
ಸಮುದ್ರದ ಅಲೆಗೆ ಸಿಲುಕಿ ಮಡಿಕೇರಿ ಯುವಕನ ಸಾವು
Team Udayavani, Jan 15, 2023, 12:52 AM IST

ಮಡಿಕೇರಿ: ಶಬರಿಮಲೆಗೆ ತೆರಳಿದ್ದ ಮಡಿಕೇರಿ ನಗರದ ಯುವಕನೊಬ್ಬ ಮರಳುವ ಸಂದರ್ಭ ಸಮುದ್ರದಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರು ಬೀಚ್ ನಲ್ಲಿ ನಡೆದಿದೆ.
ನಗರದ ಸುದರ್ಶನ ಬಡಾವಣೆ ನಿವಾಸಿ ಲೋಕೇಶ್ ಅವರ ಪುತ್ರ ಶಶಾಂಕ್ (25) ಮೃತ ಯುವಕ. ಶಬರಿಮಲೆಯಿಂದ ಮರಳುವಾಗ ಯುವಕರ ತಂಡ ಕೇರಳದ ಕಣ್ಣೂರು ಬೀಚ್ಗೆ ಭೇಟಿ ನೀಡಿತ್ತು. ಈ ಸಂದರ್ಭ ಇವರು ಅಲೆಗಳಿಗೆ ಸಿಲುಕಿದರು ಎನ್ನಲಾಗಿದೆ. ರಕ್ಷಿಸುವ ಪ್ರಯತ್ನ ಮಾಡಲಾಯಿತಾದರೂ ಶಶಾಂಕ್ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ತಂದೆ, ತಾಯಿ ಹಾಗೂ ಸಹೋದರಿಯನ್ನು ಅವರು ಅಗಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
