ಸಾಹಿತ್ಯದೊಂದಿಗೆ ಮನಸ್ಸು ಬೆಸೆಯಿರಿ: ಅಬ್ದುಲ್‌ ರೆಹಮಾನ್‌ 


Team Udayavani, Jan 18, 2019, 12:30 AM IST

z-byari-1.jpg

ಮಡಿಕೇರಿ:ಯಾವುದೇ ಭಾಷೆಯಾಗಿದ್ದರೂ ಸಾಹಿತ್ಯದೊಂದಿಗೆ ಮನಸ್ಸುಗಳನ್ನೂ ಬೆಸೆಯಬೇಕಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಅಬ್ದುಲ್‌ ರಹ್ಮಾನ್‌ ಕುತ್ತೆತ್ತೂರು ಹೇಳಿದ್ದಾರೆ.

ನಗರದ ಕಾವೇರಿ ಸಭಾಂಗಣದಲ್ಲಿನ ಜ. ಹಬೀಬ್‌ ಲಾಯರ್‌ ವೇದಿಕೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕೊಡಗು ಬ್ಯಾರೀಸ್‌ ವೆಲ್ಫೆರ್‌ ಟ್ರಸ್ಟ್‌ ಆಶ್ರಯದಲ್ಲಿ ಆಯೋಜಿತ ಜಿಲ್ಲಾ ಬ್ಯಾರಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಭಾಷೆ ಮೂಲಕ ಸಾಮರಸ್ಯ ಸಾಧಿಸಬೇಕಾದದ್ದು ಮುಖ್ಯ. ಎಲ್ಲ ಭಾಷೆಗಳು ಪರಸ್ಪರ ಬೆಸೆಯುತ್ತಾ ಸಾಹಿತ್ಯ ಕೃಷಿಯನ್ನು ಸಮೃದ್ಧಗೊಳಿಸಬೇಕಾಗಿದೆ. ಅಭಿವ್ಯಕ್ತಿ ಮಾಧ್ಯಮ ಮಾತ್ರವಾಗಿರುವ  ಒಂದು ಭಾಷೆ ಇತರ ಭಾಷೆಗಳೊಂದಿಗೆ ಬೆರೆತಾಗ ಮಾತ್ರ ಇನ್ನಷ್ಟು ಬೆಳೆಯುತ್ತದೆ ಎಂದು ಅಬ್ದುಲ್‌ ರಹ್ಮಾನ್‌ ಕುತ್ತೆತ್ತೂರು ಅಭಿಪ್ರಾಯಪಟ್ಟರು.

ಸಮಾವೇಶದ ಅಂಗವಾಗಿನ ಬಹು ಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತ ನಾಡಿದ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್‌, ಸಮಾಜದಲ್ಲಿನ ಅನೇಕ ಅಶಿಕ್ಷಿತ ಜನರು ಜಾನಪದವನ್ನೇ ತಮ್ಮ ಭಾಷಾ ಮಾಧ್ಯಮವಾಗಿ ಹೊಂದಿದ್ದಾರೆ. ಇಂಥ ಅದೆಷ್ಟೋ ಜಾನಪದ ಸಾಹಿತ್ಯಗಳು ನಾಡಿನ ಸಾಂಸ್ಕೃತಿಕ ಸಂಪತ್ತಾಗಿದೆ ಎಂದು ಹೇಳಿದರು. 

ಸಾಹಿತಿ ಬಿ.ಎ.ಸಂಶುದ್ದೀನ್‌, ಬ್ಯಾರಿ ಅಕಾಡೆಮಿ ಅಧ್ಯಕ್ಷ ಕರಂಬಾರ್‌ ಮಹಮ್ಮದ್‌, ಅರೆಭಾಷಾ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ್‌, ಅಕಾಡೆಮಿ ರಿಜಿಸ್ಟ್ರಾರ್‌ ಬಿ. ಚಂದ್ರಹಾಸ ರೈ  ವೇದಿಕೆಯಲ್ಲಿದ್ದರು. ಮುನೀರ್‌ ಅಹಮ್ಮದ್‌ ಸ್ವಾಗತಿಸಿದರು. ಪುರಾತನ ಕಾಲದ ವಸ್ತುಗಳು, ನೋಟು, ನಾಣ್ಯಗಳ ಪ್ರದರ್ಶನ, ಸಾಹಿತ್ಯ ಕೃತಿಗಳ ಮಾರಾಟವೂ ಸಮಾವೇಶದ ಆಕರ್ಷಣೆಯಾಗಿತ್ತು. 

ಬಹುಭಾಷೆ ಕವಿಗೋಷ್ಠಿಕವಿಗೋಷ್ಠಿಯಲ್ಲಿ  ನಾಗೇಶ್‌ ಕಾಲೂರ್‌,ನಾಸೀರ್‌ ಅಹ್ಮದ್‌ ಕಾಜೂರು ಸತೀಶ್‌  ಕಿಶೋರ್‌ ರೈ ಕತ್ತಲೆ ಕಾಡು,ಪುದಿನೆರವನ ರೇವತಿ ರಮೇಶ್‌,ಫ್ಯಾನಿ ಮುತ್ತಣ್ಣ, ಬಶೀರ್‌ ಅಹ್ಮದ್‌, ವಿಲ್ಫೆ†ಡ್‌ ಕ್ರಾಸ್ತಾ, ಚಾರ್ಲ್ಸ್‌ ಡಿ’ಸೋಜಾ, ಶೀಲಾ, ಬಿ.ಆರ್‌.ಜೋಯಪ್ಪ, ಮರಿಯಮ್‌ ಇಸ್ಮಾಯಿಲ್‌, ಯು.ಕೆ. ಆಯಿಶಾ, ಹುಸೈನ್‌ ಕಾಟಿಪಳ್ಳ, ಎಂ. ಅಬ್ದುಲ್ಲಾ, ಕೆ.ಜಿ. ರಮ್ಯಾ, ಮೂಡುಬಿದಿರೆ ಹಸನಬ್ಬ, ಬಶೀರ್‌ ಅಹಮ್ಮದ್‌ ಅವರು ಬ್ಯಾರಿ, ಕನ್ನಡ, ಕೊಡವ,ಅರೆಭಾಷೆ, ಕೊಂಕಣಿ, ತುಳು ಭಾಷೆಗಳಲ್ಲಿ ಕವನ ವಾಚಿಸಿ ಗಮನ ಸೆಳೆದರು. ಜಿಲ್ಲೆಯ ಬ್ಯಾರಿ ಸಮುದಾಯದವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.