ಲಾರಿಯಿಂದ ದ್ರವ ಪದಾರ್ಥ ಸೋರಿಕೆ: ವರ್ತಕರು,ವಿದ್ಯಾರ್ಥಿಗಳು ಅಸ್ವಸ್ಥ
Team Udayavani, May 24, 2022, 11:46 PM IST
ಮಡಿಕೇರಿ: ಕೇರಳಕ್ಕೆ ಹೋಗುತ್ತಿದ್ದ ಲಾರಿಯಿಂದ ಸೋರಿಕೆಯಾದ ಕೆಂಪು ದ್ರವ ಪದಾರ್ಥದಿಂದ ಸಿದ್ದಾಪುರ, ನೆಲ್ಲಿಹುದಿಕೇರಿ ವಿಭಾಗಗಳಲ್ಲಿ ಕೆಲವು ವಿದ್ಯಾರ್ಥಿಗಳು, ವರ್ತಕರು ಹಾಗೂ ಸಾರ್ವಜನಿಕರು ಅಸ್ವಸ್ಥರಾದ ಘಟನೆ ಸಂಭವಿಸಿದೆ.
ಕುಶಾಲನಗರ, ಸಿದ್ದಾಪುರ, ವೀರಾಜಪೇಟೆ ಮೂಲಕ ನೆರೆಯ ಕೇರಳಕ್ಕೆ ತೆರಳುತ್ತಿದ್ದ ಲಾರಿಯಿಂದ ದ್ರವ ಪದಾರ್ಥ ಸೋರಿಕೆಯಾಗಿದ್ದು, ಕೆಲವರು ಅಸ್ವಸ್ಥಗೊಂಡ ಕಾರಣ ಆತಂಕದ ವಾತಾವರಣ ಸೃಷ್ಟಿಯಾಯಿತು.
ಅತಿಯಾದ ಘಾಟಿನಿಂದ ಕೆಮ್ಮು, ನೆಗಡಿ, ಕಣ್ಣು ಉರಿ ಲಕ್ಷಣಗಳು ಕಂಡು ಬಂದವು. ವೀರಾಜಪೇಟೆ ಮುಖ್ಯ ರಸ್ತೆಯಲ್ಲಿಯೂ ದ್ರವ ಸೋರಿಕೆಯಾಗಿದ್ದು, ಘಾಟು ಬಂದ ಕಾರಣ ಪಟ್ಟಣ ಪಂಚಾಯತ್ ನೀರು ಹಾಕಿ ಶುಚಿಗೊಳಿಸುವ ಪ್ರಯತ್ನ ಮಾಡಿತು.
ಮೆಣಸಿನ ಸಾಸ್?
ಲಾರಿಯಲ್ಲಿ ಸಾಗಿಸುತ್ತಿದ್ದ ಮೆಣಸಿನ ಸಾಸ್ನಿಂದ ಈ ಅವಾಂತರ ಸೃಷ್ಟಿಯಾಯಿತು ಎಂದು ಹೇಳಲಾಗಿದೆ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ರಾಘವೇಂದ್ರ ಅವರು ದ್ರವವನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ.
ಅಸ್ವಸ್ಥಗೊಂಡವರು ಚೇತರಿಸಿಕೊಳ್ಳುತ್ತಿದ್ದು, ಕೊಡಗಿನ ಗಡಿ ಚೆಕ್ಪೋಸ್ಟ್ ಕುಟ್ಟದಲ್ಲಿ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ