ಲೋಕಸಭಾ ಚುನಾವಣೆ : ನಾಮಪತ್ರ ಸಲ್ಲಿಕೆ ಆರಂಭ


Team Udayavani, Mar 20, 2019, 1:00 AM IST

loka-sabha-chunavane.jpg

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮಾ.19 ರಂದು ಚುನಾವಣ ಅಧಿಸೂಚನೆ ಹೊರಡಿ ಸಲಾಗಿದೆ. ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಸಂಬಂಧಿಸಿದಂತೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ.   

ಮಾ.26 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾ. 27 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಮಾ.29ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದ್ದು, ಎ.18ರಂದು ಮತದಾನ ನಡೆಯಲಿದೆ.   

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಮತಗಟ್ಟೆಗಳ ಮೇಲ್ವಿಚಾರಣೆ, ಮಾದರಿ ನೀತಿ ಸಂಹಿತೆ, ಚುನಾವಣ ವೆಚ್ಚ ನಿರ್ವಹಣೆ, ಸಹಾಯವಾಣಿ ಕೇಂದ್ರದ ಕಾರ್ಯನಿರ್ವಹಣೆ, ಸಿ-ವಿಜಿಲ್‌, ಮತಗಟ್ಟೆಗಳ ಮೇಲ್ವಿಚಾರಣೆ ಮತ್ತಿತರ ವಿಷಯಗಳ ಬಗ್ಗೆ  ನೋಡಲ್‌ ಅಧಿಕಾರಿಗಳಿಂದ ಮಾಹಿತಿ ಪಡೆದರು.  

ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿರುದರಿಂದ ರಾಜಕೀಯ ಪಕ್ಷ ಗಳ ಸಭೆ, ಸಮಾರಂಭಗಳು ನಡೆಯಲಿವೆ. ಅದಕ್ಕೆ ಅನುಮತಿ ನೀಡುವುದು, ಚೆಕ್‌ ಪೋಸ್ಟ್‌ಗಳಲ್ಲಿ ಹೆಚ್ಚಿನ ನಿಗಾವಹಿಸುವುದು, ಚುನಾವಣ ವೆಚ್ಚ ನಿರ್ವಹಣೆ ಮತ್ತಿತರ ಬಗ್ಗೆ ನೋಡಲ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಸಮಾರಂಭಕ್ಕೆ ಅನುಮತಿ ಅಗತ್ಯ
  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪೆನ್ನೇಕರ್‌ ಅವರು ಸಭೆ ಸಮಾರಂಭಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಪೊಲೀಸ್‌ ಇಲಾಖೆ ಗಮನಕ್ಕೆ ತರಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳಿಗೆ ಸಲಹೆ ಮಾಡಿದರು. 

 ಸ್ವೀಪ್‌ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮೀಪ್ರಿಯಾ ಅವರು ಮಾದರಿ ನೀತಿ ಸಂಹಿತೆ ಮತ್ತು ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ಬಗ್ಗೆ ಮಾಹಿತಿ ನೀಡಿದರು.  

ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌ ಅವರು ಲೋಕಸಭಾ ಚುನಾವಣೆ ಸಂಬಂಧ ವ್ಯವಸ್ಥಿತವಾಗಿ ಕಾರ್ಯ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹಲವು ಸಲಹೆ ನೀಡಿದರು. 

ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್‌, ಮತ ಗಟ್ಟೆಗಳ ಮೇಲ್ವಿಚಾರಣ ನೋಡಲ್‌ ಅಧಿಕಾರಿ ಗುಡೂರು ಭೀಮಸೇನ, ಚುನಾವಣ ವೆಚ್ಚ ನಿರ್ವಹಣೆಯ ನೋಡಲ್‌ ಅಧಿಕಾರಿ ಎಚ್‌.ಇ.ನಂದ, ಸಿ-ವಿಜಿಲ್‌ ನೋಡಲ್‌ ಅಧಿಕಾರಿ ಷಂಶುದ್ದೀನ್‌, ಮತಗಟ್ಟೆ ಅಧಿಕಾರಿಗಳ ನೇಮಕ ನೋಡಲ್‌ ಅಧಿಕಾರಿ ಮಚ್ಚಾಡೋ, ವಿದ್ಯುನ್ಮಾನ ಮತಯಂತ್ರ ನೋಡಲ್‌ ಅಧಿಕಾರಿ ಕೆ.ಇ.ಇಬ್ರಾಹಿಂ, ಚುನಾವಣ ವೀಕ್ಷಕರ ನೋಡಲ್‌ ಅಧಿಕಾರಿ ಪ್ರಮೋದ್‌, ಜಿಲ್ಲಾ ಮಾಹಿತಿ ಅಧಿಕಾರಿ ಅಜೀತ್‌, ತರಬೇತಿ ನೋಡಲ್‌ ಅಧಿಕಾರಿ ವಾಲ್ಟರ್‌ ಡಿಮೆಲೊ, ವಾಹನ ನಿಯೋಜನೆ ನೋಡಲ್‌ ಅಧಿಕಾರಿ ಶಿವಣ್ಣ ಇತರರು  ಮಾಹಿತಿ ನೀಡಿದರು. 

ಡಿ.ಸಿ. ಸೂಚನೆ 
 ಮತಗಟ್ಟೆಗಳಿಗೆ ಅಂಗವಿಕಲ ಮತದಾರರನ್ನು ಕರೆದುಕೊಂಡು ಬರಲು ವ್ಯವಸ್ಥೆ ಮಾಡುವುದು, ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಮತಗಟ್ಟೆ ಅಧಿಕಾ ರಿಗಳಿಗೆ ತರಬೇತಿ ನೀಡುವುದು. ಮತ್ತಿತರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ನೋಡಲ್‌ ಅಧಿಕಾರಿಗಳಿಗೆ ಡಿ.ಸಿ.  ಸೂಚಿಸಿದರು. 

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.