ಚಾಲಕನ ನಿಯಂತ್ರಣ ತಪ್ಪಿ ಮೇಕೇರಿ ತಿರುವಿನಲ್ಲಿ ಮಗುಚಿದ ಲಾರಿ
Team Udayavani, Mar 1, 2023, 12:14 AM IST
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ಸಂಭವಿಸಿದೆ.
ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿಗೆ ಗೊಬ್ಬರ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮಾಹಿತಿ ಅರಿಯದೆ ಮಡಿಕೇರಿಗೆ ಆಗಮಿಸಿ ಜನರಲ್ ತಿಮ್ಮಯ್ಯ ವೃತ್ತದಿಂದ ವಿರಾಜಪೇಟೆ ಮಾರ್ಗಕ್ಕಾಗಿ ಹುದಿಕೇರಿ ಕಡೆಗೆ ಲಾರಿ ಚಲಾಯಿಸಿದ್ದಾರೆ.
ಮೇಕೇರಿ ಮಸೀದಿ ಬಳಿಯ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಗೊಬ್ಬರ ಚೀಲಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು, ಕೆಲವು ಚೀಲಗಳಿಗೆ ಹಾನಿಯಾಗಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕ್ರೇನ್ಗಳ ಸಹಾಯದಿಂದ ಲಾರಿಯನ್ನು ಮೇಲೆತ್ತಲಾಗಿದೆ. ಕೆಲವು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಸುಣ್ಣ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ