ಕೊಡವ ಭಾಷಿಕ ಸಮುದಾಯಗಳ ಕೂಟ  ಮನವಿ


Team Udayavani, Mar 8, 2019, 1:00 AM IST

kodava-bashika.jpg

ಮಡಿಕೇರಿ: ಕೊಡವ ಭಾಷೆ ಮಾತನಾಡುವ 20 ಭಾಷಿಕ ಸಮುದಾಯ ಬಾಂಧವರ ಅಭ್ಯುದಯಕ್ಕಾಗಿ ಪೂರ್ಣ ಪ್ರಮಾಣದ ತಜ್ಞರ ಸಮಿತಿಮತ್ತು ಸತ್ಯಶೋಧನಾ ಸಮಿತಿಯನ್ನು ರಚಿಸಿ ಅಗತ್ಯ ನೆರವನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ಭಾಷಿಕ ಸಮುದಾಯಗಳ ಕೂಟ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾ ಅವರಿಗೆ ಮನ ಸಲ್ಲಿಸಲಾಯಿತು.

ಇತ್ತೀಚೆಗೆ ಬಸವನಹಳ್ಳಿಗೆ ಮುಖ್ಯ ಮಂತ್ರಿಗಳು ಭೇಟಿ ನೀಡಿದ್ದ ಸಂದರ್ಭ ಕೂಟದ ಸಂಚಾಲಕ ಡಾ.ಮೇಚೀರ ಸುಭಾಷ್‌ ನಾಣಯ್ಯ ಹಾಗೂ ಪದಾಧಿಕಾರಿಗಳು ಕೊಡವ ಭಾಷೆ ಮಾತನಾಡುವ 20 ಭಾಷಿಕ ಸಮುದಾಯದ ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ಕೊಡವ ಭಾಷಿಕ ಮೂಲನಿವಾಸಿಗಳು ಪೂರ್ವಿಕರ ಕಾಲದಿಂದಲೇ ಪಕೃತಿಯನ್ನು ಆರಾಧ್ಯದೈವವೆಂದು ನಂಬಿ ಅನಾನು ಭಾವ ಸಂಬಂಧ ಹೊಂದಿಕೊಂಡು ಬಂದಿ ರುವುದು ಇತಿಹಾಸದಿಂದ ತಿಳಿಯುತ್ತದೆ. ಈ ಭೂಪ್ರದೇಶವನ್ನು ಆಳಿದ ಅದೇಷ್ಟೋ ರಾಜಮಹಾರಾಜರು, ಬ್ರಿಟಿಷರು, ಕೃಷಿಗೆ ಒತ್ತು ಕೊಟ್ಟು ಇಲ್ಲಿನ ಜನಸಮುದಾಯಕ್ಕೆ ಜಮ್ಮ, ಉಂಬಳಿ ಜಾಗ, ಭೂಮಿ ಕೊಟ್ಟು ಜೀವನೋಪಾಯಕ್ಕೆ ನೆರವಾಗಿದ್ದರು. ಆದರೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಜೀವನ‌ಮಟ್ಟ ಸುಧಾರಣೆ ಕಾಣದಿರುವುದು ವಿಷಾದನೀಯ.

ಕೊಡಗು ವನಸಂಪತ್ತಿನಿಂದ ಕಂಗೊಳಿ  ಸುತ್ತಿದ್ದು, ಅದರ ಪೋಷಣೆ, ಪಾಲನೆ ಈ ನಾಡಿನ ಮೂಲ ನಿವಾಸಿಗಳಿಗೆ ಹೆಮ್ಮೆಯ ವಿಷಯ. 

ಆಧುನಿಕತೆಯ ಭರಾಟೆಯಲ್ಲಿ ಪರಕೀ ಯರ ಅನ್ಯಮನಸ್ಸಿನ  ವಿಕೃತ ಧಾಳಿಯಿಂದ ಅವೆಷ್ಟೋ ಭೂಪ್ರದೇಶ ಹಾನಿಗೊಂಡಿದೆ. 

ಆದರೂ ಇವೆಲ್ಲವನ್ನು ಸಹಿಸಿಕೊಂಡು ಕೊಡವ ಭಾಷೆ ಮಾತನಾಡುವ ಅಮ್ಮಕೊಡವ, ಹೆಗ್ಗಡೆ, ಐರಿ, ಕೊಯವ, ಕೆಂಬಟ್ಟಿ, ಕುಡಿಯ, ಪಣಿಕ, ನಾಂದ, ನಾಯರ್‌, ಕೋಲೆಯ, ಗೊಲ್ಲ, ಮಡಿವಾಳ, ಮಲಿಯ, ಕಣಿಯ, ಮೇದ, ಬಣ್ಣ, ಕಾಪಾಳ, ಬೂಣೆಬಟ್ಟ, ಬಾಣಿಯ, ಮಾರಂಗಿ ಸಮುದಾಯ ಕೊಡಗಿನಲ್ಲಿ ಜೀವನ ಸಾಗಿಸುತ್ತಿದೆ.

1974-75 ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಲ್‌.ಜಿ. ಹಾವನೂರು ಅವರ ಮುತುವರ್ಜಿಯಿಂದ ಪ್ರಪ್ರಥಮವಾಗಿ ಸಮಗ್ರ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಯಿತು. ನಂತರ ಬಂದ ಯಾವುದೇ ಆಯೋಗ ಕೊಡಗಿನ ಅತೀ ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ನಿರೀಕ್ಷಿತ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ನ್ಯಾಯ ಒದಗಿಸದೆ ಎಡವಿರುವುದು ವಿಷಾದನೀಯವೆಂದು ಸುಭಾಷ್‌ ನಾಣಯ್ಯ ಮುಖ್ಯಮಂತ್ರಿಗಳ ಗಮನ ಸೆಳೆದರು.

ಬೇಡಿಕೆಗಳು
ಸುಮಾರು 82 ಸಾವಿರ ಜನಸಂಖ್ಯೆಯಿರುವ ಸಮುದಾಯಕ್ಕೆ ಸಮುದಾಯ ಭವನವನ್ನು ಮಂಜೂರು ಮಾಡಿ ಕನಿಷ್ಠ 5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯದ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯ ನೀಡಬೇಕು, ಸರಕಾರದ ವತಿಯಿಂದ ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿ ಪ್ರಕ್ರಿಯೆ ಆರಂಭಿಸಬೇಕು. 

ಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಭಾಷೆಯನ್ನು ಮಾತನಾಡುವ ಸಮುದಾಯಗಳನ್ನು (ಹಿಂದುಳಿದ ವರ್ಗ, ಪ.ಜಾ, ಪ.ಪಂಗಡ) ಭಾಷಾ ಅಲ್ಪಸಂಖ್ಯಾಕರೆಂದು ಘೋಷಿಸಬೇಕು, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಜವಾಹರ್‌ ನವೋದಯ ಶಾಲೆ ಮಾದರಿಯಲ್ಲಿ ವಸತಿ ಶಾಲೆಯನ್ನು ನಿರ್ಮಿಸಿ ಶಿಕ್ಷಣ ಸೌಲಭ್ಯ ಒದಗಿಸಬೇಂಕೆಬ ಬೇಡಿಕೆಯನ್ನು   ಕೊಡವ ಭಾಷಿಕ ಸಮುದಾಯಗಳ ಕೂಟ ಇಟ್ಟಿವೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.