ಕೊಡಗು : ರೈಲ್ವೇ ಕಂಬಿ ಬೇಲಿಯಲ್ಲಿ ಸಿಲುಕಿ ಪರದಾಡಿದ ಕಾಡಾನೆ
Team Udayavani, May 14, 2022, 11:15 PM IST
ಮಡಿಕೇರಿ : ವಾಲ್ನೂರು ತ್ಯಾಗತ್ತೂರು ಗ್ರಾ.ಪಂ. ವ್ಯಾಪ್ತಿಯ ನೆಲ್ಯಹುದಿಕೇರಿ ಬರಡಿಯಲ್ಲಿ ರೈಲ್ವೇ ಕಂಬಿಗಳ ಬೇಲಿಯಲ್ಲಿ ಕಾಡಾನೆಯೊಂದು ಸಿಲುಕಿಕೊಂಡು ಪರದಾಡಿದ ಘಟನೆ ನಡೆದಿದೆ.
ಕಾಡಾನೆಗಳ ನುಸುಳುವಿಕೆಯನ್ನು ತಡೆಯಲು ನೆಲ್ಯಹುದಿಕೇರಿ ಬರಡಿ ಭಾಗದಲ್ಲಿ ರೈಲ್ವೇ ಕಂಬಿಗಳ ಬೇಲಿಯನ್ನು ಅಳವಡಿಸಲಾಗಿದೆ. ಇದು ಅವೈಜ್ಞಾನಿಕ ರೂಪದಲ್ಲಿರುವುದರಿಂದ ಗಜಪಡೆ ಗ್ರಾಮಗಳಿಗೆ ಲಗ್ಗೆ ಇಡುವುದನ್ನು ಬಿಟ್ಟಿಲ್ಲ. ಬಲಾಡ್ಯ ಆನೆಗಳು ಮನುಷ್ಯರಂತೆ ಮೇಲಿನಿಂದ ಬೇಲಿ ದಾಟಿದರೆ ಸಣ್ಣ ಆನೆಗಳು ಬೇಲಿಯ ತಳ ಭಾಗದಿಂದ ನುಸುಳಿ ತೋಟಗಳನ್ನು ಸೇರಿಸಿಕೊಳ್ಳುತ್ತವೆ.
ಇದೇ ಮಾದರಿ ಶನಿವಾರ ಕೂಡ ಹೊಳೆಯ ಭಾಗದಿಂದ ಬಂದ ಸಾಧಾರಣ ವಯಸ್ಸಿನ ಕಾಡಾನೆಯೊಂದು ಕಾಫಿ ತೋಟವನ್ನು ಸೇರಲು ಬೇಲಿಯ ಕೆಳಭಾಗದಿಂದ ದಾಟುವ ಪ್ರಯತ್ನ ಮಾಡಿತು. ಆದರೆ ದಾಟಲಾಗದೆ ಮಧ್ಯದಲ್ಲೇ ಸಿಲುಕಿಕೊಂಡು ಪರದಾಡಿತು. ಕೆಲವು ಗಂಟೆಗಳ ಹರಸಾಹಸದಿಂದ ಹೇಗೋ ಬೇಲಿಯಿಂದ ಮುಕ್ತಿ ಹೊಂದಿ ತೋಟ ಸೇರಿಕೊಂಡಿತು.
ಸ್ಥಳದಲ್ಲಿ ಸ್ವಲ್ಪ ಕಾಲ ಆತಂಕ ಸೃಷ್ಟಿಯಾಗಿತ್ತು, ಗ್ರಾಮಸ್ಥರು ಮೊಬೈಲ್ಗಳಲ್ಲಿ ದೃಶ್ಯವನ್ನು ಸೆರೆ ಹಿಡಿಯುವ ದೃಶ್ಯ ಕಂಡುಬಂತು.
ಇದನ್ನೂ ಓದಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದ ಮಹಿಳೆಯ 6.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ