![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಎರಡು ದಿನಗಳಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ
Team Udayavani, Jul 5, 2018, 7:20 AM IST
![z-dc-visit-1.jpg](https://www.udayavani.com/wp-content/uploads/2018/07/5/z-dc-visit-1.jpg)
ಮಡಿಕೇರಿ: ಮಾಕುಟ್ಟದಲ್ಲಿ ಭೂ ಕುಸಿತ ಉಂಟಾಗಿ ವಾಹನ ಸಂಚಾರ ಸ್ಥಗಿತಗೊಂಡಿರುವ ಕೊಡಗು- ಕೇರಳ ನಡುವಿನ ಅಂತಾರಾಜ್ಯ ಹೆದ್ದಾರಿ ಕಾಮಗಾರಿಯನ್ನು ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಪರಿಶೀಲಿಸಿದರು.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಅವರು ರಸ್ತೆ ಅವ್ಯವಸ್ಥೆ ಮತ್ತು ಕಾಮಗಾರಿಯ ಪ್ರಗತಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕೋಪಯೋಗಿ ಇಲಾಖೆ, ಮಡಿಕೇರಿಯ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ರಸ್ತೆ ಗುಣಮಟ್ಟದ ಧೃಢೀಕರಣದ ಆಧಾರದ ಮೇಲೆ 2 ದಿನಗಳ ಬಳಿಕ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದರು.
ಮಾಕುಟ್ಟ ರಸ್ತೆಯಲ್ಲಿ ಈಗಾಗಲೇ ಲಘು ವಾಹನ ಸಂಚಾರಕ್ಕೆ ಅಗ್ಯವಿರುವಷ್ಟು ಕಾಮಗಾರಿ ಪೂರ್ಣವಾಗಿದ್ದು, ರಸ್ತೆಗೆ ಕುಸಿದಿದ್ದ ಬರೆಯ ಮಣ್ಣು ತೆಗೆದು ರಸ್ತೆಯ ಮೇಲೆ ಬಿದ್ದಿದ್ದ ಮರಗಳನ್ನುಬದಿಗೆ ಸರಿಸಲಾಗಿದೆ. ಎರಡನೇ ಹಂತದ ರಸ್ತೆ ದುರಸ್ತಿಗಾಗಿ6 ಕೋಟಿ ವೆಚ್ಚದ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶ್ರೀವಿದ್ಯಾ ತಿಳಿಸಿದರು.
ಮಾಕುಟ್ಟ ರಸ್ತೆ ವೀಕ್ಷಣೆ ಸಂದರ್ಭ ಜಿಲ್ಲಾಧಿಕಾರಿ ಜೊತೆಯಲ್ಲಿ ತಾಲೂಕು ತಹಶೀಲ್ದಾರ್ ಆರ್.ಗೋವಿಂದರಾಜ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕಅಭಿಯಂತರ ಪ್ರಭು, ಸಹಾಯಕ ಅಭಿಯಂತರ ಸುರೇಶ್, ಸರ್ಕಲ್ ಇನ್ಸ್ಪೆಕ್ಟರ್ ಕುಮಾರ್ ಆರಾಧ್ಯ, ಅರಣ್ಯ ವಿಭಾಗಾಧಿಕಾರಿ ಮರಿಯಾ ಕ್ರಿಸ್ತರಾಜು, ಕಂದಾಯ ಪರಿವೀಕ್ಷಕ ಪಳಂಗಪ್ಪ, ಠಾಣಾಧಿಕಾರಿ ಸುರೇಶ್ ಬೋಪಣ್ಣ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಪೊಲೀಸರಿಗೆ ತರಾಟೆ
ಜಿಲ್ಲಾಧಿಕಾರಿ ಮಾಕು ಟ್ಟಕ್ಕೆ ತೆರಳಿದ ಸಂದರ್ಭ ಪೆರುಂ ಬಾಡಿ ಚೆಕ್ಪೋಸ್ಟ್ನ ಲ್ಲಿದ್ದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಯಾರೂ ಹಣ ಪಡೆದು ಲಘು ವಾಹನ ಗಳನ್ನು ಮಾಕುಟ್ಟಕ್ಕೆ ಬಿಡು ವಂತಿಲ್ಲ ಎಂದು ಆದೇಶಿಸಿದರು. ಚೆಕ್ಪೋಸ್ಟ್ನ ಸಿಬಂದಿ ಶಿಸ್ತುಬದ್ಧ ವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಜನರ ಮನವಿ
ರಸ್ತೆಯನ್ನು ಶೀಘ್ರ ಅಭಿ ವೃದ್ಧಿಪಡಿಸಿ ವಾಹನಗಳು ಸಂಚರಿಸಲು ಕ್ರಮ ಕೈಗೊಳ್ಳುವಂತೆ ಕೂಟು ಪೊಳೆ ಹಾಗೂ ಮಾಕುಟ್ಟ ನಿವಾಸಿ ಗಳು ಮನವಿ ಮಾಡಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.