ಮಡಿಕೇರಿ: ಆನೆ ದಂತದ ಆಭರಣ ಮಾರಾಟ ಯತ್ನ… ಓರ್ವನ ಸೆರೆ
Team Udayavani, May 26, 2023, 6:20 AM IST
ಮಡಿಕೇರಿ: ಅಮೂಲ್ಯ ಹರಳುಗಳನ್ನು ಒಳಗೊಂಡ ಆನೆ ದಂತದಿಂದ ಮಾಡಿರುವ 2 ಕೈ ಕಡಗಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.
ಕೊಳ್ಳೇಗಾಲ ಮೂಲದ ಪಿ. ಪ್ರದೀಪ್ ಕುಮಾರ್ (42) ಬಂಧಿತ ಆರೋಪಿ. ನಗರದ ಫೀ|ಮಾ| ಕಾರ್ಯಪ್ಪ ವೃತ್ತದಿಂದ ಸಿದ್ದಾಪುರ ಕಡೆಗೆ ತೆರಳುವ ಮಾರ್ಗದ ಬಸ್ ತಂಗುದಾಣದ ಬಳಿ ಆನೆ ದಂತದಿಂದ ಮಾಡಿರುವ ಕೈ ಬಳೆ ಮಾದರಿಯ ನೀಲಿ ಮತ್ತು ಹಸುರು ಬಣ್ಣದ ಅಮೂಲ್ಯ ಹರಳುಗಳನ್ನು ಅಳವಡಿಸಿದ್ದ ಕಡಗಗಳನ್ನು ಮಾರಾಟ ಮಾಡಲು ಆತ ಯತ್ನಿಸುತ್ತಿದ್ದ.
ಖಚಿತ ಮಾಹಿತಿ ಮೇರೆಗೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಸ್ಥಳಕ್ಕೆ ತೆರಳಿದಾಗ ಆರೋಪಿ ಮಾಲು ಸಹಿತ ಸೆರೆ ಸಿಕ್ಕಿದ್ದಾನೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ವಿ. ಶರತ್ಚಂದ್ರ ನಿರ್ದೇಶನದಂತೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ. ವಿಶ್ವನಾಥ್ ಮಾರ್ಗ ದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್ಐ ಸಿ.ಯು. ಸವಿ, ಸಿಬಂದಿಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಉಮೇಶ್, ಸ್ವಾಮಿ ಹಾಗೂ ಮಂಜುನಾಥ ಕಾರ್ಯಾಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’