ಕಾರ್ಯಪ್ಪ ಕಾಲೇಜಿನಲ್ಲಿ ರಂಗ ತರಬೇತಿ ಕಾರ್ಯಾಗಾರ ಸಂಪನ್ನ


Team Udayavani, Mar 28, 2017, 3:01 PM IST

29-KSARGOD-4.jpg

ಮಡಿಕೇರಿ: ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸ್ನಾತಕೋತ್ತರ ಆಂಗ್ಲ ವಿದ್ಯಾರ್ಥಿಗಳಿಗಾಗಿ ಒಂಭತ್ತು ದಿನಗಳ ಕಾಲ ನಡೆದ ರಂಗ ತರಬೇತಿ ಕಾರ್ಯಾಗಾರ ಸಮಾರೋಪಗೊಂಡಿದೆ.

ಕಾಲೇಜು ಸಭಾಂಗಣದಲ್ಲಿ ನಡೆದ ಕೊನೆಯ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು “”ಉಲ್ಟಾ ರಾಜ-ಪಲ್ಟಾ ಮಂತ್ರಿ ಎಂಬ ನಾಟಕವನ್ನು ಪ್ರಸ್ತುತ ಪಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿರಾಜಪೇಟೆಯ ಡಾ| ಎಸ್‌.ವಿ. ನರಸಿಂಹನ್‌ ವಿದ್ಯಾರ್ಥಿಗಳು ರಂಗ ಪ್ರಯೋಗದಲ್ಲಿ ಭಾಗವಹಿಸುವ ಮೂಲಕ ಭಾಷೆಗೂ ಮೀರಿದ ಸಂವಹನ ಮಾಧ್ಯಮಗಳನ್ನು ಗ್ರಹಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಸ್ನಾತಕೋತ್ತರ ಆಂಗ್ಲ ವಿಭಾಗದ ಈ ವಿನೂತನ  ಕಾರ್ಯಕ್ರಮ ಮುಂದೆಯೂ ವಿದ್ಯಾರ್ಥಿಗಳಿಗೆ ಪುಸ್ತಕದಿಂದ ಆಚೆಗೆ ಇರುವ ಜಗತ್ತಿನ ಆಗು ಹೋಗುಗಳಿಗೆ ಸ್ಪಂದಿಸುವ ಅವಕಾಶ ನೀಡಲಿ ಎಂದು ಆಶಿಸಿದರು. 

ಕಾರ್ಯಕ್ರಮದಲ್ಲಿ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾರ್ವತಿ ಅಪ್ಪಯ್ಯ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಿರುವ ಇಂತಹ ಕಾರ್ಯಕ್ರಮಗಳಿಗೆ ಕಾಲೇಜಿನ ಪ್ರೋತ್ಸಾಹ ಸದಾ ಇರುತ್ತದೆ ಎಂದರು. 

ಸಂಯೋಜಕರಾದ ಡಾ. ನಯನಾ ಕಶ್ಯಪ್‌ ಸಾಹಿತ್ಯಾಭ್ಯಾಸವೆಂದರೆ ಸದಾ ಪುಸ್ತಕ ಓದುವುದು, ತರಗತಿಗಳಲ್ಲಿ ಉಪನ್ಯಾಸಗಳನ್ನು ಆಲಿಸುವುದು, ಸಾಹಿತ್ಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಇವುಗಳಿ ಗಷ್ಟೇ ಸೀಮಿತವಾಗಿರದೆ ಸಮಾಜದ ಆಗುಹೋಗುಗಳನ್ನು ಗಮನಿಸಿ ಅವುಗಳಿಗೆ ಸ್ಪಂದಿಸುವುದು ಕೂಡ ಅತ್ಯಂತ ಅವಶ್ಯಕ. ಈ ಕಾರಣಕ್ಕಾಗಿ ಸಾಹಿತ್ಯದ ವಿದ್ಯಾರ್ಥಿಗಳಿಗೆ ರಂಗಾನುಭವದ ಮೂಲಕ ಲೋಕಾನುಭವ ಮತ್ತು ಸ್ವಾನುಭವದ ಅವಕಾಶ ನೀಡುವ ಸಲುವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಯೋಜಕತ್ವದಲ್ಲಿ ಸ್ನಾತಕೋತ್ತರ ಆಂಗ್ಲ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ರಂಗತರಬೇತಿ ನೀಡಲಾಯಿತು ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ನಡೆಸಿಕೊಟ್ಟ ಬೆಂಗಳೂ ರಿನ ರಂಗಕರ್ಮಿ ಶ್ರೀ ಪ್ರಣೀತ್‌ ಪಿ. ವಿದ್ಯಾರ್ಥಿಗಳಲ್ಲಿರುವ 
ಸುಪ್ತ  ಪ್ರತಿಭೆಯನ್ನು ಅನಾವರಣಗೊಳಿಸಲು ರಂಗತರಬೇತಿ ಅತ್ಯಂತ ಸೂಕ್ತ ಮಾಧ್ಯಮ ಎಂದರು. ಸ್ನಾತಕೋತ್ತರ ಆಂಗ್ಲ ವಿಭಾಗದ ಉಪನ್ಯಾಸಕರಾದ ಕುಮಾರಿ ನೂರ್‌ ಸಭಾ ಹಾಗೂ ನೂರ್‌ ಹುದಾ ಕಾರ್ಯಕ್ರಮ ನಿರೂಪಿಸಿ ಶ್ರೀನಿವಾಸ್‌ ಪಿ.ಕೆ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.