ಕೊಡಗು: ಶುಕ್ರವಾರ 78 ಮಂದಿಗೆ ಸೋಂಕು ದೃಢ; 507 ಸಕ್ರಿಯ ಪ್ರಕರಣ
Team Udayavani, Oct 3, 2020, 1:41 AM IST
ಮಡಿಕೇರಿ: ಜಿಲ್ಲೆಯಲ್ಲಿ ಶುಕ್ರವಾರ 78 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟು ಸಂಖ್ಯೆ 2,879ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಸದ್ಯ 507 ಸಕ್ರಿಯ ಪ್ರಕರಣಗಳಿದ್ದು, 44 ಮಂದಿ ಮೃತಪಟ್ಟಿದ್ದಾರೆ ಎಂದವರು ಹೇಳಿದ್ದಾರೆ. ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಅಂಬಟ್ಟಿ ಗ್ರಾಮವೊಂದರಲ್ಲೇ 16 ಮಂದಿದಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಗುರುವಾರ 53 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು ನಾಲ್ಕು ಮಂದಿ ಮೃತಪಟ್ಟಿದ್ದರು. ಇದರಿಂದಾಗಿ ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 2,801ಕ್ಕೇರಿದ್ದು 486 ಸಕ್ರಿಯ ಪ್ರಕರಣಗಳಿವೆ. 44 ಮಂದಿ ಮೃತಪಟ್ಟಿದ್ದಾರೆ ಎಂದುಜಿಲ್ಲಾಧಿಕಾರಿ ಮಾಹಿತಿ ನೀಡಿದ್ದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.
ಕಾಸರಗೋಡು: 476 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 476 ಮಂದಿಗೆ ಸೋಂಕು ದೃಢಪಟ್ಟಿದ್ದು 158 ಮಂದಿ ಗುಣಮುಖರಾಗಿದ್ದಾರೆ. 451 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ.
9,258 ಮಂದಿಗೆ ಸೋಂಕು
ಕೇರಳದಲ್ಲಿ ಶುಕ್ರವಾರ 9,258 ಮಂದಿಗೆ ಸೋಂಕು ದೃಢಪಟ್ಟಿದೆ. ರೋಗ ಬಾಧಿತರಲ್ಲಿ 47 ಮಂದಿ ವಿದೇಶದಿಂದ ಹಾಗೂ 184 ಮಂದಿ ಇತರ ರಾಜ್ಯಗಳಿಂದ ಬಂದವರು. 8,931 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿ
ದ್ದರೆ 93 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಟ್ಟಿದೆ.
ಆರು ಪೊಲೀಸರಿಗೆ ಕೋವಿಡ್
ಕಾಸರಗೋಡು ಠಾಣೆಯ ಎಸ್ಎಚ್ಒ ಸಹಿತ 6 ಪೊಲೀಸರಿಗೆ ಕೋವಿಡ್ ದೃಢಪಟ್ಟಿದೆ. ಈ ಹಿಂದೆ 12 ಮಂದಿ ಪೊಲೀಸರಿಗೆ ಕೋವಿಡ್ ದೃಢಗೊಂಡಿತ್ತು. ಇದರಿಒಂದಾಗಿ ಠಾಣೆಗೆ ಪ್ರವೇಶಿಸಲು ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ