ಮಡಿಕೇರಿ : ಒಂಟಿ ಮನೆಗೆ ಕನ್ನ ಹಾಕಿದ ಆರೋಪಿಯ ಸೆರೆ
Team Udayavani, Jun 6, 2022, 12:45 AM IST
ಮಡಿಕೇರಿ : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ, ಪೊರಾಡು ಗ್ರಾಮದ ತೋಟದ ಮಧ್ಯೆ ಇರುವ ಒಂಟಿ ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶ್ರೀಮಂಗಲ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಪೊಡಮಕಲ್ ಗ್ರಾಮದ ಸಜೇಶ್ ಕೃಷ್ಣ ಬಂಧಿತ ಆರೋಪಿ.
ಈತ ಮೇ 29ರಂದು ಬಿರುನಾಣಿ ಪೊರಾಡು ಗ್ರಾಮದ ಅಣ್ಣೀರ ಎಂ. ಲೋಕೇಶ್ ಹಾಗೂ ಅವರ ಕುಟುಂಬದವರು ತಮ್ಮ ಸಂಬಂಧಿಕರ ಮನೆಗೆ ಹೋಗಿರುವುದನ್ನು ಗಮನಿಸಿ ರಾತ್ರಿ ಮನೆಯ ಹಿಂಬಾಗಿಲು ಹಾಗೂ ಛಾವಣಿಯನ್ನು ಮುರಿದು ಒಳ ನುಗ್ಗಿದ್ದಾನೆ. 14 ಗ್ರಾಂ ಚಿನ್ನ, 48 ಸಾವಿರ ನಗದು ಮತ್ತು ಪೀಚೆಕತ್ತಿಯ ಬೆಳ್ಳಿಯ ಸರವನ್ನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಕೇರಳದ ಕಣ್ಣೂರಿಗೆ ತೆರಳಿ ಆಭರಣ ಮಾರಾಟ ಮಾಡಿ 16 ಸಾವಿರ ರೂ.ನ ಮೊಬೈಲ್ ಹಾಗೂ 50 ಸಾವಿರದ ಬೈಕ್ ಖರೀದಿಸಿದ್ದ. ಆರೋಪಿ ಬೆಳೆಗಾರ ಅಣ್ಣೀರ ಲೋಕೇಶ್ ಅವರ ಮನೆಯಲ್ಲಿ ಕಾರ್ಮಿಕನಾಗಿದ್ದು, ಸಮೀಪದ ಲೈನ್ ಮನೆಯಲ್ಲೇ ವಾಸವಾಗಿದ್ದ. ಕಳವು ಮಾಡಿ ನಾಪತ್ತೆಯಾಗಿದ್ದ ಕಾರ್ಮಿಕ ಸಜೇಶ್ ಕೃಷ್ಣ ಬಗ್ಗೆ ಸಂಶಯ ವ್ಯಕ್ತಪಡಿಸಿ ಬೆಳೆಗಾರ ಲೋಕೇಶ್ ಅವರು ಪೊಲೀಸರಿಗೆ ದೂರು ನೀಡಿದ್ದರು.
ಇದನ್ನೂ ಓದಿ :ಮಡಿಕೇರಿ : ಭೂಕಂಟಕಕ್ಕೆ ಸಿಲುಕಿದ ವಾಲ್ನೂರು -ತ್ಯಾಗತ್ತೂರು ಗ್ರಾಮ ಪಂಚಾಯತ್
ಆರೋಪಿಯಯನ್ನು ಸೆರೆ ಹಿಡಿದ ಪೊಲೀಸರು, ಹಣ ಹಾಗೂ ಆಭರಣ, ಖರೀದಿಸಿದ್ದ ಬೈಕ್, ಖರ್ಚಾಗದೇ ಉಳಿದಿದ್ದ ಹಣ ಮತ್ತು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ನಡೆದು ಕೇವಲ 5 ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…