“ವನ್ಯಜೀವಿ ಸಂಕುಲ ಉಳಿಸುವುದು ಎಲ್ಲರ ಜವಾಬ್ದಾರಿ’
Team Udayavani, Oct 6, 2019, 5:31 AM IST
ಮಡಿಕೇರಿ:ಪರಿಸರದ ಸಮತೋಲನ ಕಾಯ್ದುಕೊಳ್ಳಲು ವನ್ಯಜೀವಿಗಳ ಸಂರಕ್ಷಣೆ ಅಗತ್ಯವೆಂದು ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.
ಪದವಿ ಪೂರ್ವ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಕೊಡಗು ಜಿಲ್ಲಾ ಇಕೋ ಕ್ಲಬ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಮೇಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಹಾಗೂ ಅರಣ್ಯ ಇಲಾಖೆಯ ಅರಣ್ಯ ವಲಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ಮೇಕೇರಿ ಗ್ರಾಮದಲ್ಲಿ 65 ನೇ ವನ್ಯಜೀವಿ ಸಪ್ತಾಹ 2019 ಅಂಗವಾಗಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಪರಿಸರ ಜಾಗೃತಿ ನಡೆಯಿತು.
ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆ ಕುರಿತು ಅಭಿಯಾನದಲ್ಲಿ ಮಾಹಿತಿ ನೀಡಿದ ಇಕೋ ಕ್ಲಬ್ನ ನೋಡಲ್ ಅಧಿಕಾರಿಯೂ ಆದ ಪ್ರೇಮ್ ಕುಮಾರ್ ಅವರು ಪ್ರಕೃತಿಯ ಒಂದು ಪ್ರಮುಖ ಭಾಗವಾದ ಅರಣ್ಯ ಮತ್ತು ವನ್ಯ ಜೀವಿಗಳ ರಕ್ಷಣೆ ಮಾಡುವ ಮಹತ್ವದ ಹೊಣೆಗಾರಿಕೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಸುಸ್ಥಿರ ಅಭಿವೃದ್ಧಿ ಎಂದರೆ ವಿನಾಶ ರಹಿತ ಅಭಿವೃದ್ಧಿಯಾಗಿದ್ದು, ನಾವು ನಮ್ಮ ಜೀವಿ ಸಂಕುಲದ ಉಳಿವಿನ ಜೊತೆಗೆ ಅಭಿವೃದ್ಧಿಯಲ್ಲಿ ತೊಡಗಬೇಕಿದೆ. ವನ್ಯ ಜೀವಿಗಳು ಮತ್ತು ಅರಣ್ಯಗಳು ಪರಿಸರ ಸಮತೋಲನ ಕಾಪಾಡುವಲ್ಲಿ ಅತ್ಯಂತ ಮಹತ್ತರ ಪಾತ್ರ ವಹಿಸುತ್ತವೆ. ಎಂದು ಪ್ರೇಮಕುಮಾರ್ ಅವರು ಹೇಳಿದರು. ಡಿಆರ್ಎಫ್ಒ ಬಾಬು ರಾಥೋಡ್, ಪ್ರಭಾರ ಗಾರ್ಡ್ ವಾಸುದೇವ್, ಎಸ್ಡಿಎಂಸಿ ಅಧ್ಯಕ್ಷರಾದ ರಫೀಕ್ ಖಾನ್, ಎನ್ಎಸ್ಎಸ್ ಅಧಿಕಾರಿ ಬಿ.ಡಿ.ರವೀಶ್, ಉಪನ್ಯಾಸಕರಾದ ಎಸ್.ನಂದೀಶ್, ದ ರಾಜಸುಂದರಂ, ಹೆಬ್ಟಾಲೆ ನಮ್ರತ್, ಶಿಕ್ಷಕ ಪ್ರಸನ್ನ ಕುಮಾರ್, ಕೆ.ಎಂ.ಸಬಿತಾ, ಸಿ.ಪುಷ್ಪ, ಶ್ರೀ ಲತಾ, ಸಿಬಂದಿ ಎ.ಪಿ.ಸುಧಾ, ಮಂದಪ್ಪ ಉಪಸ್ಥಿತರಿದ್ದರು.
“ಸಂರಕ್ಷಣೆ ಅಗತ್ಯ
ಪ್ರಾಂಶುಪಾಲ ಪಿ.ಆರ್.ವಿಜಯ್ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಎಂ.ಬಿ.ಕುಸುಮಾವತಿ, ವಿದ್ಯಾರ್ಥಿಗಳು ತಮ್ಮ ಅರಣ್ಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುಬೇಕು ಎಂದರು. ವಿನಾಶದಂಚಿನತ್ತ ಸಾಗುತ್ತಿರುವ ಅರಣ್ಯ, ವನ್ಯಜೀವಿಗಳು ಮತ್ತು ಪರಿಸರವನ್ನು ಉಳಿಸುವತ್ತ ಗಮನಹರಿಸದಿದ್ದಲ್ಲಿ ಮುಂದಿನ ಪೀಳಿಗೆಗೆ ಇವುಗಳನ್ನು ನೋಡುವ ಅವಕಾಶ ಇಲ್ಲದಂತಾಗುತ್ತದೆ. ಅರಣ್ಯ ಮತ್ತು ವನ್ಯ ಜೀವಿಗಳ ಉಳಿಸಿ ಬೆಳೆಸುವುದು ಕರ್ತವ್ಯವಾಗಿದೆ ಎಂದರು. ಶಿಬಿರಾರ್ಥಿಗಳು ಮತ್ತು ವಿದ್ಯಾರ್ಥಿಗಳು ಜಾಥಾ ನಡೆಸುವ ಮೂಲಕ ಅರಣ್ಯ, ಪರಿಸರ ವನ್ಯಜೀವಿ ಸಂರಕ್ಷಣೆ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್