ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವಿಜಯೋತ್ಸವ


Team Udayavani, May 25, 2019, 6:10 AM IST

MADIKERIYALLI-KODAGU

ಮಡಿಕೇರಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸುವುದರೊಂದಿಗೆ ಮೈಸೂರು, ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಜಯಭೇರಿ ಬಾರಿಸಿದ ಹಿನ್ನೆಲೆ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿತು.

ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ವಿಧಾನ ಪರಿಷತ್‌ ಸದಸ್ಯ ಸುನೀಲ್‌ ಸುಬ್ರಮಣಿ ಹಾಗೂ ಬಿಜೆಪಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರಲ್ಲದೇ, ಈಡುಗಾಯಿ ಒಡೆಯುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರಿಗೆ ಜೈಕಾರ ಕೂಗಿದ ಕಾರ್ಯಕರ್ತರು ಬಿಜೆಪಿ ಹಾಗೂ ಪ್ರತಾಪ್‌ ಸಿಂಹ ಗೆಲುವಿಗೆ ಹರ್ಷ ವ್ಯಕ್ತ ಪಡಿಸಿದರು.

ನಂತರ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಸುನೀಲ್‌ ಸುಬ್ರಮಣಿ, ಪ್ರಧಾನಿ ನರೇಂದ್ರ ಮೋದಿ ಅವರ ಸೇವೆಯನ್ನು ಪರಿಗಣಿಸಿ ದೇಶದ ಜನ ಪ್ರಚಂಡ ಬಹುಮತವನ್ನು ನೀಡಿದ್ದು, ಇದನ್ನು ನಾವು ನಿರೀಕ್ಷೆ ಮಾಡಿದ್ದೆವು ಎಂದು ತಿಳಿಸಿದರು.

ದೇಶಭಕ್ತನಾಗಿ, ದೈವಭಕ್ತನಾಗಿ ದೇಶದ ಜನರ ಪ್ರಧಾನ ಸೇವಕರಾಗಿ ಜನಸೇವೆ ಮಾಡಿದ್ದನ್ನು ಜನತೆ ಗಮನಿಸಿದ್ದು ಇದುವೇ ಬಹುಮತಕ್ಕೆ ಕಾರಣವಾಯಿತು. ಸಂಸದ ಪ್ರತಾಪ್‌ ಸಿಂಹ ಅವರು ಕೂಡ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಲು ಸಾಧ್ಯವಾಗಿದ್ದು, ಜನರ ನಿರೀಕ್ಷೆಯಂತೆ ಸಂಸದರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಸುನೀಲ್‌ ಸುಬ್ರಮಣಿ ಹೇಳಿದರು.

ಬಿಜೆಪಿ ಪ್ರಮುಖರಾದ ಕೆ.ಎಸ್‌.ರಮೇಶ್‌, ಪಿ.ಡಿ.ಪೊನ್ನಪ್ಪ, ಉಣ್ಣಿಕೃಷ್ಣ, ಶಜೀಲ್‌ ಕೃಷ್ಣ, ಟಿ.ಎಸ್‌.ಪ್ರಕಾಶ್‌, ಸವಿತಾ ರಾಕೇಶ್‌, ಅನಿತಾ ಪೂವಯ್ಯ, ಕನ್ನಿಕೆ, ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು

ಅಧಿಕಾರದ ಆಸೆಯಿಂದ ಹೊಂದಾಣಿಕೆ
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಪರಸ್ಪರ ಕಚ್ಚಾಡುತ್ತಿದ್ದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗ‌ಳು ಅಧಿಕಾರದ ಆಸೆಯಿಂದ ಹೊಂದಾಣಿಕೆ ಮಾಡಿಕೊಂಡು ರಾಜ್ಯದ ಜನತೆಗೆ ಮೋಸ ಮಾಡಿದ್ದರು ಎಂದು ವಿದಾನ ಪರಿಷತ್‌ ಸದಸ್ಯ ಸುನೀಲ್‌ ಸುಬ್ರಮಣಿ ಅವರು ಮೈತ್ರಿ ಪಕ್ಷಗಳ ವಿರುದ್ಧ ಆರೋಪಿಸಿದರು.

104 ಸ್ಥಾನ ಪಡೆದ ಬಿಜೆಪಿಗೆ ಅಧಿಕಾರ ನೀಡದೇ ವಂಚಿಸಿದ್ದರು. ಇದನ್ನು ಗಮನಿಸಿದ ಮತದಾರರು ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಸುನೀಲ್‌ ಸುಬ್ರಮಣಿ ಅವರು ಈ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.