ನೌಕಾದಳ ಸೇರ್ಪಡೆಗೆ ಯುವ ಸಮೂಹಕ್ಕೆ ಪ್ರೇರಣೆ

ನೌಕಾದಳ‌ ಐಎನ್‌ಎಸ್‌ ಶಿವಾಜಿ ತಂಡ ಮಡಿಕೇರಿಗೆ ಭೇಟಿ

Team Udayavani, May 4, 2019, 6:18 AM IST

Z-ARMY

ಮಡಿಕೇರಿ: ಭಾರತೀಯ ನೌಕಾದಳದ 75ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಆಯೋಜಿತ ಭಾರತ ದರ್ಶನ ಕಾರ್ಯಕ್ರಮದಡಿ ಐಎನ್‌ಎಸ್‌ ಶಿವಾಜಿ ನೌಕೆಯ 14 ಮಂದಿ ಅಧಿಕಾರಿಗಳ ತಂಡ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡಿತು.

ಐಎನ್‌ಎಸ್‌ ಶಿವಾಜಿ ತಂಡದ ನೇತೃತ್ವವನ್ನು ಕಮಾಂಡರ್‌ ವಿ.ಸೀತಾರಾಂ ವಹಿಸಿದ್ದು, ಕಮಾಂಡರ್‌ಗಳಾದ ಗೌರವ್‌ ಸೇಥ್‌, ಅಭಿಮನ್ಯು ದಲಾಲ್, ಶ್ಯಾಂ ಕುಮಾರ್‌ ಕೆ., ಲೆಫ್ಟಿನೆಂಟ್ ಕಮಾಂಡರ್‌ಗಳಾದ ಸತೀಶ್‌ ಕುಮಾರ್‌ ಮತ್ತು ಜಿ.ಜಗನ್ನಾಥ್‌, ಲೆಫ್ಟಿನೆಂಟ್‌ಗಳಾದ ಸುದೀಪ್‌ ಭಟ್ಟಾರಾಯಿ ಮತ್ತು ಎಂ.ಕೆ.ಗೌತಮ್‌, ಅಖೀಲ್, ಹೆಚ್.ದಹಿಯ, ಮಂದೀಪ್‌ ಸಿಂಗ್‌, ಆರ್‌. ಆರ್‌.ಚೌಹಾಣ್‌, ಇ.ಸಿ.ಪಾಲಾಸ್ಕರ್‌ ಮತ್ತು ಎಲ್ವಿಸ್‌ ಮ್ಯಾಥ್ಯೂ ತಂಡದ ಸದಸ್ಯರುಗಳಾಗಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ನಗರದ ಸನ್ನಿಸೈಡ್‌ನ‌ ಜನರಲ್ ಕೆ.ಎಸ್‌.ತಿಮ್ಮಯ್ಯ ಸ್ಮಾರಕ ಭವನಕ್ಕೆ ಶಿವಾಜಿ ತಂಡದ ಅಧಿಕಾರಿಗಳು ಭೇಟಿ ನೀಡಿದ್ದಲ್ಲದೆ, ಬಳಿಕ ಕೂಡಿಗೆಯ ಸೈನಿಕ ಶಾಲೆ, ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳಿಗೂ ಭೇಟಿ ನೀಡಿತು. ಈ ಎಲ್ಲಾ ಭೇಟಿಯ ಪ್ರಮುಖ ಉದ್ದೇಶ, ಭಾರತೀಯ ನೌಕಾದಳಕ್ಕೆ ಸೇರ್ಪಡೆಗೊಳ್ಳಲು ಯುವ ಸಮೂಹಕ್ಕೆ ಪ್ರೇರಣೆ ನೀಡುವುದೇ ಆಗಿತ್ತು.

45 ದಿನಗಳ ಕಾರ್ಯಕ್ರಮ- ಐಎನ್‌ಎಸ್‌ ಶಿವಾಜಿ ನೌಕೆಯ ತಂಡ ಭಾರತ ದರ್ಶನ ಕಾರ್ಯಕ್ರಮದಡಿ ಒಟ್ಟು 45 ದಿನಗಳ ಕಾಲ ರಾಷ್ಟ್ರದ ವಿವಿಧ ಭಾಗಗಳಿಗೆ ತೆರಳಿ ಯುವ ಸಮೂಹದಲ್ಲಿ ನೌಕಾದಳ ಸೇರ್ಪಡೆಗೆ ಪ್ರೇರಣೆ ನೀಡಲಿದೆ ಎಂದು ತಂಡದ ನೇತೃತ್ವ ವಹಿಸಿರುವ ಕಮಾಂಡರ್‌ ವಿ. ಸೀತಾರಾಂ ಅವರು ತಿಳಿಸಿದರು.

ಭಾರತ ದರ್ಶನ ಕಾರ್ಯಕ್ರಮಕ್ಕೆ ಇದೇ ಫೆಬ್ರವರಿಯಲ್ಲಿ ಮುಂಬೈನಲ್ಲಿ ಮತ್ತು ಮಾರ್ಚ್‌ನಲ್ಲಿ ಲೋನಾವಾಲದಿಮದ ಚಾಲನೆ ನೀಡಲಾಗಿದೆ. ಕಾರ್ಯಕ್ರಮದಂತೆ ದೆಹಲಿ, ವಿಶಾಖಪಟ್ಟಣಂ, ಕೊಚ್ಚಿನ್‌ಗೆ ತೆರಳಿ ಅಲ್ಲಿಂದ ಮರಳಿ ಇದೇ ಮೇ 9ಕ್ಕೆ ಲೋನಾವಾಲಕ್ಕೆ ಹಿಂತಿರುಗುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷರಾದ ಕರ್ನಲ್ ಕಂಡ್ರತಂಡ ಸುಬ್ಬಯ್ಯ ಅವರು ಐಎನ್‌ಎಸ್‌ ಶಿವಾಜಿ ತಂಡದೊಂದಿಗೆ ಇದ್ದು ಅವರಿಗೆ ಅಗತ್ಯ ಮಾಹಿತಿಗಳನ್ನು ನೀಡಿದರು. ಈ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ತಂಡ ಭೇಟಿ ನೀಡಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ತರಬೇತಿಗೊಳಿಸಿ ನೌಕಾದಳಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ತಂಡದ ಉದ್ದೇಶವಾಗಿದೆಯೆಂದು ತಿಳಿಸಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.