ್‌ ತಂಡಗಳನ್ನು ನೇಮಕ ಮಾಡಲಾಗಿದೆ. ಎಂದು ಅವರು ತಿಳಿಸಿದರು.

ಅಧಿಕಾರಿಗಳ ನೇಮಕ
‌ ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ(ಮಾದರಿ ನೀತಿ ಸಂಹಿತೆ ಮತ್ತು ಸ್ವೀಪ್‌) ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಹಿರಿಯ ಉಪ ನಿರ್ದೇಶಕರಾದ ಎಚ್‌.ಇ.ನಂದ (ಚುನಾವಣಾ ವೆಚ್ಚ ನಿರ್ವಹಣೆ), ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್‌ , ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕೆ.ಪಿ.ಶಂಷುದ್ದಿನ್‌(ಸಿ-ವಿಜಿಲ್‌), ಶಿಕ್ಷಣ ಇಲಾಖೆ ಉಪ ನಿರ್ದೇಶಕ‌ ಮಚ್ಚಾಡೋ (ಮತಗಟ್ಟೆ ಅಧಿಕಾರಿಗಳ ನೇಮಕ), ಲೋಕೋಪ ಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ‌ ಎಂಜಿನಿಯರ್‌ ಇಬ್ರಾಹಿಂ (ವಿದ್ಯುನ್ಮಾನ ಮತಯಂತ್ರ), ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ(ಮತಗಟ್ಟೆಗಳ ಮೇಲ್ವಿಚಾರಣೆ), ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್‌ ಸಿ.ಎಂ(ವೀಕ್ಷಕರು), ಮಡಿಕೇರಿ ಎನ್‌.ಐ.ಸಿ ಮಾಹಿತಿ ಅಧಿಕಾರಿ ಅಜಿತ್‌ ಜಿ(ಐಟಿ, ಐಟಿ ಆ್ಯಪ್ಸ್‌ ಮತ್ತು ತಾಂತ್ರಿಕತೆ), ಕೂಡಿಗೆ ಡಯಟ್‌ ಪ್ರಾಂಶುಪಾಲ ವಾಲ್ಟರ್‌ ಎಚ್‌.ಡಿಮೆಲೊ(ತರಬೇತಿ).

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.