ಕಾಲೂರಿನಲ್ಲಿ ಕಾಲೂರಲಾಗದ ದುಸ್ಥಿತಿ
Team Udayavani, Aug 28, 2018, 6:35 AM IST
ಮಡಿಕೇರಿ: ಮಹಾಮಳೆ ಸೃಷ್ಟಿಸಿದ ಕೆಸರಿನಾರ್ಭಟಕ್ಕೆ ಮಡಿಕೇರಿಯಂಚಿನ ಕಾಲೂರು ಗ್ರಾಮ ಅಕ್ಷರಶಃ ಸ್ಮಶಾನದಂತಾಗಿದ್ದು, ಮನೆ ಮಠಗಳು, ಕಾಫಿ ತೋಟಗಳು ಕಣ್ಮರೆಯಾಗಿವೆ. ಈ ಗ್ರಾಮದಲ್ಲಿ 250 ಒಕ್ಕಲು ಕುಟುಂಬದ ಅಂದಾಜು 700 ಮಂದಿ ಬದುಕು ಕಟ್ಟಿಕೊಂಡಿದ್ದರು.
ದಟ್ಟ ಅರಣ್ಯದೊಂದಿಗೆ ಏಲಕ್ಕಿ, ಕಾಫಿ ಕೃಷಿಯನ್ನು ನಡೆಸುತ್ತಲೆ, ಭತ್ತದ ಸಾಂಪ್ರದಾಯಿಕ ಕೃಷಿ ಪದ್ಧತಿ ತೊರೆಯದೆ ನೂರಾರು ವರ್ಷಗಳಿಂದ ಕಾಲೂರು ಗ್ರಾಮಗಳಲ್ಲಿ ನೆಲೆ ನಿಂತ ಮಂದಿ, ಕೊಡಗಿನ ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದರು. ಆದರೆ ಸಂಸ್ಕೃತಿಗೆ ನೆಲೆ ಕಲ್ಪಿಸಿದವರಿಗೆ ಇಂದು ನೆಲೆಯೇ ಇಲ್ಲದಾಗಿದೆ.
ಹಲವು ಮನೆಗಳು ಮಣ್ಣಿನಲ್ಲಿ ಮಣ್ಣಾಗಿ ಹೋಗಿವೆ. ಪ್ರಕೃತಿಯ ರೌದ್ರ ನರ್ತನಕ್ಕೆ ಬೆಚ್ಚಿದ ಗ್ರಾಮೀಣರು ದಿಕ್ಕಾಪಾಲಾಗಿ ಜಿಲ್ಲಾ ಕೇಂದ್ರ ಸೇರಿ ವಿವಿಧೆಡೆಗಳಿಗೆ ತೆರಳಿದ್ದಾರೆ. ಮತ್ತೆ ಹಿಂದಿನ ಬದುಕು ಇವರಿಗೆ ಸಾಧ್ಯವೇ ಎನ್ನುವುದನ್ನು ಭವಿಷ್ಯ ನಿರ್ಧರಿಸಬೇಕಾಗಿದೆ.
ಪ್ರಾಕೃತಿಕ ವಿಕೋಪದಿಂದ ಗ್ರಾಮದ ಸಣ್ಣ ನೀರಿನ ಹರಿವೂ ದೊಡ್ಡ ನದಿಯಾಗಿ ಹರಿದಿದ್ದು, ಇದೀಗ ನೀರಿನ ಹರಿವುಗಳೇ ಬದಲಾಗಿ ಹೋಗಿದ್ದರೆ, ರಸ್ತೆ, ವಿದ್ಯುತ್ಛಕ್ತಿ ಎನ್ನುವುದು ಮರು ಸ್ಥಾಪನೆಯಾಗಬೇಕಾದರೆ ವರ್ಷಗಳೇ ಬೇಕು. ಇಡೀ ಗ್ರಾಮವೇ ಪ್ರಕೃತಿಯ ಕೋಪಕ್ಕೆ ತುತ್ತಾಗಿ ಅಂದಾಜು ಏಳು ದಶಕಗಳಷ್ಟು ಹಿಂದಕ್ಕೆ ಹೋಗಿದೆ ಎನ್ನುವ ಮಾತು ಗ್ರಾಮಸ್ಥರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್