ಬಸ್‌ ಪಾಸ್‌ ರದ್ದು , ಹಣವಿಲ್ಲ , ಕೆಲಸಕ್ಕೂ ಬರ


Team Udayavani, Nov 3, 2018, 9:04 AM IST

jodupala.jpg

ಅರಂತೋಡು: ಜೋಡುಪಾಲ ಪ್ರಕೃತಿ ವಿಕೋಪ ಸಂಭವಿಸಿ ಮೂರು ತಿಂಗಳು ತುಂಬುತ್ತಿದ್ದರೂ ನಿರಾಶ್ರಿತರ ಸಂಕಷ್ಟ ದೂರವಾಗಿಲ್ಲ. ಅವರ ಪುನರ್ವಸತಿ ಸಹಿತ ಮೂಲ ಸೌಕರ್ಯ ಗಳಿಗೆ ಸರಕಾರ ಅಧಿಕೃತವಾಗಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಪರಿಹಾರ ಕೇಂದ್ರಗಳಲ್ಲಿ ವಾಸವಿದ್ದ ಕೆಲವರು ಗುಳೆ ಹೊರಟಿದ್ದರೆ ಇನ್ನು ಕೆಲವರು ನೆಮ್ಮದಿಯಿಲ್ಲದ ಬದುಕು ಕಳೆಯುತ್ತಿದ್ದಾರೆ.

ಕೊಡಗು ಸಂಪಾಜೆ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಈಗ 24 ಕುಟುಂಬಗಳು ವಾಸವಿದ್ದು, ಒಟ್ಟು 73 ಮಂದಿ ಇದ್ದಾರೆ. ಇವರಲ್ಲಿ 13 ಮಂದಿ ವಿದ್ಯಾರ್ಥಿಗಳು. ದಕ್ಷಿಣ ಕನ್ನಡದ ಸಂಪಾಜೆ ಪರಿಹಾರ ಕೇಂದ್ರದಲ್ಲಿ 11 ಕುಟುಂಬ ಗಳ 42 ಜನರಿದ್ದಾರೆ. ಇವರಲ್ಲಿ 9 ವಿದ್ಯಾರ್ಥಿಗಳು. 80 ವರ್ಷ ವಯಸ್ಸಿನ ವೃದ್ಧೆಯೊಬ್ಬರಿದ್ದು, ಅನಾರೋಗ್ಯದಿಂದಿದ್ದಾರೆ.

ಒಂದೂವರೆ ತಿಂಗಳ ಹಿಂದೆ ಸಚಿವ ಯು.ಟಿ. ಖಾದರ್‌ ಅವರು ಪರಿಹಾರ ಕೇಂದ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಂತ್ರಸ್ತರು ತಮಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಒತ್ತಾಯಿಸಿದ್ದರು. ಸಚಿವರು ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸಂಚರಿಸಲು ಉಚಿತ ಪಾಸ್‌ ವ್ಯವಸ್ಥೆ ಮಾಡಿದ್ದರು. 1 ತಿಂಗಳು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾ ಣಿಸಿದ್ದು, ಆ ಬಳಿಕ ಪಾಸ್‌ ನವೀಕರಿಸಿಲ್ಲ. ವಿದ್ಯಾರ್ಥಿಗಳಿಗೆ ನೀಡಿದ್ದ ಪಾಸ್‌ ನ.4ಕ್ಕೆ ಕೊನೆಗೊಳ್ಳಲಿದ್ದು, ಅವನ್ನೂ ನವೀಕರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದ ರಿಂದಾಗಿ ಸಂತ್ರಸ್ತರು ತಮ್ಮ ಭೂಮಿ ಇರುವ ಜೋಡುಪಾಲ ಮತ್ತು ಮೊಣ್ಣಂಗೇರಿಗೆ ಹೋಗಿಬರಲು 40 ರೂ. ನೀಡಬೇಕಾಗುತ್ತದೆ. ನ.4ರ ಬಳಿಕ ವಿದ್ಯಾರ್ಥಿಗಳೂ ಇಷ್ಟೇ ಮೊತ್ತ ತೆರಬೇಕಾಗುತ್ತದೆ. 

ಸರಕಾರ ನೀಡಿದ ಹಣ ಎಷ್ಟು ?
ಪ್ರಥಮ ಅವಧಿಯಲ್ಲಿ ಪ್ರತಿ ಸಂತ್ರಸ್ತ ಕುಟುಂಬಕ್ಕೆ ರೂ.3,800 ನೀಡಲಾಗಿದೆ. ಸಂಪೂರ್ಣ ಮನೆ ಕಳಕೊಂಡ ಕುಟುಂಬಕ್ಕೆ ತಲಾ 1,01,900 ರೂ. ನೀಡ ಲಾಗಿದೆ. ಹಾನಿಗೊಳಗಾದ ಮನೆ ಗಳಿಗೆ ಹಾನಿಗೆ ಅನುಸಾರ ಪರಿಹಾರ ನೀಡಲಾಗಿದೆ. ಇದು ಇನ್ನೂ ಕೆಲವರಿಗೆ ದೊರೆತಿಲ್ಲ. ಮನೆ ಮತ್ತು ಜಮೀನಿನ ಬಗ್ಗೆ ದಾಖಲೆ ಇಲ್ಲದವರಿಗೆ ಪರಿಹಾರ ದೊರೆಯುತ್ತದೆಯೇ ಇಲ್ಲವೇ ಎಂಬ ಗೊಂದಲ ಇದೆ.  ನಿರಾಶ್ರಿತರಿಗೆ ಪರಿಹಾರ ಕೇಂದ್ರ ಗಳಲ್ಲಿ ಆಹಾರ ಸಮಸ್ಯೆ ಎದುರಾಗಿಲ್ಲ.

ಜಾಗ ಗುರುತು
ನಿರಾಶ್ರಿತರಿಗೆ ಮನೆ ಕಟ್ಟಲು ಈಗಾಗಲೇ ಕೊಡಗು ಸಂಪಾಜೆ ಶಾಲೆ ಬಳಿ ಒಂದೂವರೆ ಎಕರೆ ಮತ್ತು ಮದೆನಾಡು ಸಮೀಪದ ಗೋಳಿಕಟ್ಟೆ ಎಂಬಲ್ಲಿ ಐದು ಎಕರೆ ಜಾಗ ಗುರುತಿಸಲಾಗಿದೆ.

ನಮಗೆ ಸಂಪಾಜೆ ಭಾಗದಲ್ಲಿ ಮನೆ ಕಟ್ಟಲು ಜಾಗ ನೀಡಲಿ. ನಾವು ಸಂಪಾಜೆ ಭಾಗವನ್ನೇ ಹೆಚ್ಚಾಗಿ ಅವಲಂಬಿಸಿದ್ದೇವೆ. ಸರಕಾರ ನಮಗೆ ಯಾವಾಗ, ಎಲ್ಲಿ ಮನೆ ಕಟ್ಟಿ ಜಾಗ ನೀಡುತ್ತದೆ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು. ಇಲ್ಲವಾದರೆ ನಾವು ಮಾನಸಿಕವಾಗಿ ಕೊರಗಬೇಕಾಗು ತ್ತದೆ. ಉಚಿತವಾಗಿ ನೀಡಿದ್ದ ಬಸ್‌ ಪಾಸ್‌ ರದ್ದುಗೊಳಿಸಿದ್ದು, ಇದನ್ನು ನವೀಕರಿಸಬೇಕು.
ರಾಮಕೃಷ್ಣ ಸಂತ್ರಸ್ತ, ಜೋಡುಪಾಲ

ಪ್ರಕೃತಿ ವಿಕೋಪದಿಂದಾಗಿ ನಾವು ಬಹಳ ಸಂಕಷ್ಟಕ್ಕೆ ಒಳಗಾಗಿದ್ದೇವೆ. ನಮ್ಮ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ನಿರಾಶ್ರಿತರಾದ ಪ್ರತೀ ಕುಟುಂಬಕ್ಕೆ ಸರಕಾರಿ ಉದ್ಯೋಗ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಾವು ಜೀವನ ನಡೆಸುವುದು ತುಂಬಾ ಕಷ್ಟ ಆಗಬಹುದು.
 ಶಿಲ್ಪಾ  ಜೋಡುಪಾಲ, ಅಂಗವಿಕಲ ಬಿಎಡ್‌ ಪದವೀಧರೆ

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.